ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತರ ರಾಷ್ಟ್ರೀಯ ಪ್ರಶಸ್ತಿ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಕುಲಾಧಿಪತಿ ಡಾ. ಶ್ರೀನಿವಾಸ ರಾವ್

ಮಂಗಳೂರು: ಸ್ಥಳೀಯ ಪ್ರತಿಭೆಗಳಿಗೆ ಜಾಗತಿಕ ಅವಕಾಶಗಳನ್ನು ಕಲ್ಪಿಸುವುದು” ಎಂಬ ಧ್ಯೇಯದೊಂದಿಗೆ ಶಿಕ್ಷಣ, ಸಂಶೋಧನೆ ಹಾಗೂ ನವೀನತೆಯ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಶ್ರೀನಿವಾಸ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸಾಧನೆ ಮಾಡಿವೆ ಎಂದು ಕುಲಾಧಿಪತಿ ಡಾ. ಶ್ರೀನಿವಾಸ ರಾವ್ ತಿಳಿಸಿದರು. ಶಿಕ್ಷಣ ತಜ್ಞ ಹಾಗೂ ಸಂಸ್ಥಾಪಕ ದಿವಂಗತ ಡಾ. ಸಿ. ಎ. ಎ. ರಾಘವೇಂದ್ರ ರಾವ್ ಅವರ ದೂರದೃಷ್ಟಿಯ ಫಲವಾಗಿ ಬೆಳೆದಿರುವ ಈ ಸಂಸ್ಥೆಗಳು ಇಂದು ದೇಶದ ಪ್ರಮುಖ ಉನ್ನತ ಶಿಕ್ಷಣ ಸಮೂಹಗಳಲ್ಲಿ ಒಂದಾಗಿ ಗುರುತಿಸಿಕೊಂಡಿವೆ. ಸಂಸ್ಥೆಯು […]

Continue Reading

ತಾಯಿಯ ನೆನಪು ಚಿರಸ್ಥಾಯಿಗೊಳಿಸಿದ ಪುತ್ರರು, ಬಡ ಕುಟುಂಬಕ್ಕೆ 10 ಲಕ್ಷ ವೆಚ್ಚದ ಮನೆ ನಿರ್ಮಾಣ

ಮಂಗಳೂರು: ತಾಯಿಯ ಸ್ಮರಣೆಯನ್ನು ಅರ್ಥಪೂರ್ಣ ಸಾಮಾಜಿಕ ಸೇವೆಯ ಮೂಲಕ ಆಚರಿಸುವ ಅಪರೂಪದ ಉದಾಹರಣೆಗೆ ಮೂಡುಶೆಡ್ಡೆ ಸಾಕ್ಷಿಯಾಯಿತು. ದಿವಂಗತ ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅವರ ಪುತ್ರರು ಕೊರಗ ಸಮುದಾಯದ ಬಡ ಕುಟುಂಬಕ್ಕೆ ನೂತನ ಮನೆ ನಿರ್ಮಿಸಿಕೊಟ್ಟು ಮಾನವೀಯತೆ ಮೆರೆದರು. ಮೂಡುಶೆಡ್ಡೆ ಹೊಸಲಕ್ಕೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನೂತನ ಮನೆಯ ಕೀಲಿಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ, ತಮ್ಮ ತಾಯಿ […]

Continue Reading

ಅಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಅಖಿಲ ಭಾರತ ಫುಟ್‌ಬಾಲ್ ಟೂರ್ನಿ

ಬೆಂಗಳೂರು: 15 ವರ್ಷ ವಯೋಮಿತಿಯೊಳಗಿನ ಬಾಲಕರಿಗಾಗಿ 14 ನೇ ಅಖಿಲ ಭಾರತ ಫುಟ್‌ಬಾಲ್ (5–ಎ–ಸೈಡ್) ಟೂರ್ನಿಯು ಆಗಸ್ಟ್ 23 ಮತ್ತು 24ರಂದು ಇಲ್ಲಿನ ಕುಕ್‌ಟೌನ್‌ ರಶ್ ಅರೆನಾ ಫುಟ್‌ಬಾಲ್ ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರಾದ ಡೆಂಜಿಲ್ ಫರ್ನಾಂಡಿಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಲೆಗಳು, ಕ್ಲಬ್‌ಗಳು, ಕ್ರೀಡಾ ಅಕಾಡೆಮಿಗಳು, ಸಂಘಗಳು ಹಾಗೂ ವಿವಿಧ ಕ್ರೀಡಾ ಗುಂಪುಗಳಿಗೆ ಟೂರ್ನಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. 2011ರ ಜನವರಿ 1 ಅಥವಾ ನಂತರ ಜನಿಸಿದ ಆಟಗಾರರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ. […]

Continue Reading

ಕರಿಕಾಡ ಖ್ಯಾತಿಯ ಕಾಡ ನಟರಾಜ್‌ಗೆ ಡಬಲ್ ಸಂಭ್ರಮ, ಜನ್ಮದಿನದಂದೇ ಅಭಿನಯಕ್ಕೆ ಮೆಚ್ಚುಗೆಯ ಮಳೆ

ಬೆಂಗಳೂರು:‘ ಕರಿಕಾಡ’ ಚಿತ್ರದ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ ನಟ ಕಾಡ ನಟರಾಜ್ ಅವರಿಗೆ ಈ ಬಾರಿಯ ಜನ್ಮದಿನ ಡಬಲ್ ಖುಷಿ ತಂದಿದೆ. ಜೂನ್ 6ರಂದು ಜನ್ಮದಿನ ಆಚರಿಸಿಕೊಂಡ ನಟರಾಜ್, ತಮ್ಮ ಅಭಿನಯಕ್ಕೆ ದೊರೆಯುತ್ತಿರುವ ಮೆಚ್ಚುಗೆಯೇ ಈ ವರ್ಷದ ದೊಡ್ಡ ಉಡುಗೊರೆ ಎಂದು ಸಂತಸ ಹಂಚಿಕೊಂಡಿದ್ದಾರೆ. ಗಿಲ್ಲಿ ವೆಂಕಟೇಶ್ ನಿರ್ದೇಶನದ ‘ಕರಿಕಾಡ’ ಚಿತ್ರದಲ್ಲಿ ಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದ ಕಾಡ ನಟರಾಜ್, ಹಳ್ಳಿ ಯುವಕನ ಪಾತ್ರವನ್ನು ಸಹಜವಾಗಿ ನಿರ್ವಹಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. ಚಿತ್ರ ಬಿಡುಗಡೆಯಾದಾಗಲೇ ಅವರ ಅಭಿನಯಕ್ಕೆ […]

Continue Reading

ಸಿಇಟಿ ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜು ಮೇಲುಗೈ, 15 ರ‍್ಯಾಂಕ್‌; ಹೊಸ ದಾಖಲೆ

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮೆರೆದಿದ್ದಾರೆ. ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಪರೀಕ್ಷೆಯ ಆರು ವಿಭಾಗಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಟಾಪ್-10 ಪಟ್ಟಿಯಲ್ಲಿ ಒಟ್ಟು 15 ರ‍್ಯಾಂಕ್‌ಗಳನ್ನು ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಾಪ್-10 ರ‍್ಯಾಂಕ್‌ಗಳಲ್ಲಿ ಮೂವರು ವಿದ್ಯಾರ್ಥಿಗಳು 3ನೇ ರ‍್ಯಾಂಕ್, ಮೂವರು 4ನೇ ರ‍್ಯಾಂಕ್, ಒಬ್ಬ ವಿದ್ಯಾರ್ಥಿ 6ನೇ ರ‍್ಯಾಂಕ್ , ಮೂವರು 7ನೇ […]

Continue Reading

ಕೆಸಿಇಟಿ ಫಲಿತಾಂಶ, ಶಕ್ತಿ ಕಾಲೇಜಿನ ಬಿಪಿಒ ವಿಭಾಗದಲ್ಲಿ ಲಿಖಿತ್ ಗೌಡಗೆ 221ನೇ ರ‍್ಯಾಂಕ್

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ-2026 ಪರೀಕ್ಷೆಯಲ್ಲಿ ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿ ಲಿಖಿತ್ ಗೌಡ ಎಸ್.ಡಿ. ಅವರು ಬಿಪಿಒ ವಿಭಾಗದಲ್ಲಿ 221ನೇ ರ‍್ಯಾಂಕ್ ಗಳಿಸಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ 2367ನೇ ರ‍್ಯಾಂಕ್ ಪಡೆದಿದ್ದಾರೆ. ಪವನ್ ಮಲಗಿ ನರ್ಸಿಂಗ್ ವಿಭಾಗದಲ್ಲಿ 1428ನೇ ಹಾಗೂ ವೆಟರಿನರಿ ಸೈನ್ಸ್ ವಿಭಾಗದಲ್ಲಿ 1424ನೇ ರ‍್ಯಾಂಕ್ ಗಳಿಸಿದ್ದಾರೆ. ಸುಹಾಸ್ ಅವರು ನರ್ಸಿಂಗ್‌ನಲ್ಲಿ 1661ನೇ, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 1153ನೇ ಹಾಗೂ […]

Continue Reading

ಕೇರಳಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಕರ್ನಾಟಕಕ್ಕೂ ಮಳೆ ಅಬ್ಬರ!ವಾಡಿಕೆಗಿಂತ 3 ದಿನ ತಡ

ಬೆಂಗಳೂರು: ನೈಋತ್ಯ ಮುಂಗಾರು ಗುರುವಾರ ಕೇರಳ ಕರಾವಳಿಯನ್ನು ಪ್ರವೇಶಿಸಿದ್ದು, ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಆರಂಭವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರಡು ದಿನಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಮುಂಗಾರು ಗಾಳಿಯ ಚಲನವಲನ ಮತ್ತು ವಾತಾವರಣದ ಸ್ಥಿತಿಗತಿಗಳನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುವುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವೆಡೆ ಮಳೆಯ ಚಟುವಟಿಕೆ ಚುರುಕುಗೊಂಡಿದ್ದು, […]

Continue Reading

ಮಂಗಳೂರಿನಲ್ಲಿ ಪೆಪ್ಸಿಕೋ ಅಡ್ರಿನಾಲಿನ್ ರಶ್ ಎನರ್ಜಿ ಡ್ರಿಂಕ್ ಬಿಡುಗಡೆ,  ಪ್ಯಾಶನ್ ರಶ್ , ಕ್ಲಾಸಿಕ್ ರಶ್ ಫ್ಲೇವರ್‌

ಮಂಗಳೂರು:ಜಾಗತಿಕವಾಗಿ ಜನಪ್ರಿಯವಾಗಿರುವ ತನ್ನ ಪ್ರೀಮಿಯಂ ಎನರ್ಜಿ ಡ್ರಿಂಕ್ ಬ್ರ್ಯಾಂಡ್ ‘ಅಡ್ರಿನಾಲಿನ್ ರಶ್’ ಅನ್ನು ಪೆಪ್ಸಿಕೋ ಇಂಡಿಯಾ ಮಂಗಳೂರಿನಲ್ಲಿ ಬಿಡುಗಡೆ ಮಾಡಿದೆ. ಪ್ಯಾಶನ್ ರಶ್ ಮತ್ತು ಕ್ಲಾಸಿಕ್ ರಶ್ ಎಂಬ ಎರಡು ಫ್ಲೇವರ್‌ಗಳಲ್ಲಿ ಲಭ್ಯವಿರುವ ಈ ಎನರ್ಜಿ ಡ್ರಿಂಕ್‌ಗೆ ರೂ.60 ದರ ನಿಗದಿಪಡಿಸಲಾಗಿದೆ. ಯುವಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಉತ್ಪನ್ನವನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದೆ ಎಂದು ಕಂಪನಿ ತಿಳಿಸಿದೆ. ಭಾರತದಲ್ಲಿ ಎನರ್ಜಿ ಡ್ರಿಂಕ್ ವಿಭಾಗ ವೇಗವಾಗಿ ಬೆಳೆಯುತ್ತಿದ್ದು, ಗ್ರಾಹಕರ ಆಕಾಂಕ್ಷೆಗಳಿಗೆ ತಕ್ಕ ಉತ್ಪನ್ನಗಳನ್ನು ಒದಗಿಸುವ ಉದ್ದೇಶದಿಂದ ಅಡ್ರಿನಾಲಿನ್ ರಶ್ ಪರಿಚಯಿಸಲಾಗಿದೆ […]

Continue Reading

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದ್ದು, ಬಿಪಿಎಲ್ ಕಾರ್ಡ್ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಇದರ ಪ್ರಯೋಜನ ಪಡೆಯಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಸೇರಿದಂತೆ ಹೃದಯ ಸಂಬಂಧಿತ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ […]

Continue Reading

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಗೆ ಕೆಪಿಸಿಸಿ ಪಟ್ಟ, ಹೈಕಮಾಂಡ್ ಅಧಿಕೃತ ಆದೇಶ

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ. https://www.karavalidailynews.com/wp-content/uploads/2026/06/PR_PCC_Karnataka-1.pdf ಮೂಲ ಕಾಂಗ್ರೆಸಿಗ ಹಾಗೂ ಹೈಕಮಾಂಡ್ ಗೆ ತೀರಾ ಆಪ್ತರಾಗಿರುವ ಹಿಂದುಳಿದ ವರ್ಗದ ಕಾಂಗ್ರೆಸ್ ಪ್ರಮುಖ ಮುಖಂಡ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದೆ. ಬಿ.ಕೆ.ಹರಿಪ್ರಸಾದ್ ಈಡಿಗ ಸಮುದಾಯದವರಾಗಿದ್ದು, ಕಾಂಗ್ರೆಸ್ ​ನ ಪ್ರಬಲ ನಾಯಕರಾಗಿದ್ದಾರೆ‌. ಅಹಿಂದ ಸಮುದಾಯದವರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದ್ದು, ಮಂತ್ರಿ ಮಂಡಳ ರಚನೆ ಆಗುತ್ತಿದ್ದಂತೆ […]

Continue Reading