ವಿಧಾನ ಪರಿಷತ್ ಫೈಟ್: ಕಾಂಗ್ರೆಸ್‌ಗೆ 5 ಸ್ಥಾನಗಳ ಭರ್ಜರಿ ಗೆಲುವು, ಅಡ್ಡ ಮತದಾನ ಓಟಿಂಗ್ ಏಟು, ಮೈತ್ರಿ ಸದಸ್ಯರಿಂದಲೇ ಕೈಗೆ ಮತ, ಜೆಡಿಎಸ್ ಗೆ ಹೀನಾಯ ಸೋಲು

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ಐವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಚುನಾವಣಾ ಫಲಿತಾಂಶವು ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣ ಆಗಿದೆ. ಚುನಾವಣೆಯಲ್ಲಿ ಮೈತ್ರಿ ಪಕ್ಷದ ಕೆಲವು ಶಾಸಕರು ಅಡ್ಡಮತದಾನ ಮಾಡಿರುವುದು ಫಲಿತಾಂಶದ ಮೇಲೆ ಮಹತ್ವದ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಬಿಜೆಪಿ 3 ರಿಂದ 4 ಮಂದಿ ಹಾಗೂ ಜೆಡಿಎಸ್‌ 6 ರಿಂದ 7 ಮಂದಿ ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯ […]

Continue Reading

ವಿಧಾನಸಭೆಯಿಂದ ಮೇಲ್ಮನೆ ಚುನಾವಣೆ: ಶಿವರಾಜ್ ಎಸ್. ತಂಗಡಗಿ ಮತದಾನ

ಬೆಂಗಳೂರು: ವಿಧಾನಸಭೆಯಿಂದ ಮೇಲ್ಮನೆಗೆ ನಡೆದ ಚುನಾವಣೆಯ ಸಂದರ್ಭದಲ್ಲಿ ಹಿರಿಯ ಶಾಸಕ ಶಿವರಾಜ್ ಎಸ್. ತಂಗಡಗಿ ಅವರು ವಿಧಾನಸೌಧದಲ್ಲಿ ಮತ ಚಲಾಯಿಸಿದರು. ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದ್ದು, ಜನಪ್ರತಿನಿಧಿಗಳು ತಮ್ಮ ಮತ ಹಕ್ಕನ್ನು ಚಲಾಯಿಸಿದರು.

Continue Reading

ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ: ಐವನ್ ಡಿಸೋಜ

ಮಂಗಳೂರು: ಬಿಜೆಪಿಯು ವೋಟ್ ಚೋರಿ ಜತೆಗೆ ಸೀಟ್ ಚೋರಿಯನ್ನೂ ನಡೆಸುತ್ತಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ ಎಂದರು. ಜಾರ್ಖಂಡ್‌ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ನಾಮಪತ್ರದ ದೋಷ ಸರಿಪಡಿಸಲು ಅವಕಾಶ ನೀಡಿದ್ದರೂ, ಮೀನಾಕ್ಷಿ ನಟರಾಜನ್ ಅವರಿಗೆ ಅದೇ ಅವಕಾಶ […]

Continue Reading

ಭಾರತ ಈಗ ಸೂಪರ್ ಎಕಾನಮಿ, 2031ಕ್ಕೆ ವಿಶ್ವದ ಟಾಪ್ 3 ದೇಶಗಳಲ್ಲಿ ಭಾರತ: ರಾಧಾ ಮೋಹನ್ ದಾಸ್ ಅಗರ್ವಾಲ್

ಮಂಗಳೂರು: ಜಾಗತಿಕ ಆರ್ಥಿಕ ಹಿಂಜರಿತ, ಇಂಧನ ಬಿಕ್ಕಟ್ಟು ಹಾಗೂ ವಿವಿಧ ಅಂತರ ರಾಷ್ಟ್ರೀಯ ಸಂಘರ್ಷಗಳ ನಡುವೆಯೂ ಭಾರತಶೇ 7.7 ರ ಆರ್ಥಿಕ ಬೆಳವಣಿಗೆ ದರವನ್ನು ಸಾಧಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಹಾಗೂ ಗೃಹ ಸಚಿವಾಲಯದ ಸ್ಥಾಯಿ ಸಮಿತಿ ಅಧ್ಯಕ್ಷ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 2013–14ರಲ್ಲಿ 1.9 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದ ಭಾರತ ಈಗ 4.1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆದಿದೆ. ಭಾರತದ […]

Continue Reading

ಪೌರಕಾರ್ಮಿಕರಿಗೆ ನೆಪ ಹೇಳದೇ ಆದ್ಯತೆಯಲ್ಲಿ ಎಲ್ಲರಿಗೂ ಮನೆ ನಿರ್ಮಾಣ ಮಾಡಿಕೊಡಿ: ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು

ಕಾರವಾರ: ಜಿಲ್ಲೆಯ ಎಲ್ಲಾ ನಗರಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ವ್ಯವಸ್ಥೆಯನ್ನು ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಕಾರವಾರ ಇವರ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ಪೌರಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ಹಾಗೂ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

Continue Reading

ಗೃಹಲಕ್ಷ್ಮೀ ಹಣ ಪಾವತಿ ಸ್ಥಗಿತ, ರಾಜ್ಯ ಸರಕಾರದಿಂದ ಅನ್ಯಾಯ: ಶಾಸಕ ಭರತ್ ಶೆಟ್ಟಿ ಆರೋಪ

ಮಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಲಕ್ಷಾಂತರ ಮಹಿಳೆಯರಿಗೆ ಅನ್ಯಾಯ ಮಾಡಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು. ಚುನಾವಣೆ ಪೂರ್ವದಲ್ಲಿ ಬಿಪಿಎಲ್ ಅಥವಾ ಎಪಿಎಲ್ ಎಂಬ ಭೇದವಿಲ್ಲದೆ ಮಹಿಳೆಯರ ಖಾತೆಗೆ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇದೀಗ ಬಿಪಿಎಲ್ ನೆಪ ಒಡ್ಡಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಹೊರಗಿಡುವ ಮೂಲಕ ಮಹಿಳೆಯರಿಗೆ ದ್ರೋಹ ಮಾಡಲಾಗಿದೆ ಎಂದು ಅವರು ಟೀಕಿಸಿದರು. ಗೃಹಲಕ್ಷ್ಮೀ ಯೋಜನೆಯಡಿ […]

Continue Reading

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಗೆ ಕೆಪಿಸಿಸಿ ಪಟ್ಟ, ಹೈಕಮಾಂಡ್ ಅಧಿಕೃತ ಆದೇಶ

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ. https://www.karavalidailynews.com/wp-content/uploads/2026/06/PR_PCC_Karnataka-1.pdf ಮೂಲ ಕಾಂಗ್ರೆಸಿಗ ಹಾಗೂ ಹೈಕಮಾಂಡ್ ಗೆ ತೀರಾ ಆಪ್ತರಾಗಿರುವ ಹಿಂದುಳಿದ ವರ್ಗದ ಕಾಂಗ್ರೆಸ್ ಪ್ರಮುಖ ಮುಖಂಡ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದೆ. ಬಿ.ಕೆ.ಹರಿಪ್ರಸಾದ್ ಈಡಿಗ ಸಮುದಾಯದವರಾಗಿದ್ದು, ಕಾಂಗ್ರೆಸ್ ​ನ ಪ್ರಬಲ ನಾಯಕರಾಗಿದ್ದಾರೆ‌. ಅಹಿಂದ ಸಮುದಾಯದವರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದ್ದು, ಮಂತ್ರಿ ಮಂಡಳ ರಚನೆ ಆಗುತ್ತಿದ್ದಂತೆ […]

Continue Reading

ಯು.ಟಿ. ಖಾದರ್ ಸ್ಪೀಕರ್ ಟು ಮಿನಿಸ್ಟರ್ ಜರ್ನಿ, ಕಾರ್ಯಕರ್ತರಲ್ಲಿ ಸಂಭ್ರಮ

ಮಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯ ನಡುವೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಯು.ಟಿ. ಖಾದರ್ ಅವರು ಸ್ಪೀಕರ್ ಟು ಮಿನಿಸ್ಟರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕರಾವಳಿ ಭಾಗದ ಪ್ರಬಲ ನಾಯಕನಾಗಿರುವ ಖಾದರ್ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. ಮಂಗಳೂರು […]

Continue Reading

ಸಿಎಂ ಡಿಕೆಶಿ ಸಂಪುಟಕ್ಕೆ ಪರಮೇಶ್ವರ್ ಡಿಸಿಎಂ ಆಗಿ ಎಂಟ್ರಿ

ಬೆಂಗಳೂರು:ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಸಿಎಂ ಡಿಕೆಶಿ ಅವರ ಸಂಪುಟಕ್ಕೆ ಡಿಸಿಎಂ ಆಗಿ ಸೇರ್ಪಡೆಯಾಗಿದ್ದಾರೆ. ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ಪೂರ್ಣಗೊಂಡಿದ್ದು, ಹೊಸ ಸರ್ಕಾರದ ಕಾರ್ಯವೈಖರಿ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ. ಅನುಭವ ಮತ್ತು ಸಂಘಟನಾ ಸಾಮರ್ಥ್ಯದ ಸಮನ್ವಯದೊಂದಿಗೆ ಹೊಸ ತಂಡ ರಾಜ್ಯದ ಆಡಳಿತವನ್ನು ಮುನ್ನಡೆಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Continue Reading

ಡಿಕೆಶಿ ಸಂಪುಟ ಸೇರಿದ ಹಿರಿ ತಲೆಗಳು, ಖಾದರ್, ಯತೀಂದ್ರ ನ್ಯೂ ಎಂಟ್ರಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಅಗಿ ಡಿಕೆಶಿ ಅವರು ಅಧಿಕಾರದ ಗದ್ದುಗೆ ಹಿಡಿದಿದ್ದು, ಅವರ ಸಂಪುಟದಲ್ಲಿ ಡಾ. ಜಿ .ಪರಮೇಶ್ವರ್, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಯು.ಟಿ. ಖಾದರ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಕೆ.ಎಚ್.ಮುನಿಯಪ್ಪ, ಈಶ್ವರ್ ಖಂಡ್ರೆ, ಡಾ. ಶರಣ ಪ್ರಕಾಶ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಕೃಷ್ಣ ಬೈರೇಗೌಡ್ ಅವರು ಸಂಪುಟ ದರ್ಜೆಯ ಸ್ಥಾನ ಮಾನ ಪಡೆದುಕೊಂಡಿದ್ದು, ನೂತನ ಸಂಪುಟ ಸೇರ್ಪಡೆ ಆಗಿದ್ದಾರೆ.  

Continue Reading