ಜೂನ್ 21ರಂದು 12 ನೇ ಅಂತರ ರಾಷ್ಟ್ರೀಯ ಯೋಗ ದಿನ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಮಂಗಳೂರು: ಜೂನ್ 21ರಂದು ನಡೆವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನವಾಗಿದೆ. ಈ ಹಿನ್ನೆಲೆಯಲ್ಲಿ ಯೋಗದ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ನಿಟ್ಟಿನಲ್ಲಿ […]

Continue Reading

ಯೋಗ ಅಧಿವೇಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಅಗತ್ಯ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ

ಕಾರವಾರ: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ, ಆಯುಷ್ ಸಚಿವಾಲಯವು ಇದೇ 14 ರಂದು ಗಿನ್ನೆಸ್ ವಿಶ್ವ ದಾಖಲೆಯ ಅತಿದೊಡ್ಡ ಆನ್‌ಲೈನ್ ಯೋಗ ಅಧಿವೇಶನವನ್ನು ಆಯೋಜಿಸುತ್ತಿದ್ದು, ಈ ಸಾಮೂಹಿಕ ಆಚರಣೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಅಂತಾರಾಷ್ಟ್ರೀಯ ಯೋಗ ದಿಚಾರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಗ ಅಧಿವೇಶನವು ದೇಶಾದ್ಯಂತ ಯೋಗ ಸಾಧಕರು ಮತ್ತು ನಾಗರಿಕರನ್ನು ಒಟ್ಟುಗೂಡಿಸುವ […]

Continue Reading

ಅಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಅಖಿಲ ಭಾರತ ಫುಟ್‌ಬಾಲ್ ಟೂರ್ನಿ

ಬೆಂಗಳೂರು: 15 ವರ್ಷ ವಯೋಮಿತಿಯೊಳಗಿನ ಬಾಲಕರಿಗಾಗಿ 14 ನೇ ಅಖಿಲ ಭಾರತ ಫುಟ್‌ಬಾಲ್ (5–ಎ–ಸೈಡ್) ಟೂರ್ನಿಯು ಆಗಸ್ಟ್ 23 ಮತ್ತು 24ರಂದು ಇಲ್ಲಿನ ಕುಕ್‌ಟೌನ್‌ ರಶ್ ಅರೆನಾ ಫುಟ್‌ಬಾಲ್ ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರಾದ ಡೆಂಜಿಲ್ ಫರ್ನಾಂಡಿಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಲೆಗಳು, ಕ್ಲಬ್‌ಗಳು, ಕ್ರೀಡಾ ಅಕಾಡೆಮಿಗಳು, ಸಂಘಗಳು ಹಾಗೂ ವಿವಿಧ ಕ್ರೀಡಾ ಗುಂಪುಗಳಿಗೆ ಟೂರ್ನಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. 2011ರ ಜನವರಿ 1 ಅಥವಾ ನಂತರ ಜನಿಸಿದ ಆಟಗಾರರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ. […]

Continue Reading

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ತೆರೆ: ಸರ್ಫಿಂಗ್ ಓಪನ್‌ನಲ್ಲಿ ಕಮಲಿ ಮೂರ್ತಿಗೆ ಡಬಲ್ ಕಿರೀಟ

ಮಂಗಳೂರು: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಅಂತಿಮ ದಿನ ತಮಿಳುನಾಡಿನ ಯುವ ಸರ್ಫರ್ ಕಮಲಿ ಮೂರ್ತಿ ಮಹಿಳೆಯರ ಓಪನ್ ಹಾಗೂ 18 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಡಬಲ್ ಸಾಧನೆ ಮಾಡಿದ್ದಾರೆ. ಪುರುಷರ ಓಪನ್ ವಿಭಾಗದಲ್ಲಿ ತಮಿಳುನಾಡಿನ ಕಿಶೋರ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, 18 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥ್ವೀಪ್ ಪೂಜಾರ್ ಗೆದ್ದು ಕರ್ನಾಟಕಕ್ಕೆ ಟೂರ್ನಿಯ ಏಕೈಕ ಪ್ರಶಸ್ತಿ ತಂದುಕೊಟ್ಟರು. 14 ವರ್ಷದೊಳಗಿನ (ಗ್ರೋಮ್ಸ್) ವಿಭಾಗದಲ್ಲಿ ಹರೀಶ್ ಪಿ ಮತ್ತು ಧಮಯಂತಿ […]

Continue Reading

ಬ್ಯಾಕ್ ಟು ಬ್ಯಾಕ್ ಆರ್ ಸಿಬಿ ಗೆಲುವಿನ ಪತಾಕೆ, ಐಪಿಎಲ್ ನಲ್ಲಿ ಮತ್ತೇ ಅಜೇಯ, ಕೊಹ್ಲಿ ಆಟಕ್ಕೆ ಪ್ರೇಕ್ಷಕರ ಪಿಧಾ

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈಗ ಸತತ 2 ನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಅಹಮದಾಬಾದ್‌ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್​​ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಸಲವೂ ಕಪ್ ನಮ್ಮದೇ ಎಂದು ಸಾರಿದ್ದ ಅಭಿಮಾನಿಗಳ ಸಂಭ್ರಮವೀಗ ಮುಗಿಲು ಮುಟ್ಟಿದೆ. ಆರ್​​ಸಿಬಿ ಜಯಭೇರಿ […]

Continue Reading

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ : ಅಲೆಗಳ ವಯ್ಯಾರ ಅಬ್ಬರದಲ್ಲಿ ಸರ್ಫರ್ ಗಳ ತೀವ್ರ ಹಣಾಹಣಿ

ಮಂಗಳೂರು: ಇಲ್ಲಿನ ತಣ್ಣೀರು ಭಾವಿಯಲ್ಲಿ ನಡೆಯುತ್ತಿರುವ 7 ನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಸ್ಪರ್ಧೆಯ 2ನೇ ದಿನ ಪುರುಷರ ಓಪನ್ ವಿಭಾಗದ ಸೆಮಿಫೈನಲಿಸ್ಟ್‌ಗಳು ಭರ್ಜರಿ ಪ್ರದರ್ಶನ ನೀಡಿದರು. ಶನಿವಾರ ನಡೆದ ಐದು ವಿಭಾಗಗಳಲ್ಲಿ ಒಟ್ಟು ಆರು ಕ್ವಾರ್ಟರ್‌ಫೈನಲ್ ಹಾಗೂ ಆರು ಸೆಮಿಫೈನಲ್ ಪಂದ್ಯಗಳು ನಡೆದವು. ಪುರುಷರ ಮುಕ್ತ ವಿಭಾಗದ ಕ್ವಾರ್ಟರ್‌ ಫೈನಲ್‌ ನಲ್ಲಿ ಕೇರಳದ ರಮೇಶ್ ಬೂದಿಹಾಳ್ 14.83 ಅಂಕ ಗಳಿಸಿ ಅಗ್ರಸ್ಥಾನ ದಾಖಲಿಸಿದರು. ಶ್ರೀಕಾಂತ್ ಡಿ 13 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, […]

Continue Reading

ತಣ್ಣೀರುಭಾವಿ: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ಭರ್ಜರಿ ಚಾಲನೆ, ಜಿಲ್ಲಾಧಿಕಾರಿ ದರ್ಶನ್ ಚಾಲನೆ

ಮಂಗಳೂರು: ಇಲ್ಲಿನ ನಗರದ ತಣ್ಣೀರುಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಆರಂಭವಾದ 7 ನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಗೆ ಅದ್ದೂರಿ ಚಾಲನೆ ಸಿಕ್ಕಿದೆ. ರಾಷ್ಟ್ರೀಯ ಚಾಂಪಿಯನ್‌ ಷಿಪ್ ಸರಣಿ ಪ್ರಮುಖ ಹಂತ ಆಗಿರುವ ಈ ಟೂರ್ನಿ, ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವ ಪಡೆದಿದ್ದು, ಉತ್ತಮ ಹವಾಮಾನ ಹಾಗೂ ಅಬ್ಬರದ ಅಲೆಗಳ ನಡುವೆ ಸ್ಪರ್ಧೆಗಳು ಆರಂಭಗೊಂಡವು. ಇದಕ್ಕೂ ಮೊದಲು ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಜಿಲ್ಲಾಧಿಕಾರಿ […]

Continue Reading

ತಣ್ಣೀರುಭಾವಿ: ಸರ್ಫಿಂಗ್ ಸ್ಪರ್ಧೆ ಸರ್ಫರ್‌ಗಳ ತೀವ್ರ ಹಣಾಹಣಿ; ‌ಕಮಲಿ ಮೂರ್ತಿ ಶುಭಾರಂಭದ ಮಿಂಚು

ಮಂಗಳೂರು: ಇಲ್ಲಿನ ನಗರದ ತಣ್ಣೀರುಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಆರಂಭವಾದ ಏಳನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ 2026ರ ಮೊದಲ ದಿನವೇ ದೇಶದ ಪ್ರಮುಖ ಸರ್ಫರ್‌ಗಳು ಅಲೆಗಳ ನಡುವೆ ರೋಮಾಂಚಕ ಪ್ರದರ್ಶನ ನೀಡಿದರು. ರಾಷ್ಟ್ರೀಯ ಚಾಂಪಿಯನ್‌ ಷಿಪ್ ಸರಣಿ ಪ್ರಮುಖ ಹಂತ ಆಗಿರುವ ಈ ಟೂರ್ನಿ, ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವ ಪಡೆದಿದ್ದು, ಉತ್ತಮ ಹವಾಮಾನ ಹಾಗೂ ಅಬ್ಬರದ ಅಲೆಗಳ ನಡುವೆ ಸ್ಪರ್ಧೆಗಳು ಆರಂಭಗೊಂಡವು. ಮಹಿಳೆಯರ ಮುಕ್ತ ವಿಭಾಗದಲ್ಲಿ ಕಮಲಿ […]

Continue Reading

ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ 29 ರಿಂದ

ಮಂಗಳೂರು: ಇದೇ 29 ರಿಂದ 31 ರವರಿಗೆ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ ನಡೆಯುತ್ತಿದ್ದು, ಇದಕ್ಕಾಗಿ ಐಚಿ ನಗೋಯಾ ಏಷ್ಯನ್ ಗೇಮ್ಸ್ 2026 ನಲ್ಲಿ ಸರ್ಫಿಂಗ್‌ನಲ್ಲಿ ಭಾರತದ ಸ್ಪರ್ಧಿಗಳು ಚೊಚ್ಚಲ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದು, ಸರ್ಫಿಂಗ್ ಸ್ಪರ್ಧಿಗಳಿಗೆ ಒಂದು ರೀತಿಯ ಹಬ್ಬದ ವಾತಾವರಣ ಕಟ್ಟಿಕೊಡುವುದಕ್ಕೆ ವೇದಿಕೆ ಸಿದ್ದವಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಜತೆಗೆ, ಎನ್‌ಎಂಶಿಎ ಸಹಭಾಗಿತ್ವದಲ್ಲಿ ಮೂರು […]

Continue Reading

ಧರ್ಮಶಾಲಾ: ಐಪಿಎಲ್ ಟೂರ್ನಿಯಲ್ಲಿ ದಾಖಲೆ ಬರೆದ ಆರ್ ಸಿಬಿ, ಫೈನಲ್ ಗೆ ಲಗ್ಗೆ, ಗುಜರಾತ್ ಹೀನಾಯ ಸೋಲು

ಧರ್ಮಶಾಲಾ: ಐಪಿಎಲ್–2026ರ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಬ್ಬರದ ಬ್ಯಾಟಿಂಗ್, ಸಂಘಟಿತ ಆಟಕ್ಕೆ ಅಕ್ರಮಣಕಾರಿ ಬೌಲಿಂಗ್ ದಾಳಿಗೆ ಗುಜರಾತ್ ಟೈಟಾನ್ಸ್ ತಂಡವು ಹೀನಾಯ ಸೋಲು ಕಂಡಿದೆ. ಆರ್ ಸಿಬಿ ತಂಡ ಸತತ ಎರಡನೇ ಬಾರಿ ಫೈನಲ್‌ ಗೆ ಲಗ್ಗೆ ಇಟ್ಟಿದೆ. ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯಲ್ಲಿ 255 ರನ್ ಗಳ ಬೃಹತ್ ಮೊತ್ತದ ದಾಖಲಿಸಿದ ಆರ್ ಸಿಬಿ ತಂಡದ ಬ್ಯಾಟಿಂಗ್ ಮುಂದೆ ಗುಜರಾತ ಟೈಟನ್ಸ ಬ್ಯಾಟಿಂಗ್ ಹಾಗೂ ಬೌಲರ್ ಗಳು ತತ್ತರಿಸಿದರು. 19.3 […]

Continue Reading