ಚಂಡಮಾರುತ, ಕಡಲ, ನದಿ ತೀರಗಳಲ್ಲಿ ಬೋಟಿಂಗ್, ಜಲ ಸಾಹಸ ಕ್ರೀಡೆಗಳಿಗೆ ನಿರ್ಭಂಧ ವಿಧಿಸಿ ಆದೇಶ

ಕಾರವಾರ: ಚಂಡಮಾರುತ ಹಾಗೂ ಭಾರಿ ಗಾಳಿ ಬೀಸುವ ಕುರಿತು ಭಾರತೀಯ ಹವಾಮಾನ ಇಲಾಖೆಯ ಮೂನ್ಸಚನೆ ನೀಡಿದ್ದು, ಅಲೆಗಳು ಮಳಗಾಲಕ್ಕಿಂತಲೂ ಹೆಚ್ಚು ಅಪ್ಪಳಿಸಲಿರುವ ಹಿನ್ನಲೆಯಲ್ಲಿ ಕಡಲ ತೀರಗಳಲ್ಲಿ ಹಾಗೂ ನದಿ ತೀರಗಳಲ್ಲಿ ನಡೆಸುತ್ತಿರುವ ಬೋಟಿಂಗ್ ಹಾಗೂ ಜಲ ಸಾಹಸ ಕ್ರೀಡೆಗಳನ್ನು ಹಾಗೂ ಅಪ್ಸರಕೊಂಡ ಬೀಚ್ ನಲ್ಲಿ ಪ್ಯಾರಾ ಮೋಟರ್ ಆಳವಡಿಕೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮೇನ್ […]

Continue Reading

ರಕ್ಕಿ ಚಿತ್ರದ ಮೊದಲ ಹಾಡು “ರಗಡೋ ರಕ್ಕಿ ಬಿಡುಗಡೆ, ನಾಯಕನ ಹೆಸರೆ ಸಿನಿಮಾ ಶೀರ್ಷಿಕೆ!

ಬೆಂಗಳೂರು: ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ ಪಿಆರ್ ಕ ಅಡಿಯೊ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಆಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರಿ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆ ಆಗುತ್ತಿದೆ. ಇದು “ರಕ್ಕಿ” ಚಿತ್ರದ ಮೊದಲ ಗೀತೆ ಆಗಿದೆ. ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವ ರಕ್ಕಿ ಸುರೇಶ್, ಈ ಹಾಡಿನಲ್ಲಿ ತಮ್ಮ ಎನರ್ಜಿಟಿಕ್ ಸ್ಕ್ರೀನ್ ಪ್ರೆಸೆನ್ಸ್, ಸ್ಟೈಲಿಷ ಲುಕ್ ಹಾಗೂ ಅದ್ಭುತ ಡಾನ್ಸ್ ಮೂಲಕ […]

Continue Reading

ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಮೂರು ವಿಭಾಗಗಳ ಗುಣಮಟ್ಟಕ್ಕೆ ಎನ್‌ಬಿಎ ಮುದ್ರೆ

ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿAಗ್ ಹಾಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗಗಳಿಗೆ ಈ ಹಿಂದೆ ಲಭಿಸಿದ್ದ ರಾಷ್ಟ್ರೀಯ ಮಾನ್ಯತಾ ಮಂಡಳಿ(ಎನ್‌ಬಿಎ) ಮಾನ್ಯತೆಯನ್ನು ಮುಂದಿನ ಮೂರು ಶೈಕ್ಷಣಿಕ ವರ್ಷಗಳಿಗೆ ವಿಸ್ತರಿಸಲಾಗಿದೆ. ಇದೇ ವೇಳೆ, ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗಕ್ಕೂ ಮೊದಲ ಬಾರಿಗೆ ಮುಂದಿನ ಮೂರು ಶೈಕ್ಷಣಿಕ ವರ್ಷಗಳ ಅವಧಿಗೆ ಎನ್‌ಬಿಎ ಮಾನ್ಯತೆ ಲಭಿಸಿದೆ. ಆಳ್ವಾಸ್ ಸಂಸ್ಥೆಗೆ ಸತತ ಮೂರನೇ ಬಾರಿ ಎನ್‌ಬಿಎ ಮಾನ್ಯತೆ ದೊರೆತಿರುವುದು ಶಿಕ್ಷಣದ ಗುಣಮಟ್ಟ, ಆಧುನಿಕ ಪ್ರಯೋಗಾಲಯ […]

Continue Reading

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠಕ್ಕೆ ಗ್ರಿನ್ ಸಿಗ್ನಲ್ : ಎಂಎಲ್ಸಿ ಐವನ್ ಡಿಸೋಜ

ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠ ಸ್ಥಾಪಿಸಬೇಕು ಎಂಬ ಎರಡು ವರ್ಷಗಳ ಬೇಡಿಕೆಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪೀಠಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಸಿದ್ಧ ಇರುವುದಾಗಿ ಮುಖ್ಯ ನ್ಯಾಯಾಧೀಶರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಈ ಮೂಲಕ ಪೀಠ ಸ್ಥಾಪನೆ ಶೇ 80 ರಷ್ಟು ಕಾರ್ಯ ಪೂರ್ಣಗೊಂಡಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ […]

Continue Reading

ದಾಸನಕೊಪ್ಪ ಕಾಳಂಗಿ ಸೊಸೈಟಿಯಲ್ಲಿ ಭಾರಿ ಭ್ರಷ್ಟಾಚಾರ, ತನಿಖೆಗೆ ಆಗ್ರಹಿಸಿ ರೈತರ ಪ್ರತಿಭಟನೆ, ರೈತರ ಹಣ ಪಂಗನಾಮ, ಭುಗಿಲೆದ್ದ ಆಕ್ರೋಶ

ಸಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿರಸಿ ತಾಲ್ಲೂಕಿನ ದಾಸನಕೊಪ್ಪದ ಕಾಳಂಗಿ ಸೊಸೈಟಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಭಾರಿ ಸಂಖ್ಯೆಯಲ್ಲಿ ರೈತರು ಸೊಸೈಟಿ ಎದರಿನಲ್ಲಿಯೇ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ರೈತರ ಹಣವನ್ನು ಲೂಟಿ ಮಾಡಿರುವ ಆಡಳಿತ ಮಂಡಳಿಯ ವಿರುದ್ಧ ಹಣ ಕಳೆದುಕೊಂಡ ನೂರಾರು ಸಂಖ್ಯೆಯ ಠೇವಣಿದಾರರು ಹಾಗೂ ರೈತರು ಬೃಹತ್ ಪ್ರತಿಭಟನೆ ನಡೆಸಿರುವುದು ಕಾಳಂಗಿ ವ್ಯವಸಾಯ ಸೇವಾ ಸಹಕಾರಿ ಸೊಸೈಟಿಯಲ್ಲಿ ಯಾವುದು ಸರಿಯಾಗಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಸೊಸೈಟಿಯ ಆಡಳಿತ ಮಂಡಳಿಯು ಠೇವಣಿದಾರರ ಕೋಟ್ಯಂತರ ರೂಪಾಯಿ […]

Continue Reading

ಆಳ್ವಾಸ್ ವಿದ್ಯಾರ್ಥಿಗಳ ಮಾದರಿ ಕಾರ್ಯ: ‘ಚಿಣ್ಣರ ತಂಗುದಾಣ’ಕ್ಕೆ ನೆರವಿನ ಹಸ್ತ

ಮೂಡುಬಿದಿರೆ: ಸಮಾಜಮುಖಿ ಚಿಂತನೆ ಹಾಗೂ ಸಾಂಸ್ಕೃತಿಕ ಸೌಹಾರ್ದತೆಯ ಸಾರ್ಥಕ ಉದಾಹರಣೆಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಂಗಳೂರಿನ ನಿರಾಶ್ರಿತ ಮಕ್ಕಳ ಆಶ್ರಯತಾಣ ‘ಚಿಣ್ಣರ ತಂಗುದಾಣ’ಕ್ಕೆ ಭೇಟಿ ನೀಡಿ 50,000ಕ್ಕೂ ಅಧಿಕ ಮೊತ್ತದ ದೈನಂದಿನ ಅಗತ್ಯ ವಸ್ತುಗಳು, ಆಹಾರ ಸಾಮಗ್ರಿಗಳು, ಕ್ರೀಡಾ ಉಪಕರಣಗಳು ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂಪ್ರದಾಯ ದಿನಾಚರಣೆಯನ್ನು ವೈವಿಧ್ಯತೆಯಲ್ಲಿ ಏಕತೆ ಎಂಬ ಸಂದೇಶದೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳು, ಸಾಂಪ್ರದಾಯಿಕ ಆಹಾರ ಮೇಳ ಹಾಗೂ […]

Continue Reading

ಮಂಗಳೂರಿನಲ್ಲಿ ಎರಡು ದಿನ ರಾಜ್ಯ ಮಟ್ಟದ ಗೇರು ಮೇಳ, ಸಾಧಕರಿಗೆ ಸನ್ಮಾನ, ರೈತರಿಗೆ ಉಚಿತ ಕಣ್ಣಿನ ತಪಾಸಣೆ: ಮಮತಾ ಗಟ್ಟಿ

ಮಂಗಳೂರು: ಇದೇ 17, 18,ರಂದು ಮಂಗಳೂರು ಕದ್ರಿ ಉದ್ಯಾನದಲ್ಲಿ ನಡೆಯಲಿರುವ ಎರಡು ದಿನಗಳ ಗೇರು ಮೇಳದ ಉದ್ಘಾಟನೆ ಮೇ17ರಂದು ಬೆಳಿಗ್ಗೆ 11ಗಂಟೆಗೆ ಸ್ಪೀಕರ್ ಯು. ಟಿ. ಖಾದರ್ ಫರೀದ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಚಿವ ಈಶ್ವರ್ ಬಿ. ಖಂಡ್ರೆ ಉದ್ಘಾಟಿಸಲಿದ್ದಾರೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆಯನ್ನು […]

Continue Reading

ಕಾರವಾರ: ಸಮುದ್ರ ಪಾಲಾಗುತ್ತಿದ್ದ ಮಂಗಳೂರು ಮೂಲದ ಇಬ್ಬರ ರಕ್ಷಣೆ: ಭಜರಂಗಿ ಮಿತ್ರರ ಕಾರ್ಯಕ್ಕೆ ಶ್ಲಾಘನೆ

ಕಾರವಾರ: ಕಡಲ ಅಲೆಗಳ ಅಬ್ಬರಕ್ಕೆ ಸಿಕ್ಕು ಹಾಕಿಕೊಂಡು ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗರನ್ನು ನಗರದ ಟ್ಯಾಗೋರ ಕಡಲ ತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಕೊಂಕಣಿ ಖಾರ್ವಿ ವಾಡಾದ ಭಜರಂಗಿ ಮಿತ್ರರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದವರು ಟ್ಯಾಗೋರ ಕಡಲತೀರದಲ್ಲಿ ಈಜಲು ತೆರಳಿದ್ದ ವೇಳೆ ಕಡಲ ಅಲೆಗಳ ಅಬ್ಬರಕ್ಕೆ ಸುಳಿಗೆ ಸಿಕ್ಕು ಹಾಕಿಕೊಂಡು ಪ್ರಾಣಾಪಾಯದಲ್ಲಿ ಇದ್ದರು. ಈ ವೇಳೆ ಅಲ್ಲಿಯೇ ಇದ್ದ ಕುಟುಂಬದ ಸದಸ್ಯರು ನೆರವಿಗೆ ಕೂಗುತ್ತಿದ್ದರು, ಈ ವೇಳೆ ಅಲ್ಲಿಯೇ ಕ್ರಿಕೆಟ್ ಆಟುತ್ತಿದ್ದ ಭಜರಂಗಿ […]

Continue Reading

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಕೇಂದ್ರ ಸರಕಾರದ ವೈಫಲ್ಯ: ಮಾಜಿ ಎಂಎಲ್ಸಿ ಹರೀಶ್ ಕುಮಾರ್

ಮಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಆಗಿದೆ ಎಂದು ಮಾಜಿ ಎಂಎಲ್ ಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು. 22.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕನಸುಗಳನ್ನು ಹೊತ್ತು ಅಪಾರ ಪರಿಶ್ರಮದೊಂದಿಗೆ ಪರೀಕ್ಷೆ ಬರೆದಿದ್ದರು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದ್ದು, […]

Continue Reading

ಜೈ ತುಳು ಸಿನಿಮಾದ ನೂರರ ಸಂಭ್ರಮ, ಬ್ರೋ ಹೊಸ ತುಳು ಸಿನಿಮಾ ಘೋಷಿಸಿದ ನಟ, ನಿರ್ದೇಶಕ ರೂಪೇಶ್ ಶೆಟ್ಟಿ

ಮಂಗಳೂರು: ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆ ಆಗಿದ್ದಾರೆ. ಜೈ ತುಳು ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ವಿಶ್ವದ ತುಳುವರು ಈ ಸಿನಿಮಾವನ್ನು ಗೆಲ್ಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ಎಂ. ರೈ ಅವರು ಹೇಳಿದರು. ಇಲ್ಲಿನ ಜೈ ತುಳು ಸಿನಿಮಾದ 100 ನೇ ದಿನದ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಟ ನಿರ್ದೇಶಕ ರೂಪೇಶ್ ಶೆಟ್ಟಿ ಮಾತನಾಡಿ, “ಜೈ” ಸಹಿತ ತನ್ನ ಎಲ್ಲ […]

Continue Reading