ಗೃಹಲಕ್ಷ್ಮೀ ಹಣ ಪಾವತಿ ಸ್ಥಗಿತ, ರಾಜ್ಯ ಸರಕಾರದಿಂದ ಅನ್ಯಾಯ: ಶಾಸಕ ಭರತ್ ಶೆಟ್ಟಿ ಆರೋಪ

ಮಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಲಕ್ಷಾಂತರ ಮಹಿಳೆಯರಿಗೆ ಅನ್ಯಾಯ ಮಾಡಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು. ಚುನಾವಣೆ ಪೂರ್ವದಲ್ಲಿ ಬಿಪಿಎಲ್ ಅಥವಾ ಎಪಿಎಲ್ ಎಂಬ ಭೇದವಿಲ್ಲದೆ ಮಹಿಳೆಯರ ಖಾತೆಗೆ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇದೀಗ ಬಿಪಿಎಲ್ ನೆಪ ಒಡ್ಡಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಹೊರಗಿಡುವ ಮೂಲಕ ಮಹಿಳೆಯರಿಗೆ ದ್ರೋಹ ಮಾಡಲಾಗಿದೆ ಎಂದು ಅವರು ಟೀಕಿಸಿದರು. ಗೃಹಲಕ್ಷ್ಮೀ ಯೋಜನೆಯಡಿ […]

Continue Reading

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಗೆ ಕೆಪಿಸಿಸಿ ಪಟ್ಟ, ಹೈಕಮಾಂಡ್ ಅಧಿಕೃತ ಆದೇಶ

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ. https://www.karavalidailynews.com/wp-content/uploads/2026/06/PR_PCC_Karnataka-1.pdf ಮೂಲ ಕಾಂಗ್ರೆಸಿಗ ಹಾಗೂ ಹೈಕಮಾಂಡ್ ಗೆ ತೀರಾ ಆಪ್ತರಾಗಿರುವ ಹಿಂದುಳಿದ ವರ್ಗದ ಕಾಂಗ್ರೆಸ್ ಪ್ರಮುಖ ಮುಖಂಡ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದೆ. ಬಿ.ಕೆ.ಹರಿಪ್ರಸಾದ್ ಈಡಿಗ ಸಮುದಾಯದವರಾಗಿದ್ದು, ಕಾಂಗ್ರೆಸ್ ​ನ ಪ್ರಬಲ ನಾಯಕರಾಗಿದ್ದಾರೆ‌. ಅಹಿಂದ ಸಮುದಾಯದವರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದ್ದು, ಮಂತ್ರಿ ಮಂಡಳ ರಚನೆ ಆಗುತ್ತಿದ್ದಂತೆ […]

Continue Reading

ಯು.ಟಿ. ಖಾದರ್ ಸ್ಪೀಕರ್ ಟು ಮಿನಿಸ್ಟರ್ ಜರ್ನಿ, ಕಾರ್ಯಕರ್ತರಲ್ಲಿ ಸಂಭ್ರಮ

ಮಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯ ನಡುವೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಯು.ಟಿ. ಖಾದರ್ ಅವರು ಸ್ಪೀಕರ್ ಟು ಮಿನಿಸ್ಟರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕರಾವಳಿ ಭಾಗದ ಪ್ರಬಲ ನಾಯಕನಾಗಿರುವ ಖಾದರ್ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. ಮಂಗಳೂರು […]

Continue Reading

ಸಿಎಂ ಡಿಕೆಶಿ ಸಂಪುಟಕ್ಕೆ ಪರಮೇಶ್ವರ್ ಡಿಸಿಎಂ ಆಗಿ ಎಂಟ್ರಿ

ಬೆಂಗಳೂರು:ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಸಿಎಂ ಡಿಕೆಶಿ ಅವರ ಸಂಪುಟಕ್ಕೆ ಡಿಸಿಎಂ ಆಗಿ ಸೇರ್ಪಡೆಯಾಗಿದ್ದಾರೆ. ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ಪೂರ್ಣಗೊಂಡಿದ್ದು, ಹೊಸ ಸರ್ಕಾರದ ಕಾರ್ಯವೈಖರಿ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ. ಅನುಭವ ಮತ್ತು ಸಂಘಟನಾ ಸಾಮರ್ಥ್ಯದ ಸಮನ್ವಯದೊಂದಿಗೆ ಹೊಸ ತಂಡ ರಾಜ್ಯದ ಆಡಳಿತವನ್ನು ಮುನ್ನಡೆಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Continue Reading

ಡಿಕೆಶಿ ಸಂಪುಟ ಸೇರಿದ ಹಿರಿ ತಲೆಗಳು, ಖಾದರ್, ಯತೀಂದ್ರ ನ್ಯೂ ಎಂಟ್ರಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಅಗಿ ಡಿಕೆಶಿ ಅವರು ಅಧಿಕಾರದ ಗದ್ದುಗೆ ಹಿಡಿದಿದ್ದು, ಅವರ ಸಂಪುಟದಲ್ಲಿ ಡಾ. ಜಿ .ಪರಮೇಶ್ವರ್, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಯು.ಟಿ. ಖಾದರ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಕೆ.ಎಚ್.ಮುನಿಯಪ್ಪ, ಈಶ್ವರ್ ಖಂಡ್ರೆ, ಡಾ. ಶರಣ ಪ್ರಕಾಶ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಕೃಷ್ಣ ಬೈರೇಗೌಡ್ ಅವರು ಸಂಪುಟ ದರ್ಜೆಯ ಸ್ಥಾನ ಮಾನ ಪಡೆದುಕೊಂಡಿದ್ದು, ನೂತನ ಸಂಪುಟ ಸೇರ್ಪಡೆ ಆಗಿದ್ದಾರೆ.  

Continue Reading

ಸಂವಿಧಾನ ಪುಸ್ತಕ ಹಿಡಿದು ಡಿಕೆಶಿ ಸಿಎಂ ಪ್ರಮಾಣ: ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರತಿಜ್ಞೆ

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಬಹುನಿರೀಕ್ಷಿತ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಬುಧವಾರ ಅಧಿಕೃತ ತೆರೆ ಬಿದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ವಿಶೇಷವೆಂದರೆ, ಡಿ.ಕೆ. ಶಿವಕುಮಾರ್ ಅವರು ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವ ವೇಳೆ ಅವರು […]

Continue Reading

ಸಚಿವ ಸಂಪುಟದಲ್ಲಿ ಎಂಎಲ್ಸಿ ಐವನ್ ಡಿಸೋಜಗೆ ಸಚಿವ ಸ್ಥಾನ ನೀಡುವಂತೆ ಜಾರ್ಜ್ ಫರ್ನಾಂಡಿಸ್ ಆಗ್ರಹ

ಕಾರವಾರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕ್ಯಾಥೊಲಿಕ್ ಅಸೋಸಿಯೇಶನ್ ಅಧ್ಯಕ್ಷ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು, ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಐವಾನ್ ಡಿಸೋಜಾ ದೀರ್ಘಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಕಾನೂನು ತಜ್ಞರಾಗಿರುವ ಅವರು ಹಲವು ದಶಕಗಳ ರಾಜಕೀಯ ಅನುಭವ ಹೊಂದಿದ್ದು, ಶಿಕ್ಷಣ, ಆರೋಗ್ಯ, ನಿರುದ್ಯೋಗ ನಿವಾರಣೆ ಸೇರಿದಂತೆ ವಿವಿಧ […]

Continue Reading

ಮಂತ್ರಿ ಆಗುವವರ ಹೆಸರು ಇನ್ನು ಸಸ್ಪೆನ್ಸ್, ಹೈಕಮಾಂಡ್ ಕಸರತ್ತು, ಮುಖಂಡರ ಪೀಕಲಾಟ

ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸರಕಾರದ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ ಹಾಗೂ ಉಪ ಮುಖ್ಯಮಂತ್ರಿ ಸ್ಥಾನಗಳ ಕುರಿತು ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಂಗಾಮಿ ಸಿಎಂ ಸಿದ್ದರಾಮಯ್ಯ ನವದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಆದರೆ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಹೊರಗಡೆ ಇಡಬೇಕು ಎಂಬ ಗೊಂದಲದಲ್ಲಿ ಪಟ್ಟಿ ಫೈನಲ್ ಕೆಲಸಕ್ಕೆ ಹಿನ್ನಡೆ ಆಗುತ್ತಿದೆ. ಬುಧವಾರ ಸಂಜೆ 4 .05 ಗಂಟೆಗೆ ನೂತನ ಮುಖ್ಯಮಂತ್ರಿ […]

Continue Reading

ಕರಾವಳಿ ಭಾಗದ ಹಿರಿಯ ಶಾಸಕ ಯು.ಟಿ. ಖಾದರ್ ಗೆ ಬಹುತೇಕ ಸಚಿವ ಸ್ಥಾನ ಪಕ್ಕಾ!

ಮಂಗಳೂರು: ಹಾಲಿ ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರಿಗೆ ಬಹುತೇಕ ಸಚಿವ ಸ್ಥಾನ ಫಿಕ್ಸ್ ಆಗಿದೆ ಎಂದು ಹೇಳಾಗುತ್ತಿದ್ದು, ಬುಧವಾರ ಬೆಳಿಗ್ಗೆ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಂತ್ರಿ ಆಗುವ ಎಲ್ಲ ಸಾಧ್ಯತೆ ಇವೆ ಎಂದು ಅವರು ಆಪ್ತ ಮೂಲಗಳು ತಿಳಿಸಿವೆ. ಯು.ಟಿ. ಖಾದರ್ ಅವರು ಸಿದ್ದರಾಮಯ್ಯ ಅವರ ಸರಕಾರದ ಅವಧಿಯ ವೇಳೆಯೇ ಮಂತ್ರಿ ಆಗಬೇಕು ಎಂಬ ಪ್ರಯತ್ನ ನಡೆಸಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಅವರಿಗೆ ಸ್ಪೀಕರ್ ಸ್ಥಾನ ಅಲಂಕರಿಸಬೇಕಾಯಿತು. […]

Continue Reading

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅಡಿಯೊ ವೈರಲ್, ರಾಜಕೀಯದಲ್ಲಿ ದೊಡ್ಡ ಸಂಚಲನ

ಬೆಂಗಳೂರು: ಸದ್ಯ ರಾಜ್ಯ ರಾಜಕಾರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ಉಪ ಚುನಾವಣೆಯಲ್ಲಿ ಪಕ್ಷೇತರ ಎಸ್ ಡಿಪಿಐ ಅಭ್ಯರ್ಥಿ ಜತೆಗೆ ಮಾತನಾಡಿದ್ದಾರೆ ಎನ್ನಲಾದ ಅಡಿಯೊ ಬಾರಿ ಸಂಚಲನಕ್ಕೆ ಕಾರಣವಾಗಿದೆ. ರಾಜ್ಯದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಹತ್ತು ಜನರಿಗೆ ಸಂಪುಟದಲ್ಲಿ ಆರಂಭಿಕ ಅವಕಾಶ ಸಿಗಲಿದೆ. ಜಮೀರ್ ಅಹ್ಮದ್ ಖಾನ್ ಕೂಡ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಇದ್ದಾರೆ. ಈ ಎಲ್ಲ ಬೆಳವಣಿಗೆಯ ನಂತರದಲ್ಲಿ ಇದೀಗ […]

Continue Reading