‘ಆಟಿದ ಪೊರ್ಲು’ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಸುರತ್ಕಲ್ ಬಂಟರ ಸಂಘದ ಗುಣಗಾನ ಮಾಡಿದ ಐಕಳ ಹರೀಶ್ ಶೆಟ್ಟಿ
ಸುರತ್ಕಲ್: ಇಲ್ಲಿನ ಬಂಟರ ಸಂಘದ ಒಗ್ಗಟ್ಟು ಇತರ ಸಂಘ–ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಸುರತ್ಕಲ್ ಬಂಟರ ಸಂಘ ಹಾಗೂ ಮಹಿಳಾ ವೇದಿಕೆ ಬಂಟರ ಸಂಘದ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಆಯೋಜಿಸಿದ್ದ ‘ಆಟಿದ ಪೊರ್ಲು’ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಟಿ ತಿಂಗಳಲ್ಲಿ ಮನೆ ಮನೆಗೆ ತೆರಳಿ ಸಾಂಪ್ರದಾಯಿಕವಾಗಿ ಪ್ರದರ್ಶನ ನೀಡುವ ‘ಚಿಕ್ಕಮೇಳ’ವು ಗುತ್ತಿನ ಮನೆಯ ಚಾವಡಿಗೆ ಆಗಮಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. […]
Continue Reading