ಮಂಗಳೂರಿಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಆಗಮನ, ಸ್ವಾಗತಿಸಿದ ಜಿಲ್ಲಾಡಳಿತ

ಮಂಗಳೂರು: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು. ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪ ರಾಷ್ಟ್ರಪತಿ ಅವರನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿದರು. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಬಳಿಕ ಅವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿ, ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡಿದರು. ಭಾನುವಾರ […]

Continue Reading

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ : ಅಲೆಗಳ ವಯ್ಯಾರ ಅಬ್ಬರದಲ್ಲಿ ಸರ್ಫರ್ ಗಳ ತೀವ್ರ ಹಣಾಹಣಿ

ಮಂಗಳೂರು: ಇಲ್ಲಿನ ತಣ್ಣೀರು ಭಾವಿಯಲ್ಲಿ ನಡೆಯುತ್ತಿರುವ 7 ನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಸ್ಪರ್ಧೆಯ 2ನೇ ದಿನ ಪುರುಷರ ಓಪನ್ ವಿಭಾಗದ ಸೆಮಿಫೈನಲಿಸ್ಟ್‌ಗಳು ಭರ್ಜರಿ ಪ್ರದರ್ಶನ ನೀಡಿದರು. ಶನಿವಾರ ನಡೆದ ಐದು ವಿಭಾಗಗಳಲ್ಲಿ ಒಟ್ಟು ಆರು ಕ್ವಾರ್ಟರ್‌ಫೈನಲ್ ಹಾಗೂ ಆರು ಸೆಮಿಫೈನಲ್ ಪಂದ್ಯಗಳು ನಡೆದವು. ಪುರುಷರ ಮುಕ್ತ ವಿಭಾಗದ ಕ್ವಾರ್ಟರ್‌ ಫೈನಲ್‌ ನಲ್ಲಿ ಕೇರಳದ ರಮೇಶ್ ಬೂದಿಹಾಳ್ 14.83 ಅಂಕ ಗಳಿಸಿ ಅಗ್ರಸ್ಥಾನ ದಾಖಲಿಸಿದರು. ಶ್ರೀಕಾಂತ್ ಡಿ 13 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, […]

Continue Reading

ಸೇವೆಯಲ್ಲಿ ಇರುವ ಶಿಕ್ಷಕರಿಗೂ ಟಿಇಟಿ ಕಡ್ಡಾಯ, ಮರುಪರಿಶೀಲನಾ ಅರ್ಜಿಗಳ ವಜಾ; 2028 ರ ಅಗಸ್ಟ್‌ 31 ರವರೆಗೆ ಸುಪ್ರೀಂ ಗಡುವು ವಿಸ್ತರಣೆ

ನವದೆಹಲಿ: ಸೇವೆಯಲ್ಲಿ ಇರುವ ಶಿಕ್ಷಕರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕಡ್ಡಾಯ ಎಂಬ ತನ್ನ ಹಿಂದಿನ ತೀರ್ಪ ಅನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಎತ್ತಿ ಹಿಡಿದಿದೆ. 2025ರ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ನ್ಯಾಯಾಲಯ, ಟಿಇಟಿ ಅರ್ಹತೆ ಪಡೆಯಲು ಶಿಕ್ಷಕರಿಗೆ 2028 ರ ಅಗಸ್ಟ್‌ 31 ರವರೆಗೆ ಕಾಲಾವಕಾಶ ನೀಡಿದೆ. ಮಕ್ಕಳ ಗುಣಮಟ್ಟದ ಶಿಕ್ಷಣದ ಹಕ್ಕು ಸಂರಕ್ಷಿಸುವ ದೃಷ್ಟಿಯಿಂದ ಟಿಇಟಿ ಅಗತ್ಯವಾಗಿದ್ದು, ನಿಗದಿತ ಅವಧಿಯೊಳಗೆ ಅರ್ಹತೆ ಪಡೆಯದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು ಅವಕಾಶವಿರುವುದಿಲ್ಲ ಎಂದು […]

Continue Reading

ಧರ್ಮಸ್ಥಳ: ವೃದ್ಧೆಗೆ ಪ್ರಸಾದ, ಜ್ಯೂಸ್ ನೀಡಿ ಅಸ್ವಸ್ಥ ಮಾಡಿ ಚಿನ್ನಾಭರಣ ಅಪಹರಣ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ಕೊಟ್ಟು ವೃದ್ಧೆಯನ್ನು ಅಸ್ವಸ್ಥರನ್ನಾಗಿ ಮಾಡಿ ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಅಪಹರಣ ಮಾಡಿ ಪರಾರಿ ಆಗಿರುವ ಘಟನೆ ನಡೆದಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ.ಕೆ (70) ಎಂಬುವವರು ಮೇ 23 ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಇರುವ ತನ್ನ ಚಿಕ್ಕಮ್ಮನ ಮಗಳ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಬಂದಿದ್ದರು. ಮೇ […]

Continue Reading

ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಅಮ್ಮನ ದರ್ಶನಕ್ಕೆ ಬೋಳೂರಿಗೆ ಹರಿದು ಬಂದ ಭಕ್ತಸಾಗರ

ಮಂಗಳೂರು: ವಿನಯವೇ ಯಶಸ್ಸಿನ ನಿಜವಾದ ಅಡಿಪಾಯ. ವಿನಯವಿರುವೆಡೆ ಮಾತ್ರ ಜೀವನದ ಸಾರ್ಥಕತೆ ಅಡಗಿದೆ ಎಂದು ಸದ್ಗುರು ಮಾತಾ ಅಮೃತಾನಂದಮಯಿ ದೇವಿ ಹೇಳಿದರು. ಮಂಗಳೂರಿನ ಬೋಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದ ಮಂಗಳೂರು ಬ್ರಹ್ಮಸ್ಥಾನ ಮಹೋತ್ಸವದ ಎರಡನೇ ದಿನ ಶುಕ್ರವಾರ ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ಜೀವನದ ಏರುಪೇರುಗಳನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಜೀವನವು ನದಿಯ ಹರಿವಿನಂತಿದ್ದು, ಪ್ರತಿಯೊಂದು ಅನುಭವಕ್ಕೂ ತನ್ನದೇ ಆದ ಉದ್ದೇಶವಿದೆ. ಶರಣಾಗತಿ ಭಾವನೆಯೊಂದಿಗೆ ಬದುಕಿದಾಗ ಮಾತ್ರ ಆತ್ಮಸಂತೃಪ್ತಿ ದೊರೆಯುತ್ತದೆ […]

Continue Reading

ಭಟ್ಕಳ ಶಿರಾಲಿ ಸಮೀಪದ ಚಿಪ್ಪೆಕಲ್ಲು ದುರಂತ, 11 ಮಂದಿ ಮೃತ ಕುಟುಂಬದ ಸಂತ್ರಸ್ತರಿಗೆ ತಲಾ ₹16.50 ಲಕ್ಷ ಪರಿಹಾರ: ಮಾನವೀಯತೆ ಮೆರೆದ ಜಿಲ್ಲಾಡಳಿತ, ಮಾಜಿ ಸಚಿವ ಮಂಕಾಳ  ವೈದ್ಯ

ಕಾರವಾರ: ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ನದಿಯಲ್ಲಿ ಚಿಪ್ಪೆಕಲ್ಲು ತೆಗೆಯಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ 11 ಮಂದಿಯ ಕುಟುಂಬಗಳಿಗೆ ಮಾಜಿ ಸಚಿವ ಮಂಕಾಳ ಎಸ್ ವೈದ್ಯ ಅವರು ಶುಕ್ರವಾರ ಪರಿಹಾರದ ಚೆಕ್ ವಿತರಿಸಿದರು. ಮೃತರ ವಾರಸುದಾರರ ಮನೆಗಳಿಗೆ ಭೇಟಿ ನೀಡಿ ತಲಾ ₹16.50 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದರು. https://www.karavalidailynews.com/wp-content/uploads/2026/05/1-1.mp4 ಬಳಿಕ ಮಾತನಾಡಿದ ಅವರು, ಕಪ್ಪೆಚಿಪ್ಪು ದುರಂತದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹5 ಲಕ್ಷದಂತೆ ಒಟ್ಟು ₹55 […]

Continue Reading

ತಣ್ಣೀರುಭಾವಿ: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ಭರ್ಜರಿ ಚಾಲನೆ, ಜಿಲ್ಲಾಧಿಕಾರಿ ದರ್ಶನ್ ಚಾಲನೆ

ಮಂಗಳೂರು: ಇಲ್ಲಿನ ನಗರದ ತಣ್ಣೀರುಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಆರಂಭವಾದ 7 ನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಗೆ ಅದ್ದೂರಿ ಚಾಲನೆ ಸಿಕ್ಕಿದೆ. ರಾಷ್ಟ್ರೀಯ ಚಾಂಪಿಯನ್‌ ಷಿಪ್ ಸರಣಿ ಪ್ರಮುಖ ಹಂತ ಆಗಿರುವ ಈ ಟೂರ್ನಿ, ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವ ಪಡೆದಿದ್ದು, ಉತ್ತಮ ಹವಾಮಾನ ಹಾಗೂ ಅಬ್ಬರದ ಅಲೆಗಳ ನಡುವೆ ಸ್ಪರ್ಧೆಗಳು ಆರಂಭಗೊಂಡವು. ಇದಕ್ಕೂ ಮೊದಲು ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಜಿಲ್ಲಾಧಿಕಾರಿ […]

Continue Reading

ತಣ್ಣೀರುಭಾವಿ: ಸರ್ಫಿಂಗ್ ಸ್ಪರ್ಧೆ ಸರ್ಫರ್‌ಗಳ ತೀವ್ರ ಹಣಾಹಣಿ; ‌ಕಮಲಿ ಮೂರ್ತಿ ಶುಭಾರಂಭದ ಮಿಂಚು

ಮಂಗಳೂರು: ಇಲ್ಲಿನ ನಗರದ ತಣ್ಣೀರುಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಆರಂಭವಾದ ಏಳನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ 2026ರ ಮೊದಲ ದಿನವೇ ದೇಶದ ಪ್ರಮುಖ ಸರ್ಫರ್‌ಗಳು ಅಲೆಗಳ ನಡುವೆ ರೋಮಾಂಚಕ ಪ್ರದರ್ಶನ ನೀಡಿದರು. ರಾಷ್ಟ್ರೀಯ ಚಾಂಪಿಯನ್‌ ಷಿಪ್ ಸರಣಿ ಪ್ರಮುಖ ಹಂತ ಆಗಿರುವ ಈ ಟೂರ್ನಿ, ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವ ಪಡೆದಿದ್ದು, ಉತ್ತಮ ಹವಾಮಾನ ಹಾಗೂ ಅಬ್ಬರದ ಅಲೆಗಳ ನಡುವೆ ಸ್ಪರ್ಧೆಗಳು ಆರಂಭಗೊಂಡವು. ಮಹಿಳೆಯರ ಮುಕ್ತ ವಿಭಾಗದಲ್ಲಿ ಕಮಲಿ […]

Continue Reading

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ, ಸರಕಾರ ವಿಸರ್ಜನೆ, ಸಿದ್ದು ಇನ್ಮುಂದೇ ಹಂಗಾಮಿ ಸಿಎಂ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದ್ದ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ಗುರುವಾರ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದು, ಸಿದ್ದರಾಮಯ್ಯ ಅವರು ಹಂಗಾಮಿ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಅವರ ಇಡೀ ಸಂಪೂರ್ಣ ಸಂಪುಟವನ್ನಿ ವಿಸರ್ಜನೆ ಮಾಡಿದ್ದು, ಎಲ್ಲರೂ ಮಾಜಿ ಆಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು […]

Continue Reading

ಸೆಮಿಕಂಡಕ್ಟರ್ ಶಿಕ್ಷಣಕ್ಕೆ ಮಂಗಳೂರಿನ ಸಹ್ಯಾದ್ರಿ ಕಾಲೇಜು–ಅನ್ಮಯ ಟೆಕ್ನಾಲಜೀಸ್ ಒಪ್ಪಂದ

ಮಂಗಳೂರು: ಸೆಮಿಕಂಡಕ್ಟರ್‌ ಕೇಂದ್ರಿತ ತಾಂತ್ರಿಕ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್‌ (ಎಸ್‌ಸಿಇಎಂ)ನ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗವು ಅನ್ಮಯ ಟೆಕ್ನಾಲಜೀಸ್ ಸಂಸ್ಥೆಯೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ. ಎಫ್ ಪಿಜಿಎ -ಸ್ಥಳೀಯ ಮತ್ತು ಎಂಬೆಡೆಡ್ ಹಾರ್ಡ್‌ವೇರ್ ಪರಿಹಾರಗಳಲ್ಲಿ ಪರಿಣತಿ ಹೊಂದಿರುವ ಅನ್ಮಯ ಟೆಕ್ನಾಲಜೀಸ್ ಜತೆಗೆ ಮಾಡಿಕೊಂಡಿರುವ ಈ ಸಹಭಾಗಿತ್ವವು ವಿದ್ಯಾರ್ಥಿಗಳಿಗೆ ಸೆಮಿಕಂಡಕ್ಟರ್ ತಂತ್ರಜ್ಞಾನ, ವಿಎಲ್ ಎಸ್ ಐ ವಿನ್ಯಾಸ, ಎಫ್ ಪಿಜಿಎ ಅಭಿವೃದ್ಧಿ, ಎಂಬೆಡೆಡ್ ಸಿಸ್ಟಮ್‌, […]

Continue Reading