ರಾಜ್ಯ ಸಚಿವ ಸಂಪುಟ ವಿಸ್ತರಣೆ ಪೂರ್ಣ: 20 ಮಂದಿಗೆ ಸಚಿವ ಸ್ಥಾನ, 13 ಹೊಸ ಮುಖಗಳಿಗೆ ಅವಕಾಶ,  ಹೆಬ್ಬಾಳಕರ್, ಆರ್ವಿಡಿಗೆ ನಿರಾಶೆ

ಬೆಂಗಳೂರು:  ಹಲವು ದಿನಗಳ ರಾಜಕೀಯ ಚರ್ಚೆ, ಲೆಕ್ಕಾಚಾರ ಮತ್ತು ತೀವ್ರ ನಿರೀಕ್ಷೆಗೆ ತೆರೆ ಬಿದ್ದಿದ್ದು, ರಾಜ್ಯ ಸರ್ಕಾರದ ಸಚಿವ ಸಂಪುಟವನ್ನು ಸೋಮವಾರ ವಿಸ್ತರಿಸಲಾಗಿದೆ. ಒಟ್ಟು 20 ಮಂದಿ ಶಾಸಕರು ಸಚಿವರಾಗಿ ಆಯ್ಕೆಯಾಗಿದ್ದು, ಅವರ ಅಧಿಕೃತ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಪೈಕಿ 13 ಮಂದಿ ಮೊದಲ ಬಾರಿಗೆ ಸಚಿವ ಸಂಪುಟ ಪ್ರವೇಶಿಸಿದ್ದು, ಒಬ್ಬ ಮಹಿಳಾ ಶಾಸಕರಿಗೆ ಅವಕಾಶ ಕಲ್ಪಿಸಲಾಗಿದೆ. ನೂತನ ಸಚಿವರು ಸೋಮವಾರ ಸಂಜೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಚಿವ […]

Continue Reading

ಉತ್ತರ ಕನ್ನಡಕ್ಕೆ ಮತ್ತೆ ಸಚಿವ ಸ್ಥಾನ: ಮಂಕಾಳ್ ಎಸ್. ವೈದ್ಯ ಸಂಪುಟಕ್ಕೆ ಸೇರ್ಪಡೆ

ಬೆಂಗಳೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ್ ಎಸ್. ವೈದ್ಯ ಅವರಿಗೆ ಸಚಿವ ಸ್ಥಾನ ದೊರೆತಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಹೊಸ ಚೈತನ್ಯ ಮೂಡಿದೆ. ಸಚಿವ ಸಂಪುಟದಲ್ಲಿ ಉತ್ತರ ಕನ್ನಡಕ್ಕೆ ಮತ್ತೆ ಪ್ರಾತಿನಿಧ್ಯ ಸಿಕ್ಕಿರುವುದು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಮಂಕಾಳ್ ಎಸ್. ವೈದ್ಯ ಅವರು ಕಾಂಗ್ರೆಸ್‌ನ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ನಾಯಕರಾಗಿದ್ದು, ಪಕ್ಷದ ನಾಯಕತ್ವದ ವಿಶ್ವಾಸ ಗಳಿಸಿರುವ ಮುಖಂಡರಲ್ಲಿ ಒಬ್ಬರಾಗಿದ್ದಾರೆ. ಕ್ಷೇತ್ರದ ಜನರೊಂದಿಗೆ […]

Continue Reading

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟನೆ; ಚಾಮುಂಡೇಶ್ವರಿಗೆ ಪ್ರಣಾಮ ಸಲ್ಲಿಸಿದ ಪ್ರಧಾನಿ ಮೋದಿ

ಮೈಸೂರು: ಭಾರತದ ಯುವಶಕ್ತಿಯೇ ದೇಶದ ಅತಿದೊಡ್ಡ ಸಾಮರ್ಥ್ಯವಾಗಿದ್ದು, ಯುವಕರ ಶಕ್ತಿ ಮತ್ತು ಪ್ರತಿಭೆಯ ಬಲದಿಂದಲೇ ಭಾರತ ಇಂದು ವಿಶ್ವದ ಅತ್ಯಂತ ಚುರುಕಾದ ರಾಷ್ಟ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮೈಸೂರಿನ ರಾಮಕೃಷ್ಣ ಆಶ್ರಮದ ವತಿಯಿಂದ ನಿರ್ಮಿಸಲಾದ ವಿವೇಕ ಸ್ಮಾರಕವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, “ಸ್ವಾಮಿ ವಿವೇಕಾನಂದರು ಕಂಡಿದ್ದ ಶಕ್ತಿಶಾಲಿ ಭಾರತದ ಕನಸನ್ನು ಸಾಕಾರಗೊಳಿಸುವ ಹೊಣೆ ಇಂದಿನ ಯುವಜನರ ಮೇಲಿದೆ” ಎಂದು ಹೇಳಿದರು. ಭಾಷಣದ ಆರಂಭದಲ್ಲೇ ಕನ್ನಡದಲ್ಲಿ “ಎಲ್ಲರಿಗೂ ನನ್ನ ನಮಸ್ಕಾರಗಳು” ಎಂದು […]

Continue Reading

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪ್ರಧಾನಿಗೆ ಸಿಎಂ ಡಿಕೆಶಿ ಮನವಿ

ಮೈಸೂರು: ಭಾರತ ಪ್ರಗತಿ ಸಾಧಿಸಬೇಕಾದರೆ, ಕರ್ನಾಟಕದೊಂದಿಗೆ ಪ್ರಗತಿ ಸಾಧಿಸಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಒಟ್ಟಾಗಿ ಕೆಲಸ ಮಾಡೋಣ, ಕರ್ನಾಟಕ್ಕೆ ನೆರವು ನೀಡುವಾಗ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಶನಿವಾರ ಮಾತನಾಡಿದರು. “ವಿವೇಕಾನಂದರ ತ್ಯಾಗ ನಮಗೆ ಸ್ಫೂರ್ತಿಯಾಗಬೇಕಿದೆ. ಅವರ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಈ ಕಾರ್ಯಕ್ರಮ ಯುವ ಕ್ರಾಂತಿಯ ಐತಿಹಾಸಿಕ […]

Continue Reading

ಶಾಸಕ ಯಶ್ ಪಾಲ್ ಸುವರ್ಣ ಹೇಳಿಕೆ, ತಕ್ಷಣವೇ ಹಿಂಪಡೆಯಬೇಕು: ಮಮತಾ ಗಟ್ಟಿ ಆಗ್ರಹ

ಮಂಗಳೂರು: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ನೀಡಿರುವ ಹೇಳಿಕೆ ರಾಜಕೀಯ ಸಂಸ್ಕೃತಿಗೆ ಧಕ್ಕೆ ತರುವಂತಿದ್ದು, ಅದನ್ನು ತಕ್ಷಣವೇ ಹಿಂಪಡೆದು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ವ್ಯಕ್ತಿಯ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಆರೋಪಗಳನ್ನು ಮಾಡುವುದು ಅತ್ಯಂತ ಖಂಡನೀಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಜನಪ್ರತಿನಿಧಿಗಳು ವೈಯಕ್ತಿಕ ನಿಂದನೆಗಳಲ್ಲಿ […]

Continue Reading

ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ, ಶಾಸಕ ಯಶ್ ಪಾಲ್ ವಿರುದ್ಧ ಮಾಜಿ ಸಚಿವ ರಮಾನಾಥ ರೈ ಸಿಡಿಮಿಡಿ

ಮಂಗಳೂರು: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ಹೇಳಿಕೆ ದ್ವೇಷಪೂರಿತ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಅವರನ್ನು ತಕ್ಷಣವೇ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ದೇಶದ ಅಭಿವೃದ್ಧಿಗೆ ಜವಾಹರಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಕುಟುಂಬವು ಮಹತ್ತರ ಕೊಡುಗೆ ನೀಡಿದೆ. ಅಂತಹ ಕುಟುಂಬದ ಹಿನ್ನೆಲೆ ಹೊಂದಿರುವ ರಾಹುಲ್ ಗಾಂಧಿ ಅವರ […]

Continue Reading

ರಾಹುಲ್ ಗಾಂಧಿ ವಿರುದ್ಧ ಯಶ್ ಪಾಲ ಸುವರ್ಣ ಹೇಳಿಕೆ, ವಿಕೃತ ಮನಸ್ಸಿನದ್ದು: ಸಚಿವ ಖಾದರ್

ಮಂಗಳೂರು: ಶಾಸಕ ಯಶ್ ಪಾಲ್ ಸುವರ್ಣರದ್ದು ನಾಲಾಯಕ್ ಹೇಳಿಕೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿಲ್ಲ, ಯಾಕೆಂದರೆ ಅವರು ರಾಹುಲ್ ಗಾಂಧಿ ಕಾಲಿನ ಕಿರು ಬೆರಳಿಗೂ ಸಮವಲ್ಲ. ಅವರೆಲ್ಲಿ, ಇವರೆಲ್ಲಿ? ಇಂತಹ ಹೇಳಿಕೆಯಿಂದ ಏನು ಪ್ರಯೋಜನ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು. ಕರಾವಳಿಗೆ ಎಲ್ಲ ವಿಚಾರದಲ್ಲೂ ಘನತೆ, ಗೌರವ ಇದೆ. ಎಲ್ಲ ಪಕ್ಷದ ಶಾಸಕರು ಕರಾವಳಿ ಗೌರವವನ್ನು ಉಳಿಸಿಕೊಂಡು ಬಂದಿದ್ದಾರೆ. ಯಶ್ ಪಾಲ್ ಅವರ ಹೇಳಿಕೆ ಕಪ್ಪು ಚುಕ್ಕೆ ಆಗಿದ್ದು ಅವರದ್ದೇ […]

Continue Reading

ಯಶ್‌ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಡಾ. ಮಂಜುನಾಥ ಭಂಡಾರಿ

ಮಂಗಳೂರು: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ನೀಡಿರುವ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದ ಪರವಾಗಿ ನಡೆದ ಹೋರಾಟಕ್ಕೆ ಬೆಂಬಲ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ನಿರಾಧಾರ ಆರೋಪ ಹಾಗೂ ಬೆದರಿಕೆ ಹಾಕಿರುವುದು […]

Continue Reading

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ: ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿದ ಆರೋಪದಡಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಕಾಂಗ್ರೆಸ್ ಮುಖಂಡರು ಕಾನೂನು […]

Continue Reading

ಅಮೆರಿಕದಲ್ಲಿ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಆರೋಗ್ಯ ಸಚಿವ ಖಾದರ್

ಮಂಗಳೂರು: ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್ವಿಲ್ಲೆಯ ಯೆಲ್ಲೋ ಬಾಕ್ಸ್ ಸಭಾಂಗಣದಲ್ಲಿ ನಡೆದ ಅಮೆರಿಕನ್ ಬಹುಜನಾಂಗೀಯ ಆಯೋಗದ 15ನೇ ವಾರ್ಷಿಕ ಜಾಗತಿಕ ಸಾಧಕರ ಸನ್ಮಾನ ಸಮಾರಂಭದಲ್ಲಿ ಪ್ರತಿಷ್ಠಿತ ಜಾಗತಿಕ ನಾಗರಿಕ ನಾಯಕತ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿ, ಈ ಗೌರವ ತಮ್ಮ ಸಾರ್ವಜನಿಕ ಸೇವೆಗೆ ದೊರೆತ ಮಹತ್ವದ ಮಾನ್ಯತೆ ಆಗಿದ್ದು, ಜನಸೇವೆಯ ಹಾದಿಯಲ್ಲಿ ಇನ್ನಷ್ಟು ಜವಾಬ್ದಾರಿಯಿಂದ ಕೆಲಸ ಮಾಡಲು ಇದು ಪ್ರೇರಣೆ ನೀಡುತ್ತದೆ. ಈ ಪ್ರಶಸ್ತಿಯನ್ನು ಕರ್ನಾಟಕದ […]

Continue Reading