ಉಡುಪಿ ತಾಯಿ–ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ, 8 ಕೆ.ಜಿ. ಗರ್ಭಕೋಶದ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: ಜಿಲ್ಲಾ ಸರ್ಜನ್ ಡಾ. ಅಶೋಕ್

ಉಡುಪಿ: ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಬರೋಬ್ಬರಿ 8 ಕೆ.ಜಿ. ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದು, ಇದೊಂದು ಸಾಧನೆಯೇ ಸರಿ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ತಿಳಿಸಿದರು. ಮಹಿಳೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಸಮಸ್ಯೆ ನಿವಾರಣೆಯಾಗದ ಹಿನ್ನೆಲೆಯಲ್ಲಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಆಗಮಿಸಿದ್ದರು. ವೈದ್ಯರು ಪರೀಕ್ಷಿಸಿದಾಗ ಅವರ […]

Continue Reading

ವಿಧಾನ ಮಂಡಲಕ್ಕೆ ಡಿಜಿಟಲೀಕರಣದ ಸ್ಪರ್ಶ,130 ಕೋಟಿ ವೆಚ್ಚದಲ್ಲಿ 6 ತಿಂಗಳಲ್ಲಿ ಕಾಗದರಹಿತ ಕಾರ್ಯಶೈಲಿ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ರಾಜ್ಯ ವಿಧಾನಮಂಡಲದ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ಆರು ತಿಂಗಳೊಳಗೆ ವಿಧಾನಸಭೆ ಹಾಗೂ ವಿಧಾನಪರಿಷತ್ ಸಂಪೂರ್ಣ ಕಾಗದರಹಿತ ವ್ಯವಸ್ಥೆಗೆ ಪರಿವರ್ತನೆ ಆಗಲಿವೆ ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಧಿವೇಶನದ ವೇಳೆ ಸದಸ್ಯರಿಗೆ ಮುದ್ರಿತ ಕಡತಗಳು, ಪ್ರಶ್ನೋತ್ತರ ಪಟ್ಟಿ, ಕಾರ್ಯಸೂಚಿ ಹಾಗೂ ವಿಧೇಯಕಗಳ ಪ್ರತಿಗಳನ್ನು ವಿತರಿಸುವ ಬದಲು, ಇನ್‌ ಬಿಲ್ಟ್ ಅಪ್ಲಿಕೇಶನ್ ಹೊಂದಿರುವ ಐಪ್ಯಾಡ್‌ಗಳ ಮೂಲಕವೇ ಎಲ್ಲ ಮಾಹಿತಿ ಒದಗಿಸಲಾಗುವುದು. ಈ ಮೂಲಕ ಕೋಟ್ಯಂತರ ರೂಪಾಯಿ ಮುದ್ರಣ ವೆಚ್ಚ […]

Continue Reading

ಎಕ್ಸ್ ಪರ್ಟ್ ಪಿಯು ಕಾಲೇಜು: ಜೆಇಇ ಅಡ್ವಾನ್ಸ್ಡ್‌ನಲ್ಲಿ ವಿದ್ಯಾರ್ಥಿಗಳ ಸಾಧನೆಯ ಗರಿ

ಮಂಗಳೂರು: ದೇಶದ ಪ್ರತಿಷ್ಠಿತ ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳ (ಐಐಟಿ) ಪ್ರವೇಶಕ್ಕಾಗಿ ನಡೆದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಜನರಲ್ ಮೆರಿಟ್ ವಿಭಾಗದಲ್ಲಿ ಸುಹಾಸ್ ಬಸನಗೌಡ ಬಾಲನಗೌಡ್ರ 2,593ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅರಳೆ ವಿರೂಪಾಕ್ಷಿ 7,885 ನೇ ರ‍್ಯಾಂಕ್, ನಿಖಿಲ್ ಭೂಷಣ್ ಶ್ರೀನಿವಾಸ್ 9,150ನೇ ರ‍್ಯಾಂಕ್ ಹಾಗೂ ಪ್ರಖ್ಯಾತ್ ತಿರುಪತಿರಡ್ಡಿ ನೀಲಣ್ಣವರ್ 9,806 ನೇ ರ‍್ಯಾಂಕ್ ಗಳಿಸಿದ್ದಾರೆ. ಕ್ಯಾಟಗರಿ ವಿಭಾಗದಲ್ಲಿ […]

Continue Reading

ಶಾರದಾ ಪಿಯು ಕಾಲೇಜಿನಲ್ಲಿ ಮಾರ್ಗದರ್ಶನ ಕಾರ್ಯಕ್ರಮ, ಮೌಲ್ಯ ಶಿಕ್ಷಣದ ಪಾಠ ಮಾಡಿದ ಡಾ. ಎಂ.ಬಿ. ಪುರಾಣಿಕ್

ತಲಪಾಡಿ: ಶಾರದಾ ವಿದ್ಯಾನಿಕೇತನ ಪಿ.ಯು. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಮಾರ್ಗದರ್ಶನ ಕಾರ್ಯಕ್ರಮ ಕಾಲೇಜಿನ ಭೂ ವರಾಹ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾರದಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗಾಗಿ ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪದೊಂದಿಗೆ ಅಧ್ಯಯನ ನಡೆಸಬೇಕು. ಸಂಸ್ಥೆ ಒದಗಿಸುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕೆಂದು ಕರೆ ನೀಡಿದರು. ನಿರ್ದೇಶಕ ಸಮೀರ್ ಪುರಾಣಿಕ್ […]

Continue Reading

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ, ಜೂನ್ 1 ರಿಂದಲೇ ಎಫೆಕ್ಟ್, ತಿಂಡಿ ಬೆಲೆ ಏರಿಕೆ ಸಾಧ್ಯತೆ!

ಬೆಂಗಳೂರು: ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆ ಬಿಸಿ ಮುಟ್ಟಲಿದೆ. 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂಪಾಯಿಗಳು ಹೆಚ್ಚಳ ಆಗಿದೆ. ಪರಿಷ್ಕೃತ ದರ ಜೂನ್ 1 ರಿಂದಲೇ ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂಪಾಯಿಗೆ ಏರಿಕೆ ಆಗಿದೆ. ಹೋಟೆಲ್, ರೆಸ್ಟೋರೆಂಟ್ ಮತ್ತು ಉದ್ಯಮಗಳಿಗೆ ಈ ದರ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ […]

Continue Reading

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ತೆರೆ: ಸರ್ಫಿಂಗ್ ಓಪನ್‌ನಲ್ಲಿ ಕಮಲಿ ಮೂರ್ತಿಗೆ ಡಬಲ್ ಕಿರೀಟ

ಮಂಗಳೂರು: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಅಂತಿಮ ದಿನ ತಮಿಳುನಾಡಿನ ಯುವ ಸರ್ಫರ್ ಕಮಲಿ ಮೂರ್ತಿ ಮಹಿಳೆಯರ ಓಪನ್ ಹಾಗೂ 18 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಡಬಲ್ ಸಾಧನೆ ಮಾಡಿದ್ದಾರೆ. ಪುರುಷರ ಓಪನ್ ವಿಭಾಗದಲ್ಲಿ ತಮಿಳುನಾಡಿನ ಕಿಶೋರ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, 18 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥ್ವೀಪ್ ಪೂಜಾರ್ ಗೆದ್ದು ಕರ್ನಾಟಕಕ್ಕೆ ಟೂರ್ನಿಯ ಏಕೈಕ ಪ್ರಶಸ್ತಿ ತಂದುಕೊಟ್ಟರು. 14 ವರ್ಷದೊಳಗಿನ (ಗ್ರೋಮ್ಸ್) ವಿಭಾಗದಲ್ಲಿ ಹರೀಶ್ ಪಿ ಮತ್ತು ಧಮಯಂತಿ […]

Continue Reading

ಬ್ಯಾಕ್ ಟು ಬ್ಯಾಕ್ ಆರ್ ಸಿಬಿ ಗೆಲುವಿನ ಪತಾಕೆ, ಐಪಿಎಲ್ ನಲ್ಲಿ ಮತ್ತೇ ಅಜೇಯ, ಕೊಹ್ಲಿ ಆಟಕ್ಕೆ ಪ್ರೇಕ್ಷಕರ ಪಿಧಾ

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈಗ ಸತತ 2 ನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಅಹಮದಾಬಾದ್‌ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್​​ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಸಲವೂ ಕಪ್ ನಮ್ಮದೇ ಎಂದು ಸಾರಿದ್ದ ಅಭಿಮಾನಿಗಳ ಸಂಭ್ರಮವೀಗ ಮುಗಿಲು ಮುಟ್ಟಿದೆ. ಆರ್​​ಸಿಬಿ ಜಯಭೇರಿ […]

Continue Reading

ಧರ್ಮಸ್ಥಳದಲ್ಲಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

 ಉಜಿರೆ: ಗ್ರಾಮೀಣ ಮಹಿಳೆಯರ ಸಂಕಷ್ಟದ ಬದುಕನ್ನು ಕಣ್ಣಾರೆ ಕಂಡ ಬಳಿಕ ಅವರಿಗೆ ಶಾಶ್ವತ ಜೀವನೋಪಾಯ ಕಲ್ಪಿಸುವ ಉದ್ದೇಶದಿಂದ ಆರಂಭವಾದ ಪ್ರಯತ್ನವೇ ‘ಸಿರಿ’ ಎಂಬ ಮಹಿಳಾ ಆರ್ಥಿಕ ಸಬಲೀಕರಣದ ಚಳವಳಿಯಾಗಿ ಬೆಳೆದು ಬರುತ್ತಿದೆ ಎಂದು ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಹೇಳಿದರು. ಬೆಳ್ತಂಗಡಿಯ ಮಾತೃಶ್ರೀ ಸಿರಿ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನೆ ಮಾಡಿ ಭಾನುವಾರ ಧರ್ಮಸ್ಥಳದಲ್ಲಿ ಅವರು ಮಾತನಾಡಿ, ಸರ್ವಧರ್ಮೀಯರನ್ನೂ, ಎಲ್ಲ ಜಾತಿಯವರನ್ನೂ ಸಮಾನತೆ ಮತ್ತು ಗೌರವಭಾವದಿಂದ ಪರಿಗಣಿಸಿ ಸಾಮಾಜಿಕ ಸಾಮರಸ್ಯದ ಜತೆಗೆ ಅವರು ಮಾಡುತ್ತಿರುವ ಸೇವೆ ಆದರ್ಶ […]

Continue Reading

ಮೂಡುಬಿದಿರೆ ಆಳ್ವಾಸ್ ಪದವಿ ಪ್ರದಾನ ಸಮಾರಂಭ, ಪದವಿ ಪ್ರಮಾಣ ಪತ್ರಕ್ಕಿಂತ ಮೌಲ್ಯಗಳೇ ಶ್ರೇಷ್ಠ ಎಂದ ಡಾ. ಚಿನ್ನಪ್ಪ ಗೌಡ

ಮೂಡುಬಿದಿರೆ : ಶಿಕ್ಷಣದ ನಿಜವಾದ ಉದ್ದೇಶವು ಕೇವಲ ಪದವಿ ಪಡೆಯುವುದಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಾಗಿದೆ. ಪದವಿ ಪ್ರಮಾಣಪತ್ರವು ಕೇವಲ ಒಂದು ಕಾಗದದ ತುಣುಕಾಗಿದ್ದು, ಅದಕ್ಕೆ ನಿಜವಾದ ಮೌಲ್ಯ ದೊರೆಯುವುದು ವ್ಯಕ್ತಿಯ ಜ್ಞಾನ, ಸಾಮರ್ಥ್ಯ, ಪ್ರಾಮಾಣಿಕತೆ ಹಾಗೂ ಜೀವನ ಮೌಲ್ಯಗಳಿಂದ ಮಾತ್ರ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶನಿವಾರ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಪದವಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್‌ನ ವಿವಿಧ ಶಿಕ್ಷಣ ಸಂಸ್ಥೆಗಳ […]

Continue Reading

ಕೈ ಹೈಕಮಾಂಡ್ ಚಾಣಾಕ್ಷ ನಡೆ, ಸಿದ್ದು ಬಾಯಿಂದಲೇ ಡಿಕೆಶಿ ಹೆಸರು ಪ್ರಸ್ತಾಪ, ಡಿಕೆಶಿ ಸಿಎಲ್ ಪಿಗೆ ಅವಿರೋಧ ಆಯ್ಕೆ

ಬೆಂಗಳೂರು: ಕೈ ಹೈಕಮಾಂಡ್ ಕೊನೆಗೂ ತನ್ನ ಚಾಣಾಕ್ಷ ನಡೆಯಿಂದ ಅಧಿಕಾರ ಹಂಚಿಕೆಯ ಬಿಕ್ಕಟ್ಟನ್ನು ಪರಿಹಾರ ಮಾಡುವಲ್ಲಿ ಯಶಸ್ಸು ಕಂಡಿದೆ. ಸಿದ್ದರಾಮಯ್ಯ ಅವರಿಂದಲೇ ಡಿಕೆಶಿ ಹೆಸರನ್ನು ಸಿಎಂ ಪಟ್ಟಕ್ಕೆ ಹೇಳಿಸಿದ್ದು ಅಚ್ಚರಿಯ ನಡೆಗೆ ಕಾರಣ ಆಗಿದೆ. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಡಿಕೆಶಿಗೆ ಬೆಂಬಲ ಸೂಚನೆ ಮಾಡಿದರು. ಡಿಕೆಶಿ ಅವರು ಸರಕಾರ ರಚನೆಗೆ ಹಕ್ಕು ಮಂಡಿಸುವುದಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿದರು. ಬುಧವಾರ ಸಿಎಂ ಆಗಿ ಡಿಕೆಶಿ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮಾತನಾಡಿದ ಕೆಸಿ […]

Continue Reading