ಜೈ ತುಳು ಸಿನಿಮಾದ ನೂರರ ಸಂಭ್ರಮ, ಬ್ರೋ ಹೊಸ ತುಳು ಸಿನಿಮಾ ಘೋಷಿಸಿದ ನಟ, ನಿರ್ದೇಶಕ ರೂಪೇಶ್ ಶೆಟ್ಟಿ

ಮಂಗಳೂರು: ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆ ಆಗಿದ್ದಾರೆ. ಜೈ ತುಳು ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ವಿಶ್ವದ ತುಳುವರು ಈ ಸಿನಿಮಾವನ್ನು ಗೆಲ್ಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ಎಂ. ರೈ ಅವರು ಹೇಳಿದರು. ಇಲ್ಲಿನ ಜೈ ತುಳು ಸಿನಿಮಾದ 100 ನೇ ದಿನದ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಟ ನಿರ್ದೇಶಕ ರೂಪೇಶ್ ಶೆಟ್ಟಿ ಮಾತನಾಡಿ, “ಜೈ” ಸಹಿತ ತನ್ನ ಎಲ್ಲ […]

Continue Reading

ಎಂಸಿಸಿ ಬ್ಯಾಂಕ್ 114 ನೇ ಸಂಸ್ಥಾಪಕರ ದಿನ ಆಚರಣೆ‌, ಈ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ಶಾಖೆ 25 ಕ್ಕೆ ಏರಿಕೆ: ಅನಿಲ್ ಲೋಬೊ

ಮಂಗಳೂರು: 2018ರಲ್ಲಿ ಹೊಸ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ನಂತರ ಬ್ಯಾಂಕ್ ವೃತ್ತಿಪರತೆಯೊಂದಿಗೆ ಗಮನಾರ್ಹ ಬೆಳವಣಿಗೆ ಸಾಧಿಸಿದೆ ಎಂದು ಸಹಕಾರ ರತ್ನ ಅನಿಲ್ ಲೋಬೊ ಹೇಳಿದರು. ಎಂಸಿಸಿ ಬ್ಯಾಂಕ್ 114ನೇ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕ ಪಿ.ಎಫ್. ಎಕ್ಸ್. ಸಲ್ದಾನರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. 24 ವರ್ಷಗಳ ಬಳಿಕ ಶಾಖೆಗಳ ಸಂಖ್ಯೆ 16 ರಿಂದ 21ಕ್ಕೆ ಏರಿಕೆ ಆಗಿದೆ. ಬ್ಯಾಂಕಿನ ಒಟ್ಟು ವ್ಯವಹಾರ ರೂ. 500 ಕೋಟಿಯಿಂದ ರೂ.1,525 ಕೋಟಿಗೆ ಏರಿಕೆ ಆಗಿದ್ದು, […]

Continue Reading

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಭೇಟಿ, ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಧರ್ಮಸ್ಥಳ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಕುಟುಂಬ ಸದಸ್ಯರ ಜತೆಗೆ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡರು. ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಸೇರಿದಂತೆ ಹಲವು […]

Continue Reading

ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ, ಕಾಂಗ್ರೆಸ್ ಆಡಳಿತದಲ್ಲಿ ಖಜಾನೆ ಲೂಟಿ: ಪ್ರಧಾನಿ ಮೋದಿ

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಖಜಾನೆ ಲೂಟಿ ಆಗುತ್ತಿದೆ. ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ ನೋಡುತ್ತಿದ್ದೇವೆ. ಪರಸ್ಪರ ಜಗಳದಲ್ಲಿ ರಾಜ್ಯ ಕಾಂಗ್ರೆಸ್ ತೊಡಗಿಕೊಂಡಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಒಳಜಗಳ ನಡೆದಿದೆ. ತಮಿಳುನಾಡು, ಕೇರಳದಲ್ಲೂ ಆಡಳಿತದ ವಿಚಾರದಲ್ಲಿ ಸಮಸ್ಯೆ ಇದೆ ಎಂದು ಪ್ರಧಾನಿ ಮೋದಿ ಹೇಳಿದರು. ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬಳಿಕ ಕರ್ನಾಟಕಕ್ಕೆ ಆಗಮಿಸಿದ್ದ ನರೇಂದ್ರ ಮೋದಿ ಅವರಿಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದ ಬಳಿ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದಿಸುವ ಸಮಾರಂಭದಲ್ಲಿ ಅವರು […]

Continue Reading

17, 18 ರಂದು ಕದ್ರಿ ಪಾರ್ಕ್ ನಲ್ಲಿ ರಾಜ್ಯ ಮಟ್ಟದ ಗೇರು ಮೇಳ, ಕಾರ್ಯಾಗಾರ, ಪೋಸ್ಟರ್ ಬಿಡುಗಡೆಗೊಳಿಸಿದ ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಕರಾವಳಿಯ ವಾಣಿಜ್ಯ ಬೆಳೆ ಗೇರು ಬೆಳೆಯ ಮಹತ್ವದ ಕುರಿತು ಬೆಳೆಗಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಿಟ್ಟಿನಲ್ಲಿ ಗೇರು ಮೇಳ ಪ್ರಮುಖ ಹೆಜ್ಜೆಯಾಗಿದೆ ಎಂದು ಸ್ಪೀಕರ್ ಯು. ಟಿ. ಖಾದರ್ ಅವರು ಹೇಳಿದರು. ಶನಿವಾರ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ರಾಜ್ಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗೇರು ಮೇಳದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರಾವಳಿಯಲ್ಲಿ ಗೇರು ಉದ್ಯಮ ಸಾಕಷ್ಟು ಕುಟುಂಬಕ್ಕೆ ಆಧಾರ ಆಗಿತ್ತು. ಬೆಳೆ ಕುಂಠಿತ ಆದ ಕಾರಣ […]

Continue Reading

ಆಳ್ವಾಸ್ ಪದವಿಪೂರ್ವ ಕಾಲೇಜು: ಎನ್‌ಡಿಎ ಪರೀಕ್ಷೆಯಲ್ಲಿ 24 ಮಂದಿ ವಿದ್ಯಾರ್ಥಿಗಳು ಉತ್ತೀರ್ಣ

ಮೂಡುಬಿದಿರೆ: ಕೇಂದ್ರದ ಲೋಕಸೇವಾ ಆಯೋಗದ ಮೂಲಕ ನಡೆಯುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 24 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ರಾಷ್ಟ್ರದ ಗಮನ ಸೆಳೆದಿದ್ದಾರೆ. ಭಾರತೀಯ ಸೇನೆ, ನೌಕಾಪಡೆ ಹಾಗೂ ವಾಯುಪಡೆಯ ಅಧಿಕಾರಿಗಳಾಗಲು ಎನ್‌ಡಿಎ ಪ್ರಮುಖ ಘಟ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಿದ್ಧಗೊಳಿಸುವ ಕಾರ್ಯವನ್ನು ಆಳ್ವಾಸ್ ಪದವಿಪೂರ್ವ ಕಾಲೇಜು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಾದ ವಿವೇಕ್ ಎ, ಅದ್ವೈತ್ ವಿಕ್ರಾಂತ್ ಶೆಂಡೆ, ಅಮೋಘ್ ನಾಗರಾಜ್ ಬಿಲ್ಲೂರ್, ಮೊಹಮ್ಮದ್ ಯೂಸುಫ್ […]

Continue Reading

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತ ಎಲ್ಲ ನಿರ್ಧಾರಗಳನ್ನೂ ಪಕ್ಷದ ವರಿಷ್ಠರೇ ಕೈಗೊಳ್ಳುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ನೇರ ಉತ್ತರ ನೀಡದೇ, ಯಾವುದೇ ತೀರ್ಮಾನವಾದರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಇದಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಸರ್ಕಾರಕ್ಕೆ ಮೂರು ವರ್ಷ ಪೂರ್ತಿಯಾದ ಬಳಿಕ ವಿಸ್ತರಣೆ ಮಾಡುವ ಚರ್ಚೆ ನಡೆದಿತ್ತು. ಕೇರಳದಲ್ಲಿ ಸರ್ಕಾರ ರಚನೆಯ ನಂತರ ಪಕ್ಷದ ವರಿಷ್ಠರು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. […]

Continue Reading

ಎಂಐಒ ಆಸ್ಪತ್ರೆಯ ಡಾ. ವಿಶ್ವಪ್ರಿಯಾ ಗೋದ್ಖಿಂಡಿಗೆ ಪ್ರತಿಷ್ಠಿತ ಯುರೋಪಿಯನ್ ಪೆಥಾಲಜಿ ಗೌರವ

ಮಂಗಳೂರು: ಇಲ್ಲಿನ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಅಂಕಾಲಜಿ (ಎಂಐಒ) ಆಸ್ಪತ್ರೆಯಲ್ಲಿ ಪೆಥಾಲಜಿ ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಅವರು ಯುರೋಪಿಯನ್ ಸೊಸೈಟಿ ಆಫ್ ಪೆಥಾಲಜಿ ಅಕಾಡೆಮಿ–2026 ರ ಗೌರವಕ್ಕೆ ಭಾಜನರಾಗಿದ್ದಾರೆ ಎಂದು ಎಂಐಒ ಆಸ್ಪತ್ರೆಯ ನಿರ್ದೇಶಕ ಡಾ. ಸುರೇಶ್ ರಾವ್ ಅವರು ತಿಳಿಸಿದ್ದಾರೆ. ಪೆಥಾಲಜಿ ಕ್ಷೇತ್ರದಲ್ಲಿ ಅವರ ಶೈಕ್ಷಣಿಕ ಹಾಗೂ ವೃತ್ತಿಪರ ಸಾಧನೆ ಗುರುತಿಸಿ ಈ ಗೌರವ ಲಭಿಸಿದೆ. 2026ನೇ ಸಾಲಿನಲ್ಲಿ ಯೂರೋಪಿಯನ್ ಸೊಸೈಟಿ ಆಫ್ ಪಥಾಲಜಿ ವತಿಯಿಂದ ಆಯ್ಕೆಯಾದ ಏಕೈಕ ಭಾರತೀಯ ಪ್ರಶಸ್ತಿ […]

Continue Reading

ಮಂಗಳೂರಿನಲ್ಲಿ ಜೆಎಲ್‌ಆರ್ ಇಂಡಿಯಾ ನೂತನ ಮಳಿಗೆಗೆ ರಾಜನ್ ಅಂಬಾ ಚಾಲನೆ

ಮಂಗಳೂರು: ಐಷಾರಾಮಿ ಕಾರುಗಳ ವಿಭಾಗದಲ್ಲಿ ಮಂಗಳೂರು, ದಕ್ಷಿಣ ಭಾರತದ ಅತ್ಯಂತ ಪ್ರಮುಖ ಮಾರುಕಟ್ಟೆ ಆಗಿದೆ. ಇಲ್ಲಿ ನಮ್ಮ ನೂತನ ಘಟಕವನ್ನು ಆರಂಭಿಸಲು ನಮಗೆ ಸಂತೋಷ ಆಗಿದೆ. ಕರ್ನಾಟಕದಲ್ಲಿ ಮತ್ತು ಈ ಭಾಗದಲ್ಲಿ ನಮ್ಮ ಗ್ರಾಹಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಈ ಹೆಜ್ಜೆ ಇಟ್ಟಿದ್ದೇವೆ” ಎಂದು ಪ್ರತಿಷ್ಠಿತ ಐಷಾರಾಮಿ ಕಾರು ತಯಾರಿಕಾ ಸಂಸ್ಥೆ ಜೆಎಲ್‌ಆರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ರಾಜನ್ ಅಂಬಾ ಅವರು ತಿಳಿಸಿದರು. ಮಂಗಳೂರಿನ ಕೊಟ್ಟಾರದಲ್ಲಿ ಇರುವ ಜೆಎಲ್‌ಆರ್ ಇಂಡಿಯಾದ ಸೇವಾ ಮತ್ತು ಬಿಡಿಭಾಗಗಳ ಕೇಂದ್ರದ ಪಕ್ಕದಲ್ಲೇ ಸಂಸ್ಥೆಯು […]

Continue Reading

ನಗರದಲ್ಲಿ ಇಬ್ಬರು ಶಾಸಕರಿದ್ದರು ಮಾಹಿತಿ ನೀಡದೇ ನೀರಿನ ರೇಷನಿಂಗ್ ನಿರ್ಧಾರ   ಎಎಂಆರ್‌ ಡ್ಯಾಂ ನಿಂದ ತುಂಬೆಗೆ ನೀರು ಹರಿಸಿ: ಶಾಸಕ ಕಾಮತ್  

ಮಂಗಳೂರು: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟವು ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ 4 ಮೀಟರ್‌ಗೆ ಇಳಿಕೆ ಆಗುವ ಮೂಲಕ ನಗರದಲ್ಲಿ ಕೃತಕ ಜಲಕ್ಷಾಮ ಸೃಷ್ಟಿಸಲಾಗಿದೆ. ಕೂಡಲೇ ಎಎಂಆರ್‌ ಡ್ಯಾಂ ನಿಂದ ತುಂಬೆ ಡ್ಯಾಂ ಗೆ ನೀರು ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ತುಂಬೆ ಡ್ಯಾಂ ಗೆ ಅವರು ಖುದ್ದು ಭೇಟಿ ನೀಡಿ ವೀಕ್ಷಣೆ ನಡೆಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ ಇಬ್ಬರು ಶಾಸಕರುಗಳು ಇದ್ದರೂ ಯಾವುದೇ ಮಾಹಿತಿ ನೀಡದೇ ಜಿಲ್ಲಾಡಳಿತ […]

Continue Reading