ಹೆದ್ದಾರಿ ವಿಸ್ತರಣೆಗೆ ಬಲಿಯಾದ ಸುಂದರರಾಮ್ ಶೆಟ್ಟಿ ಸಮಾಧಿ: ದಿನೇಶ್ ಹೆಗ್ಡೆ ಉಳೆಪಾಡಿ ಆಕ್ರೋಶ

ಮಂಗಳೂರು: ಮೂಲ್ಕಿಯ ಬಪ್ಪನಾಡು ದೇವಸ್ಥಾನದ ಪ್ರವೇಶದ್ವಾರದ ಸಮೀಪವಿದ್ದ ಸಮಾಜ ಸೇವಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಹಿರಿಯ ವ್ಯಕ್ತಿತ್ವ ಸುಂದರರಾಮ್ ಶೆಟ್ಟಿ ಅವರ ಸಮಾಧಿಯನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಿರುವುದನ್ನು ಖಂಡಿಸಲಾಗುತ್ತದೆ ಎಂದು ಅಭಿಮಾನಿ ಬಳಗದ ಪರ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಸಮಾಧಿ ತೆರವುಗೊಳಿಸುವ ಮುನ್ನ ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಸ್ಥಳೀಯರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರುವುದು ಬೇಸರದ ಸಂಗತಿ. ಸುಂದರರಾಮ್ ಶೆಟ್ಟಿ […]

Continue Reading

ಭಾರತ ಈಗ ಸೂಪರ್ ಎಕಾನಮಿ, 2031ಕ್ಕೆ ವಿಶ್ವದ ಟಾಪ್ 3 ದೇಶಗಳಲ್ಲಿ ಭಾರತ: ರಾಧಾ ಮೋಹನ್ ದಾಸ್ ಅಗರ್ವಾಲ್

ಮಂಗಳೂರು: ಜಾಗತಿಕ ಆರ್ಥಿಕ ಹಿಂಜರಿತ, ಇಂಧನ ಬಿಕ್ಕಟ್ಟು ಹಾಗೂ ವಿವಿಧ ಅಂತರ ರಾಷ್ಟ್ರೀಯ ಸಂಘರ್ಷಗಳ ನಡುವೆಯೂ ಭಾರತಶೇ 7.7 ರ ಆರ್ಥಿಕ ಬೆಳವಣಿಗೆ ದರವನ್ನು ಸಾಧಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಹಾಗೂ ಗೃಹ ಸಚಿವಾಲಯದ ಸ್ಥಾಯಿ ಸಮಿತಿ ಅಧ್ಯಕ್ಷ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 2013–14ರಲ್ಲಿ 1.9 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದ ಭಾರತ ಈಗ 4.1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆದಿದೆ. ಭಾರತದ […]

Continue Reading

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಸಿಎಂ ಜೋಸೆಫ್ ವಿಜಯ್, ರೇಷ್ಮೆ ಸೀರೆ, ಬೆಳ್ಳಿ ಖಡ್ಗ ಅರ್ಪಣೆ

ಕೊಲ್ಲೂರು (ಉಡುಪಿ ಜಿಲ್ಲೆ): ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಸಿಎಂ ವಿಜಯ್ ಅವರು ದೇವಿಗೆ ವಿಶೇಷ ಕಾಣಿಕೆಗಳನ್ನು ಅರ್ಪಿಸಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಶಕ್ತಿ ದೇವತೆ ಮೂಕಾಂಬಿಕೆಗೆ ಸಿಎಂ ವಿಜಯ್ ಅವರು ರೇಷ್ಮೆ ಸೀರೆ, ಫಲ–ತಾಂಬೂಲ ಅರ್ಪಿಸಿದರು. ಸುಮಾರು ಅರ್ಧ ಗಂಟೆಗಳ ಕಾಲ ದೇವಿಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ […]

Continue Reading

ಮುಖ್ಯಮಂತ್ರಿ ಡಿಕೆಶಿ ನವದೆಹಲಿಯಲ್ಲಿ ಅಮಿತ್ ಶಾ ಭೇಟಿ; ಪೊಲೀಸ್ ಭದ್ರತಾ ಬಲಪಡಿಸಲು ಕೇಂದ್ರದ ನೆರವು ಕೋರಿಕೆ

ನವದೆಹಲಿ: ಮುಖ್ಯಮಂತ್ರಿ ದಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಕಾನೂನು ಸುವ್ಯವಸ್ಥೆ, ಭದ್ರತಾ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಸಂಬಂಧಿಸಿದ ಮಹತ್ವದ ಚರ್ಚೆ ನಡೆಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಅವರು ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರದ ಸಹಕಾರವನ್ನು ಕೋರಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಮತ್ತು ಸೈಬರ್ ಅಪರಾಧಗಳನ್ನು ನಿಯಂತ್ರಿಸುವ ಉದ್ದೇಶದಿಂದ ಸುಮಾರು […]

Continue Reading

ಮಂಗಳೂರಿಗೆ ತಮಿಳುನಾಡು ಸಿಎಂ ವಿಜಯ್, ಆರೋಗ್ಯ ಸಚಿವ ಖಾದರ್ ಸ್ವಾಗತ

ಮಂಗಳೂರು: ಕೊಲ್ಲೂರು ಭೇಟಿ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಗುರುವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮುಖ್ಯಮಂತ್ರಿಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ವಾಗತಿಸಿದರು. ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಇದ್ದರು. ಬಳಿಕ ವಿಜಯ್ ಜೋಸೆಫ್ ಅವರು ರಸ್ತೆ ಮಾರ್ಗದ ಮೂಲಕ ಕೊಲ್ಲೂರಿಗೆ ಪ್ರಯಾಣ ಬೆಳೆಸಿದರು. ಮುಖ್ಯಾಂಶಗಳು * ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡು ಮುಖ್ಯಮಂತ್ರಿ * ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಂದ ಸ್ವಾಗತ * ರಸ್ತೆ ಮಾರ್ಗದ ಮೂಲಕ […]

Continue Reading

ಗೃಹಲಕ್ಷ್ಮೀ ಹಣ ಪಾವತಿ ಸ್ಥಗಿತ, ರಾಜ್ಯ ಸರಕಾರದಿಂದ ಅನ್ಯಾಯ: ಶಾಸಕ ಭರತ್ ಶೆಟ್ಟಿ ಆರೋಪ

ಮಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಲಕ್ಷಾಂತರ ಮಹಿಳೆಯರಿಗೆ ಅನ್ಯಾಯ ಮಾಡಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು. ಚುನಾವಣೆ ಪೂರ್ವದಲ್ಲಿ ಬಿಪಿಎಲ್ ಅಥವಾ ಎಪಿಎಲ್ ಎಂಬ ಭೇದವಿಲ್ಲದೆ ಮಹಿಳೆಯರ ಖಾತೆಗೆ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇದೀಗ ಬಿಪಿಎಲ್ ನೆಪ ಒಡ್ಡಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಹೊರಗಿಡುವ ಮೂಲಕ ಮಹಿಳೆಯರಿಗೆ ದ್ರೋಹ ಮಾಡಲಾಗಿದೆ ಎಂದು ಅವರು ಟೀಕಿಸಿದರು. ಗೃಹಲಕ್ಷ್ಮೀ ಯೋಜನೆಯಡಿ […]

Continue Reading

ದ.ಕ ಸೇರಿದಂತೆ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಪರಿಹಾರ ನೀಡುವಂತೆ ಸಂಸದ ಬ್ರಿಜೇಶ್ ಚೌಟ ಮನವಿ

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರನ್ನು ಕಂಗೆಡಿಸಿರುವ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅಡಿಕೆ ಬೆಳೆಯುವ ಪ್ರಮುಖ ಪ್ರದೇಶಗಳಲ್ಲಿ ಹಳದಿ ಎಲೆ ರೋಗವು ವ್ಯಾಪಕವಾಗಿ ಹರಡಿದ್ದು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸುಮಾರು 16 […]

Continue Reading

ಹನಿಟ್ರ್ಯಾಪ್‌ ಹೆಸರಿನಲ್ಲಿ 2.57 ಕೋಟಿ ವಸೂಲಿ: ಉರ್ವ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ

ಮಂಗಳೂರು: ಗುತ್ತಿಗೆದಾರರೊಬ್ಬರನ್ನು ಹನಿಟ್ರ್ಯಾಪ್‌ ಮಾಡಿ ಅಶ್ಲೀಲ ವಿಡಿಯೊ ಹಾಗೂ ಫೋಟೊಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿ ಇಬ್ಬರನ್ನು ಉರ್ವ ಪೊಲೀಸರು ಬಂಧನ ಮಾಡಿದ್ದಾರೆ. ಗುತ್ತಿಗೆದಾರರ ಜತೆಗೆ ಕೆಲಸ ಮಾಡುತ್ತಿದ್ದ ಜಿತೇಶ್ ಹಾಗೂ ನಿಜಾಮ್ ಯಾನೆ ಇಬ್ರಾಹಿಂ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿಜಾಮ್ ಅವರನ್ನು ಯುವ ಕಾಂಗ್ರೆಸ್ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಗುತ್ತಿಗೆದಾರನೊಂದಿಗೆ […]

Continue Reading

ಮಕ್ಕಳ ಹಕ್ಕುಗಳ ಆಯೋಗಕ್ಕೆ ಅನರ್ಹರ ನೇಮಕ: ರೆನ್ನಿ ಡಿಸೋಜ ತೀವ್ರ ಆಕ್ರೋಶ

ಮಂಗಳೂರು: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಾಗಿ ನೇಮಕಗೊಂಡಿರುವ ಕೆಲವರು ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸಿಲ್ಲ. ಆದ್ದರಿಂದ ಸರ್ಕಾರ ತಕ್ಷಣ ನೇಮಕಾತಿ ಅಧಿಸೂಚನೆ ಹಿಂಪಡೆದು, ಕಾನೂನುಬದ್ಧ ಅರ್ಹತೆ ಹಾಗೂ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಅನುಭವ ಹೊಂದಿರುವವರನ್ನು ನೇಮಕ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಹಕ್ಕುಗಳ ಕುರಿತು ಕಾರ್ಯನಿರ್ವಹಿಸುವ ಸಮಾನಾಸಕ್ತ ಸಂಘಟನೆಗಳು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿವೆ. ಪಡಿ ಸಂಸ್ಥೆಯ ಸಂಚಾಲಕ ರೆನ್ನಿ ಡಿಸೋಜ ಅವರು ಈ ವೇಳೆ ಮಾತನಾಡಿ, ಮಕ್ಕಳ ಕಲ್ಯಾಣ […]

Continue Reading

ಕಾರವಾರ ರೈಲು ನಿಲ್ದಾಣದಲ್ಲಿ ಮಹಿಳೆಯರಿಗಾಗಿ ವಿಶೇಷ ಸೌಲಭ್ಯ, ಪಿಂಕ್ ಬಬಲ್: ಸಂಸದ ಕಾಗೇರಿ ಉದ್ಘಾಟನೆ

ಕಾರವಾರ: ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗೂ ಆರಾಮದಾಯಕ ಪ್ರಯಾಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಕಾರವಾರ ರೈಲು ನಿಲ್ದಾಣದಲ್ಲಿ ಮಹಿಳೆಯರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಪಿಂಕ್ ಬಬಲ್’ ವಿಶ್ರಾಂತಿ ಆಸನ ವ್ಯವಸ್ಥೆ ನಿರ್ಮಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಕಾರವಾರ ರೋಟರಿ ಕ್ಲಬ್ ವತಿಯಿಂದ ಸುಮಾರು ₹1 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ‘ಪಿಂಕ್ ಬಬಲ್’ ಸೌಲಭ್ಯವನ್ನು ಗುರುವಾರ ಉದ್ಘಾಟಿಸಿ ಹಾಗೂ ಕಾರವಾರ–ಮಡಗಾಂವ್ ಖಾಯಂ ರೈಲು ಸೇವೆಯನ್ನು ಸ್ವಾಗತಿಸಿ ಅವರು ಮಾತನಾಡಿದರು. ರೈಲು ಬರುವವರೆಗೆ ಮಹಿಳೆಯರು ಸುರಕ್ಷಿತ ಹಾಗೂ […]

Continue Reading