ಉಕ ಜಿಲ್ಲೆಯಲ್ಲಿ 873 ಲಸಿಕಾ ಕೇಂದ್ರ, 28ಕ್ಕೆ ಪಲ್ಸ್ ಪೊಲಿಯೋ ಅಭಿಯಾನ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಉ.ಕ ಜಿಲ್ಲೆಯಾದ್ಯಂತ ಇದೇ 28 ರಂದು ನಡೆವ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಯಶಸ್ವಿಗೊಳಿವುದಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ತಲುಪಬೇಕು ಹಾಗೂ ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 873 ಲಸಿಕಾ […]

Continue Reading

ವಿಶ್ವ ಯೋಗ ದಿನ, ಕಾರಿಂಜೇಶ್ವರ ಬೆಟ್ಟದಲ್ಲಿ ಯೋಗ ವಿದ್ ಯೋಧ ಕಾರ್ಯಕ್ರಮ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣ ಕಾರಿಂಜೇಶ್ವರ ಬೆಟ್ಟದಲ್ಲಿ ‘ಯೋಗ ವಿದ್ ಯೋಧ’ ಬೃಹತ್ ಯೋಗಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್ 21ರಂದು 3 ಗಂಟೆಗೆ ಮಹಾತೋಭಾರ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ 3ನೇ ಆವೃತ್ತಿಯ ಯೋಗ ವಿದ್ ಯೋಧ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ನಿವೃತ್ತ ಯೋಧರು, ಗಣ್ಯರು, ಯೋಗಾಸಕ್ತರು ಹಾಗೂ ಸಾರ್ವಜನಿಕರು […]

Continue Reading

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು […]

Continue Reading

ರೋಗಿಗಳ ಸುರಕ್ಷತೆಗಾಗಿ ಪರಿಣಾಮಕಾರಿ ಕ್ರಮಗಳ ಅನುಷ್ಠಾನ ಮುಖ್ಯ: ಡೀನ್ ಡಾ. ಪೂರ್ಣಿಮಾ

ಕಾರವಾರ: ಆರೋಗ್ಯ ಸಂಸ್ಥೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೋಂಕು ತಡೆ ಹಾಗೂ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕಿ ಡಾ. ಪೂರ್ಣಿಮಾ ಆರ್.ಟಿ. ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಗುಣಮಟ್ಟ ಭರವಸೆ ಘಟಕ ಹಾಗೂ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಕ್ಷ್ಮಜೀವಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಆಸ್ಪತ್ರೆ ಸೋಂಕು ನಿಯಂತ್ರಣ […]

Continue Reading

ಮಂಗಳೂರಿನ ವೆನ್ಲಾಕ್‌, ಲೇಡಿಗೋಷನ್‌ಗೆ ಸ್ಟಾಫ್ ನರ್ಸ್ ನೇಮಕ ಶೀಘ್ರ: ಸಚಿವ ಯು. ಟಿ. ಖಾದರ್

ಮಂಗಳೂರು: ನಗರದ ವೆನ್ಲಾಕ್ ಹಾಗೂ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಗಳಲ್ಲಿ ಉಂಟಾಗಿರುವ ಸ್ಟಾಫ್ ನರ್ಸ್ ಕೊರತೆಯನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಲೇಡಿಗೋಷನ್ ಹೆರಿಗೆ ಆಸ್ಪತ್ರೆಗೆ 22 ಹಾಗೂ ವೆನ್ಲಾಕ್ ಆಸ್ಪತ್ರೆಗೆ 10 ಸ್ಟಾಫ್ ನರ್ಸ್‌ಗಳ ತುರ್ತು ಅಗತ್ಯವಿದೆ. ತಲಾ17 ಸಾವಿರ ವೇತನದ ಆಧಾರದಲ್ಲಿ ತಕ್ಷಣ ನೇಮಕಾತಿ ಆದೇಶ […]

Continue Reading

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದ್ದು, ಬಿಪಿಎಲ್ ಕಾರ್ಡ್ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಇದರ ಪ್ರಯೋಜನ ಪಡೆಯಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಸೇರಿದಂತೆ ಹೃದಯ ಸಂಬಂಧಿತ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ […]

Continue Reading

ಶಿಶುಗಳ ಚರ್ಮದ ಆರೈಕೆ ಕುರಿತು ಜಾಗೃತಿ ಅಭಿಯಾನ ಆರಂಭಿಸಿದ ಹಿಮಾಲಯ ಬೇಬಿಕೇರ್: ಚಕ್ರವರ್ತಿ ಎನ್.ವಿ.

ಮಂಗಳೂರು: ನವಜಾತ ಶಿಶುಗಳ ಸೂಕ್ಷ್ಮ ಚರ್ಮದ ಆರೈಕೆ ಹಾಗೂ ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಚರ್ಮದ ಸಮಸ್ಯೆಗಳ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಿಮಾಲಯ ಬೇಬಿಕೇರ್ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿದೆ. ಅಭಿಯಾನದ ಅಂಗವಾಗಿ ಸಂಸ್ಥೆಯ ಜನಪ್ರಿಯ ಉತ್ಪನ್ನಗಳಾದ ಹಿಮಾಲಯ ಜೆಂಟಲ್ ಬೇಬಿ ಸೋಪ್ ಹಾಗೂ ಹಿಮಾಲಯ ರಿಫ್ರೆಷಿಂಗ್ ಬೇಬಿ ಸೋಪ್ ಕುರಿತು ಹೊಸ ಜಾಹೀರಾತು ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಜಾಹೀರಾತುಗಳು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸಾರವಾಗುತ್ತಿವೆ. ಈ ಕುರಿತು ಹಿಮಾಲಯ ವೆಲ್‌ನೆಸ್ […]

Continue Reading

ಉಡುಪಿ ತಾಯಿ–ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ, 8 ಕೆ.ಜಿ. ಗರ್ಭಕೋಶದ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: ಜಿಲ್ಲಾ ಸರ್ಜನ್ ಡಾ. ಅಶೋಕ್

ಉಡುಪಿ: ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಬರೋಬ್ಬರಿ 8 ಕೆ.ಜಿ. ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದು, ಇದೊಂದು ಸಾಧನೆಯೇ ಸರಿ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ತಿಳಿಸಿದರು. ಮಹಿಳೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಸಮಸ್ಯೆ ನಿವಾರಣೆಯಾಗದ ಹಿನ್ನೆಲೆಯಲ್ಲಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಆಗಮಿಸಿದ್ದರು. ವೈದ್ಯರು ಪರೀಕ್ಷಿಸಿದಾಗ ಅವರ […]

Continue Reading

ಮೂಳೆ ಇಂಪ್ಲಾಂಟ್‌ಗೆ ಎನ್‌ಐಟಿಕೆ ಸಂಶೋಧಕರಿಂದ ಹೊಸ ಲೇಪನ ತಂತ್ರಜ್ಞಾನ, ಮೇಕ್ ಇನ್ ಇಂಡಿಯಾ ಪೇಟೆಂಟ್ ಮಾನ್ಯತೆ ಗರಿ

ಸುರತ್ಕಲ್: ಇಲ್ಲಿನ ಸುರತ್ಕಲ್‌ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿಕೆ) ಸಂಶೋಧಕರು ಮೂಳೆ ಇಂಪ್ಲಾಂಟ್‌ಗಳಿಗಾಗಿ ಜೈವಿಕ ಸಕ್ರಿಯ, ಬಾಳಿಕೆ ಬರುವ ಹಾಗೂ ಆಂಟಿಮೈಕ್ರೊಬಿಯಲ್ ಗುಣ ಲಕ್ಷಣ ಹೊಂದಿರುವ ಸುಧಾರಿತ ಲೇಪನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಸೊಂಟ ಹಾಗೂ ಮೊಣಕಾಲು ಕೀಲು ಬದಲಿ ಮಾಡುವಲ್ಲಿ ಬಳಸಬಹುದಾದ ಈ ತಂತ್ರಜ್ಞಾನಕ್ಕೆ ಪೇಟೆಂಟ್ ದೊರೆತಿದ್ದು, ಸ್ಥಳೀಯ ಬಯೋಮೆಡಿಕಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ. ಇಂಪ್ಲಾಂಟ್‌ಗೆ ಸಂಬಂಧಿಸಿದ ಸೋಂಕು, ಇಂಪ್ಲಾಂಟ್ ಸಡಿಲಗೊಳ್ಳುವಿಕೆ ಹಾಗೂ ದೀರ್ಘಕಾಲೀನ ಕಾರ್ಯಕ್ಷಮತೆಯ ಸವಾಲುಗಳನ್ನು ಮನಗಂಡು ಸಂಶೋಧನಾ ತಂಡ ಈ […]

Continue Reading

ಉಡುಪಿ ಸರಕಾರಿ ತಾಯಿ, ಮಕ್ಕಳ ಆಸ್ಪತ್ರೆಗೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ, ರೋಗಿಗಳ ಆರೋಗ್ಯ ವಿಚಾರಣೆ

ಉಡುಪಿ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಗರ್ಭೀಣಿ, ಬಾಣಂತಿ ರೋಗಿಗಳ ಕುಶಲೋಪರಿ ವಿಚಾರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅನುರಾಧ ಬಿ ಹಾದಿಮನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ […]

Continue Reading