ಮಂಗಳೂರಿನಲ್ಲಿ ಬ್ರಹ್ಮಸ್ಥಾನಂ ಮಹೋತ್ಸವ, ಅಮ್ಮನ ದರ್ಶನ ಪಡೆದ ಭಕ್ತರ ಪುಳಕ, ವಿವಿಧ ಸಮಾಜಮುಖಿ ಕಾರ್ಯಗಳಿಗೆ ಚಾಲನೆ

ಮಂಗಳೂರು: ಮಕ್ಕಳಲ್ಲಿ ಪ್ರಕೃತಿ, ಸಕಲ ಜೀವಿಗಳು ಹಾಗೂ ಮಾನವ ಸಮುದಾಯದೊಂದಿಗೆ ಸಹಬಾಳ್ವೆ ನಡೆಸುವ ಮನೋಭಾವ ಬೆಳೆಸಬೇಕು ಎಂದು ಮಾತಾ ಅಮೃತಾನಂದಮಯಿ ದೇವಿ ಅವರು ಹೇಳಿದರು. ಮಂಗಳೂರಿನ ಬೋಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದ ಬ್ರಹ್ಮಸ್ಥಾನಂ ಮಹೋತ್ಸವದಲ್ಲಿ ಭಕ್ತರನ್ನು ಉದ್ದೇಶಿಸಿ ಅವರು ಮಾತನಾಡಿ, ಮಾನವರು ಪರಸ್ಪರ ಸಹಕಾರದಿಂದ ಬದುಕುವುದನ್ನು ಕಲಿಯಬೇಕು. ಜತೆಗೆ ಪ್ರಕೃತಿಯೊಂದಿಗೆ ಸ್ನೇಹಭಾವ ಮತ್ತು ದೇವರೊಂದಿಗೆ ಆಧ್ಯಾತ್ಮಿಕ ಸಂಪರ್ಕ ಬೆಳೆಸಿಕೊಳ್ಳಬೇಕು ಎಂದರು. ಕೋವಿಡ್ ಮಹಾಮಾರಿ, ಪ್ರಕೃತಿ ವಿಕೋಪಗಳು ಹಾಗೂ ಹವಾಮಾನ ಬದಲಾವಣೆಗಳು ಮಾನವಕುಲವು ಪ್ರಕೃತಿಯೊಂದಿಗಿನ ತನ್ನ ಸಂಬಂಧವನ್ನು […]

Continue Reading

ನಾನು ರಾಜ್ಯ ರಾಜಕಾರಣದ‌ಲ್ಲಿಯೇ ಇರುತ್ತೇನೆ, ಸಕ್ರಿಯ ಆಗಿರುವೆ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ರಾಜ್ಯ ರಾಜಕಾರಣದಲ್ಲಿಯೇ ಇರುತ್ತೇನೆ, ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ಸಕ್ರಿಯ ರಾಜಕಾರಣವನ್ನು ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಕಾಂಗ್ರೆಸ್ ನನಗೆ ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ಕೊಟ್ಟಿದೆ. ವಿರೋಧ ಪಕ್ಷ ನಾಯಕ ಸ್ಥಾನವನ್ನೂ ಕೊಟ್ಟಿದೆ, ಇದಕ್ಕಾಗಿ ನನ್ನ ಮೇಲೆ ನಂಬಿಕೆಯಿಟ್ಟ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಅಭಿನಂದನೆ ಹೇಳುತ್ತೇನೆ. ನಾನು ಕೊನೆಯ ಉಸಿರು ಇರೋವರೆಗೂ ರಾಜಕಾರಣದಲ್ಲಿ ಸಕ್ರಿಯ ಆಗಿರುತ್ತೇನೆ. ಕೋಮುವಾದಿ ಶಕ್ತಿಗಳ ವಿರುದ್ಧ […]

Continue Reading

ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದ ಆಶೀರ್ವಾದ ಡಿಕೆಶಿ, ಜಾಲತಾಣದಲ್ಲಿ ಭಾವಚಿತ್ರ ವೈರಲ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳು ಜೋರಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. ಗುರುವಾರ ಬೆಳಗ್ಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್ ವೇಳೆ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಬ್ಬಿಕೊಂಡು ಅಲಿಂಗನ ಮಾಡಿಕೊಂಡರು. ಬಳಿಕ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ದೃಶ್ಯಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣ ಆಗಿವೆ.  

Continue Reading

ನಾನೇ ರಾಜೀನಾಮೆ ನೀಡಿದ್ದೇನೆ, ಯಾವುದೇ ಒತ್ತಡ ಇಲ್ಲ, ಹೈಕಮಾಂಡ್ ಹೇಳಿದಂತೆ ನಡೆದುಕೊಂಡಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜಕೀಯ ಹೈಡ್ರಾಮಾದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದು, ನಾನೇ ಸ್ವಯಂ ಆಗಿ ಹೈಕಮಾಂಡ್ ನಿರ್ದೇಶನದ ಮೇಲೆ ರಾಜೀನಾಮೆ ನೀಡಿದ್ದೇನೆ. ಇಲ್ಲಿ ಯಾರ ಒತ್ತಡವು ಇಲ್ಲ, ಹೈಕಮಾಂಡ್ ಅವರು ಹೇಳಿದಾ‌ಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ ಅದರಂತೆ ನಡೆದುಕೊಂಡಿದ್ದೇನೆ, ಇದರಲ್ಲಿ ಯಾವುದೇ ಬೇಸರ, ಒತ್ತಡ ಇಲ್ಲ ಎಂದು ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಸುಧೀರ್ಘವಾಗಿ ಮುಖ್ಯಮಂತ್ರಿ ಆಗಿ, ವಿರೋಧ ಪಕ್ಷದ […]

Continue Reading

ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ 29 ರಿಂದ

ಮಂಗಳೂರು: ಇದೇ 29 ರಿಂದ 31 ರವರಿಗೆ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ ನಡೆಯುತ್ತಿದ್ದು, ಇದಕ್ಕಾಗಿ ಐಚಿ ನಗೋಯಾ ಏಷ್ಯನ್ ಗೇಮ್ಸ್ 2026 ನಲ್ಲಿ ಸರ್ಫಿಂಗ್‌ನಲ್ಲಿ ಭಾರತದ ಸ್ಪರ್ಧಿಗಳು ಚೊಚ್ಚಲ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದು, ಸರ್ಫಿಂಗ್ ಸ್ಪರ್ಧಿಗಳಿಗೆ ಒಂದು ರೀತಿಯ ಹಬ್ಬದ ವಾತಾವರಣ ಕಟ್ಟಿಕೊಡುವುದಕ್ಕೆ ವೇದಿಕೆ ಸಿದ್ದವಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಜತೆಗೆ, ಎನ್‌ಎಂಶಿಎ ಸಹಭಾಗಿತ್ವದಲ್ಲಿ ಮೂರು […]

Continue Reading

ಇಂದಿನಿಂದ ಕದ್ರಿ ಉದ್ಯಾನದಲ್ಲಿ ಮಾವು ಮೇಳ, ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟ: ರಮೇಶ್

ಮಂಗಳೂರು: ರಾಮನಗರ ಜಿಲ್ಲಾ ಮಾವು ತೋಟದ ಬೆಳೆಗಾರರ ಮಾರಾಟ ಸಂಘದ ವತಿಯಿಂದ ತೋಟಗಾರಿಕಾ ಇಲಾಖೆಯ ಸಹಕಾರದಲ್ಲಿ ಇದೇ ಮೇ 28 ರಿಂದ 31 ರವರೆಗೆ ನಗರದ ಕದ್ರಿ ಉದ್ಯಾನದಲ್ಲಿ ಮಾವು ಮೇಳ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಮೇಶ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಮೇಳದಲ್ಲಿ ಉತ್ತಮ ಗುಣಮಟ್ಟದ ಹಾಗೂ ನೈಸರ್ಗಿಕವಾಗಿ ಮಾಗಿಸಲಾದ ಮಾವು ಬೆಳೆಯ ವಿವಿಧ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಮಲ್ಲಿಕ, ರಸಪುರಿ, ಮಲಗೋವಾ, ಸಿಂಧೂರ, ಕಾಲಪಾಡಿ, ತೋತಾಪುರಿ, ಬೆಂಗನ್ಪಲ್ಲಿ, ಶುಗರ್ ಬೇಬಿ ಇತ್ಯಾದಿ […]

Continue Reading

ಮೇ 30, 31 ರಂದು ದ.ಕ ಜಿಲ್ಲೆಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌

ಮಂಗಳೂರು: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಅವರು ಮೇ 30 ಹಾಗೂ 31 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಮೇ 30 ರಂದು ಸಂಜೆ 4.25ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 5. 05 ಗಂಟೆಗೆ ಧರ್ಮಸ್ಥಳ ಹೆಲಿಪ್ಯಾಡ್ ಆಗಮನ, ಬಳಿಕ ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ, 11 ಗಂಟೆಗೆ ಬೆಳ್ತಂಗಡಿಯಲ್ಲಿ ಸಿರಿ ಇಂಡಸ್ಟ್ರೀಯಲ್ […]

Continue Reading

ಮಂಗಳೂರಿಗೆ ಅಮ್ಮನ ಆಗಮನ: ಮೇ 28, 29 ರಂದು ಬ್ರಹ್ಮಸ್ಥಾನ ಮಹೋತ್ಸವ, ಭಕ್ತರ ಸಂಭ್ರಮ

ಮಂಗಳೂರು: ಮಾತಾ ಅಮೃತಾನಂದಮಯಿ ದೇವಿ ಅವರು ಕರ್ನಾಟಕ–ಕೇರಳ ಯಾತ್ರೆಯ ಅಂಗವಾಗಿ ಮಂಗಳೂರಿಗೆ ಮಂಗಳವಾರ ಆಗಮಿಸಿದ್ದಾರೆ. ಮೇ 28 ಮತ್ತು 29 ರಂದು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಅಮ್ಮ ಭಾಗವಹಿಸಲಿದ್ದಾರೆ. ಏಳು ವರ್ಷಗಳ ಬಳಿಕ ಅಮ್ಮ ಮಂಗಳೂರಿಗೆ ಭೇಟಿ ನೀಡಿದ್ದು, ಮಾತಾ ಅಮೃತಾನಂದಮಯಿ ಮಠದಲ್ಲಿ ಭಕ್ತರು ಹಾಗೂ ಆಶ್ರಮದ ಪ್ರತಿನಿಧಿಗಳು ವೇದಘೋಷ ಮತ್ತು ಸಾಂಪ್ರದಾಯಿಕ ವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಿದರು. ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಮುಖ್ಯಸ್ಥ ಸ್ವಾಮಿನಿ ಮಂಗಳಾಮೃತ ಪ್ರಾಣ […]

Continue Reading

ಎನ್‌ಎಂಡಿಸಿ ಜತೆಗೆ ಕೆಐಓಸಿಎಲ್ ವಿಲೀನಕ್ಕೆ ಕೇಂದ್ರ ಸಚಿವ ಎಚ್ಡಿಕೆಗೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ (ಎನ್‌ಎಂಡಿಸಿ) ಜತೆ ವಿಲೀನಗೊಳಿಸಬೇಕು. ಕುದುರೆಮುಖ ಸಂಸ್ಥೆಯ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬಂಡವಾಳ ಹೂಡಿಕೆ ಮತ್ತು […]

Continue Reading

ಡಿಕೆಶಿಯತ್ತ ವಾಲಿದ ಕಾಂಗ್ರೆಸ್ ಶಾಸಕರು? ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜಕೀಯ ಲೆಕ್ಕಾಚಾರ ಜೋರು, ಖಾದರ್ ಗೆ ಡಿಸಿಎಂ ಸ್ಥಾನ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರವಾಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಹಲವರು ಇದೀಗ ಡಿ.ಕೆ. ಶಿವಕುಮಾರ್ ಬಣದತ್ತ ಮುಖ ಮಾಡುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿವೆ. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಪರವಾಗಿ ಕೆಲ ಹಿರಿಯ ಶಾಸಕರು ಹಾಗೂ ಸಚಿವರು ಮಾತ್ರ ಉಳಿದಿದ್ದು, ಡಿ.ಕೆ. ಶಿವಕುಮಾರ್ ಪರವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಡಿಕೆ ಶಿವಕುಮಾರ್ […]

Continue Reading