ರಾಜ್ಯದ ಸುದೀರ್ಘ ಸಿಎಂ ಆಗಿದ್ದ ಸಿದ್ದರಾಮಯ್ಯ ಮಹತ್ವದ ಘೋಷಣೆ, ಚುನಾವಣಾ ರಾಜಕೀಯಕ್ಕೆ ಗುಡ್ ಬೈ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಘೋಷಣೆ ಮಾಡಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿದರೂ ಸಾರ್ವಜನಿಕ ಬದುಕಿನಲ್ಲಿ ಸಕ್ರಿಯ ಆಗಿಯೇ ಉಳಿದು ಜನರ ಪರವಾಗಿ ಧ್ವನಿ ಆಗುವುದಾಗಿ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಳಿಕ ತಮ್ಮ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ಹಿಂದೆ ಚುನಾವಣೆಗೆ ಸ್ಪರ್ಧಿಸಿದಾಗ ಕ್ಷೇತ್ರದ ಜನರೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸುತ್ತಿದ್ದರು. […]

Continue Reading

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಅಮಾನವೀಯ ಕೃತ್ಯ, ಸಚಿವರ ರಾಜೀನಾಮೆಗೆ ಪದ್ಮರಾಜ್ ಪೂಜಾರಿ ಆಗ್ರಹ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅದರ ಪರಿಣಾಮವಾಗಿ ದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿಯುವಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಆರೋಪಿಸಿದರು. ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪೊಲೀಸರು ನಡೆಸಿಕೊಂಡಿರುವ ರೀತಿಯು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದ್ದು, ಕೇಂದ್ರ ಸರ್ಕಾರ ಇದಕ್ಕೆ ಉತ್ತರಿಸಬೇಕಿದೆ. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ […]

Continue Reading

ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರತಿಭಟನೆ ವೇಳೆ ಪೊಲೀಸರು ತಮ್ಮನ್ನು ವಶಕ್ಕೆ ಪಡೆಯುವಾಗ ಕೆಲ ಸಿಬ್ಬಂದಿಯೇ “ಈ ಸರ್ಕಾರವನ್ನು ಕಿತ್ತೊಗೆಯಿರಿ” ಎಂದು ಕಿವಿಯಲ್ಲಿ ಪಿಸುಗುಟ್ಟಿದ್ದರು ಎಂದು ಅವರು ನವದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲಪ್ರಯೋಗವನ್ನು ಖಂಡಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ […]

Continue Reading

ರಾಮಮಂದಿರ ಹುಂಡಿ ಕಳವು ಪ್ರಕರಣ, ಭಕ್ತರ ನಂಬಿಕೆಗೆ ಆಘಾತ: ವಿನಯ್ ಕುಮಾರ್ ಸೊರಕೆ

ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣವು ಕೋಟ್ಯಂತರ ರಾಮಭಕ್ತರ ನಂಬಿಕೆಗೆ ಧಕ್ಕೆ ತಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆಗ್ರಹಿಸಿದರು. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ತನಿಖಾ ಸಂಸ್ಥೆಗಳಾದ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ […]

Continue Reading

ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆಗೆ ಆದ್ಯತೆ ನೀಡಿ: ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯ

ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಮತದಾರರ ಪಟ್ಟಿಯ ಪರಿಷ್ಕರಣೆಯ ಜೊತೆಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆ ಕಾರ್ಯಕ್ಕೂ ಆದ್ಯತೆ ನೀಡಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾದೇಶದ ನಾಗರಿಕರು ಅಕ್ರಮವಾಗಿ ದೇಶ ಪ್ರವೇಶಿಸಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮುಕ್ಕ ಹಾಗೂ ಕೋಡಿಕಲ್ ಪ್ರದೇಶಗಳಲ್ಲಿ ಈಗಾಗಲೇ 16 ಮಂದಿ ಅಕ್ರಮ ವಲಸಿಗರನ್ನು ಪೊಲೀಸರು […]

Continue Reading

ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಹೆಚ್ಚುವರಿ ಮೀಸಲಾತಿ, ಕೇಂದ್ರದಿಂದ ಅನ್ಯಾಯ: ಮಾಜಿ ಸಂಸದ ಉಗ್ರಪ್ಪ

ಮಂಗಳೂರು: ರಾಮ ಮಂದಿರದ ಹೆಸರಿನಲ್ಲಿ ಸಂಗ್ರಹಿಸಲಾದ ಹಣದ ದುರ್ಬಳಕೆ ಆರೋಪಗಳ ಕುರಿತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಹಾಲಿ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಸ್ಸಿ, ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ತಿದ್ದುಪಡಿಯನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿದ್ದರೂ, ಅದನ್ನು ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸದಿರುವುದರಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಸಾವಿರಾರು ಅಭ್ಯರ್ಥಿಗಳಿಗೆ ಅನ್ಯಾಯ ಆಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ವಿ.ಎಸ್. […]

Continue Reading

ಶಾಸಕ ವೇದವ್ಯಾಸ ಕಾಮತ್ ವಿರುದ್ಧದ ಎಫ್ಐಆರ್ ಹೈಕೋರ್ಟ್ ರದ್ದು, ರಾಜಕೀಯ ಪ್ರೇರಿತ ದೂರ ಆಗಿತ್ತು: ಕಾಮತ್

ಮಂಗಳೂರು: ಶಕ್ತಿನಗರದ ಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿತು. ಕಳೆದ ವರ್ಷ ಮಾರ್ಚ್ ನಲ್ಲಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಇದೊಂದು ರಾಜಕೀಯ ಪ್ರೇರಿತ ದುರುದ್ದೇಶದ ಪ್ರಕರಣ ಆಗಿತ್ತು. ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನನ್ನ […]

Continue Reading

ಜನನ-ಮರಣ ಪ್ರಮಾಣಪತ್ರ ಅರ್ಜಿ ಸ್ವೀಕಾರ ಬಂದ್ ಎಂಬ ನಾಮಪಲಕ, ಪಾಲಿಕೆ ವಿರುದ್ಧ ಶಾಸಕ ವೇವ್ಯಾಸ್ ಕಾಮತ್ ಕೆಂಡಾಮಂಡಲ

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಎಸ್‌ಐಆರ್ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿರುವ ನೆಪದಲ್ಲಿ ಜುಲೈ 29 ರವರೆಗೆ ಜನನ ಮತ್ತು ಮರಣ ನೋಂದಣಿ ಅರ್ಜಿಗಳ ಸ್ವೀಕಾರ ಸ್ಥಗಿತಗೊಳಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಜನರ ಅಗತ್ಯ ಸೇವೆಗಳನ್ನು ಸ್ಥಗಿತಗೊಳಿಸಿರುವ ಮಹಾನಗರ ಪಾಲಿಕೆ ಆಡಳಿತ ಕೂಡಲೇ ಈ ನಿರ್ಧಾರ ಹಿಂಪಡೆದು ಅರ್ಜಿ ಸ್ವೀಕಾರ ಹಾಗೂ ಪ್ರಮಾಣ ಪತ್ರ ವಿತರಣೆಯನ್ನು ಸುಗಮಗೊಳಿಸಬೇಕು. ಆಡಳಿತಾಧಿಕಾರಿ ಮೂಲಕ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಇನ್ನು ಒಂದು ತಿಂಗಳು […]

Continue Reading

ನೀಟ್ ಅಕ್ರಮ, ಸಿಡಿದ ಎನ್‌ಎಸ್‌ಯುಐ, ಪ್ರಧಾನಿ ವಿರುದ್ಧ ಸಹಿ ಸಂಗ್ರಹ ಅಭಿಯಾನ: ಸುಹಾನ್ ಆಳ್ವ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕ ಜಿಲ್ಲೆಯಾದ್ಯಂತ ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ. ಸಂಗ್ರಹವಾಗುವ ಪೋಸ್ಟ್‌ಕಾರ್ಡ್‌ಗಳನ್ನು ಪ್ರಧಾನ ಮಂತ್ರಿಗೆ ಕಳುಹಿಸಲಾಗುವುದು ಎಂದು ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಕಾಲೇಜುಗಳಲ್ಲಿ ಸಹಿ ಸಂಗ್ರಹ ನಡೆಯಲಿದ್ದು, ನೀಟ್ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ […]

Continue Reading

3 ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ ಕಾಂಗ್ರೆಸ್ ಸರ್ಕಾರ: ಬಿಜೆಪಿ ವಕ್ತಾರ ಚಂದ್ರಶೇಖರ್

ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿರುವ ಬೆನ್ನಲ್ಲೇ ಆಡಳಿತದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಆರ್ಥಿಕವಾಗಿ ಸದೃಢವಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಸಾಲದ ಸುಳಿಗೆ ಸಿಲುಕಿಸಿದ್ದು, ಇದೇ ಆಡಳಿತ ಇನ್ನೆರಡು ವರ್ಷ ಮುಂದುವರಿದರೆ ಜನಸಾಮಾನ್ಯರ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ರಾಜ್ಯದ ಆಡಳಿತ ವ್ಯವಸ್ಥೆ ಎಂಜಿನ್ ಕೆಟ್ಟು, ಟಯರ್ ಪಂಚರ್ ಆಗಿರುವ ಬಸ್ಸಿನಂತಾಗಿದೆ. ಮುಖ್ಯಮಂತ್ರಿ ಬದಲಾದರೂ ಆಡಳಿತ ವ್ಯವಸ್ಥೆಯ ವೈಫಲ್ಯ ಮಾತ್ರ ಬದಲಾಗಿಲ್ಲ. […]

Continue Reading