ಗೃಹಲಕ್ಷ್ಮೀ ಹಣ ಪಾವತಿ ಸ್ಥಗಿತ, ರಾಜ್ಯ ಸರಕಾರದಿಂದ ಅನ್ಯಾಯ: ಶಾಸಕ ಭರತ್ ಶೆಟ್ಟಿ ಆರೋಪ
ಮಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಲಕ್ಷಾಂತರ ಮಹಿಳೆಯರಿಗೆ ಅನ್ಯಾಯ ಮಾಡಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು. ಚುನಾವಣೆ ಪೂರ್ವದಲ್ಲಿ ಬಿಪಿಎಲ್ ಅಥವಾ ಎಪಿಎಲ್ ಎಂಬ ಭೇದವಿಲ್ಲದೆ ಮಹಿಳೆಯರ ಖಾತೆಗೆ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇದೀಗ ಬಿಪಿಎಲ್ ನೆಪ ಒಡ್ಡಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಹೊರಗಿಡುವ ಮೂಲಕ ಮಹಿಳೆಯರಿಗೆ ದ್ರೋಹ ಮಾಡಲಾಗಿದೆ ಎಂದು ಅವರು ಟೀಕಿಸಿದರು. ಗೃಹಲಕ್ಷ್ಮೀ ಯೋಜನೆಯಡಿ […]
Continue Reading