ಗ್ಯಾರಂಟಿ ಭ್ರಷ್ಟಾಚಾರ, ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ವಾಗ್ದಾಳಿ

ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹೆಸರಿನಲ್ಲಿ ಲಕ್ಷಾಂತರ ಅರ್ಹ ಫಲಾನುಭವಿಗಳ ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕತ್ತರಿ ಹಾಕಿದ್ದು, ಇದರ ಮೂಲಕ ತನ್ನ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬ್ಯಾಂಕ್ ಖಾತೆಯೇ ಇಲ್ಲದ ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ಪಾವತಿಯಾಗಿರುವುದು, ಒಂದೇ ಬ್ಯಾಂಕ್ ಖಾತೆಗಳಿಗೆ ಹಲವು ಬಾರಿ ಹಣ ವರ್ಗಾವಣೆಯಾಗಿರುವುದು ಹಾಗೂ ಮರಣ ಹೊಂದಿದವರ ಹೆಸರಿಗೂ […]

Continue Reading

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಟಾಚಾರ, ಪಕ್ಷ ಸಂಘಟನೆಗೆ ರಾಜ್ಯದಾದ್ಯಂತ ಪ್ರವಾಸ: ವಿಜಯೇಂದ್ರ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನ ಪ್ರಕರಣದ ಕುರಿತು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಳ್ಳಿಹಾಕಿದ್ದು, ಈ ಬೆಳವಣಿಗೆಯೊಂದಿಗೆ ತಮ್ಮ ಯಾವುದೇ ಸಂಬಂಧ ಇಲ್ಲ. ಪಕ್ಷದ ವಿರುದ್ಧ ನಡೆದುಕೊಳ್ಳುವ ಅಥವಾ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಧರ್ಮಸ್ಥಳಕ್ಕೆ ಆಗಮಿಸುವ ಮೊದಲು ನಾಲ್ಕು ದಿನಗಳ ಕಾಲ ನವದೆಹಲಿಯಲ್ಲಿ ಬಿಜೆಪಿ […]

Continue Reading

ಮುಂಗಾರು ಎಚ್ಚರಿಕೆ: ಉತ್ತರ ಕನ್ನಡ ಸೇರಿ 4 ಸೂಕ್ಷ್ಮ ಜಿಲ್ಲೆಗಳ ಉಸ್ತುವಾರಿ ಯು.ಟಿ. ಖಾದರ್‌ಗೆ, 13 ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಮುಂಗಾರು ಮಳೆ ಹಾಗೂ ಸಂಭವನೀಯ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿವಿಧ ಜಿಲ್ಲೆಗಳಿಗೆ ಸಚಿವರನ್ನು ಪ್ರಕೃತಿ ವಿಕೋಪ ಉಸ್ತುವಾರಿಗಳಾಗಿ ನೇಮಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅತಿ ಹೆಚ್ಚು ಮಳೆ ಹಾಗೂ ಪ್ರಕೃತಿ ವಿಕೋಪಗಳಿಗೆ ತುತ್ತಾಗುವ ಸೂಕ್ಷ್ಮ ಪ್ರದೇಶಗಳ ಪೈಕಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ವಹಿಸಲಾಗಿದೆ. ಇದರ ಜೊತೆಗೆ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ […]

Continue Reading

ಮಂಜನಾಡಿ ಗುಡ್ಡ ಕುಸಿತ, ಸಂತ್ರಸ್ತೆಯ ಮನೆಗೆ ಎಂಎಲ್ಸಿ ಕಿಶೋರ್ ಕುಮಾರ್ ಭೇಟಿ, ಸಾಂತ್ವನ

ಮಂಗಳೂರು: ಕಳೆದ ವರ್ಷ ಮಂಗಳೂರು ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಕುಟುಂಬವನ್ನೇ ಕಳೆದುಕೊಂಡು, ಗಂಭೀರ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಅಶ್ವಿನಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ದುರಂತದಲ್ಲಿ ತಮ್ಮ ಇಬ್ಬರು ಮಕ್ಕಳು ಮತ್ತು ಅತ್ತೆಯನ್ನು ಕಳೆದುಕೊಂಡಿದ್ದ ಅಶ್ವಿನಿ, ಸ್ವತಃ ಎರಡು ಕಾಲುಗಳನ್ನು ಕಳೆದುಕೊಂಡು, ಅವರ ಮಾವ ಒಂದು ಕಾಲನ್ನು ಕಳೆದುಕೊಂಡು ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಈ ದುರಂತದ ಬಳಿಕ ಮನೆ ಮತ್ತು ಬದುಕು […]

Continue Reading

ವಿಧಾನ ಪರಿಷತ್ ಫೈಟ್: ಕಾಂಗ್ರೆಸ್‌ಗೆ 5 ಸ್ಥಾನಗಳ ಭರ್ಜರಿ ಗೆಲುವು, ಅಡ್ಡ ಮತದಾನ ಓಟಿಂಗ್ ಏಟು, ಮೈತ್ರಿ ಸದಸ್ಯರಿಂದಲೇ ಕೈಗೆ ಮತ, ಜೆಡಿಎಸ್ ಗೆ ಹೀನಾಯ ಸೋಲು

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ಐವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಚುನಾವಣಾ ಫಲಿತಾಂಶವು ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣ ಆಗಿದೆ. ಚುನಾವಣೆಯಲ್ಲಿ ಮೈತ್ರಿ ಪಕ್ಷದ ಕೆಲವು ಶಾಸಕರು ಅಡ್ಡಮತದಾನ ಮಾಡಿರುವುದು ಫಲಿತಾಂಶದ ಮೇಲೆ ಮಹತ್ವದ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಬಿಜೆಪಿ 3 ರಿಂದ 4 ಮಂದಿ ಹಾಗೂ ಜೆಡಿಎಸ್‌ 6 ರಿಂದ 7 ಮಂದಿ ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯ […]

Continue Reading

ವಿಧಾನಸಭೆಯಿಂದ ಮೇಲ್ಮನೆ ಚುನಾವಣೆ: ಶಿವರಾಜ್ ಎಸ್. ತಂಗಡಗಿ ಮತದಾನ

ಬೆಂಗಳೂರು: ವಿಧಾನಸಭೆಯಿಂದ ಮೇಲ್ಮನೆಗೆ ನಡೆದ ಚುನಾವಣೆಯ ಸಂದರ್ಭದಲ್ಲಿ ಹಿರಿಯ ಶಾಸಕ ಶಿವರಾಜ್ ಎಸ್. ತಂಗಡಗಿ ಅವರು ವಿಧಾನಸೌಧದಲ್ಲಿ ಮತ ಚಲಾಯಿಸಿದರು. ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದ್ದು, ಜನಪ್ರತಿನಿಧಿಗಳು ತಮ್ಮ ಮತ ಹಕ್ಕನ್ನು ಚಲಾಯಿಸಿದರು.

Continue Reading

ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ: ಐವನ್ ಡಿಸೋಜ

ಮಂಗಳೂರು: ಬಿಜೆಪಿಯು ವೋಟ್ ಚೋರಿ ಜತೆಗೆ ಸೀಟ್ ಚೋರಿಯನ್ನೂ ನಡೆಸುತ್ತಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ ಎಂದರು. ಜಾರ್ಖಂಡ್‌ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ನಾಮಪತ್ರದ ದೋಷ ಸರಿಪಡಿಸಲು ಅವಕಾಶ ನೀಡಿದ್ದರೂ, ಮೀನಾಕ್ಷಿ ನಟರಾಜನ್ ಅವರಿಗೆ ಅದೇ ಅವಕಾಶ […]

Continue Reading

ಭಾರತ ಈಗ ಸೂಪರ್ ಎಕಾನಮಿ, 2031ಕ್ಕೆ ವಿಶ್ವದ ಟಾಪ್ 3 ದೇಶಗಳಲ್ಲಿ ಭಾರತ: ರಾಧಾ ಮೋಹನ್ ದಾಸ್ ಅಗರ್ವಾಲ್

ಮಂಗಳೂರು: ಜಾಗತಿಕ ಆರ್ಥಿಕ ಹಿಂಜರಿತ, ಇಂಧನ ಬಿಕ್ಕಟ್ಟು ಹಾಗೂ ವಿವಿಧ ಅಂತರ ರಾಷ್ಟ್ರೀಯ ಸಂಘರ್ಷಗಳ ನಡುವೆಯೂ ಭಾರತಶೇ 7.7 ರ ಆರ್ಥಿಕ ಬೆಳವಣಿಗೆ ದರವನ್ನು ಸಾಧಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಹಾಗೂ ಗೃಹ ಸಚಿವಾಲಯದ ಸ್ಥಾಯಿ ಸಮಿತಿ ಅಧ್ಯಕ್ಷ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 2013–14ರಲ್ಲಿ 1.9 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದ ಭಾರತ ಈಗ 4.1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆದಿದೆ. ಭಾರತದ […]

Continue Reading

ಪೌರಕಾರ್ಮಿಕರಿಗೆ ನೆಪ ಹೇಳದೇ ಆದ್ಯತೆಯಲ್ಲಿ ಎಲ್ಲರಿಗೂ ಮನೆ ನಿರ್ಮಾಣ ಮಾಡಿಕೊಡಿ: ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು

ಕಾರವಾರ: ಜಿಲ್ಲೆಯ ಎಲ್ಲಾ ನಗರಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ವ್ಯವಸ್ಥೆಯನ್ನು ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಕಾರವಾರ ಇವರ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ಪೌರಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ಹಾಗೂ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

Continue Reading

ಗೃಹಲಕ್ಷ್ಮೀ ಹಣ ಪಾವತಿ ಸ್ಥಗಿತ, ರಾಜ್ಯ ಸರಕಾರದಿಂದ ಅನ್ಯಾಯ: ಶಾಸಕ ಭರತ್ ಶೆಟ್ಟಿ ಆರೋಪ

ಮಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಲಕ್ಷಾಂತರ ಮಹಿಳೆಯರಿಗೆ ಅನ್ಯಾಯ ಮಾಡಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು. ಚುನಾವಣೆ ಪೂರ್ವದಲ್ಲಿ ಬಿಪಿಎಲ್ ಅಥವಾ ಎಪಿಎಲ್ ಎಂಬ ಭೇದವಿಲ್ಲದೆ ಮಹಿಳೆಯರ ಖಾತೆಗೆ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇದೀಗ ಬಿಪಿಎಲ್ ನೆಪ ಒಡ್ಡಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಹೊರಗಿಡುವ ಮೂಲಕ ಮಹಿಳೆಯರಿಗೆ ದ್ರೋಹ ಮಾಡಲಾಗಿದೆ ಎಂದು ಅವರು ಟೀಕಿಸಿದರು. ಗೃಹಲಕ್ಷ್ಮೀ ಯೋಜನೆಯಡಿ […]

Continue Reading