ಕಾರವಾರ: ಸಮುದ್ರ ಪಾಲಾಗುತ್ತಿದ್ದ ಮಂಗಳೂರು ಮೂಲದ ಇಬ್ಬರ ರಕ್ಷಣೆ: ಭಜರಂಗಿ ಮಿತ್ರರ ಕಾರ್ಯಕ್ಕೆ ಶ್ಲಾಘನೆ

ಕಾರವಾರ: ಕಡಲ ಅಲೆಗಳ ಅಬ್ಬರಕ್ಕೆ ಸಿಕ್ಕು ಹಾಕಿಕೊಂಡು ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗರನ್ನು ನಗರದ ಟ್ಯಾಗೋರ ಕಡಲ ತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಕೊಂಕಣಿ ಖಾರ್ವಿ ವಾಡಾದ ಭಜರಂಗಿ ಮಿತ್ರರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದವರು ಟ್ಯಾಗೋರ ಕಡಲತೀರದಲ್ಲಿ ಈಜಲು ತೆರಳಿದ್ದ ವೇಳೆ ಕಡಲ ಅಲೆಗಳ ಅಬ್ಬರಕ್ಕೆ ಸುಳಿಗೆ ಸಿಕ್ಕು ಹಾಕಿಕೊಂಡು ಪ್ರಾಣಾಪಾಯದಲ್ಲಿ ಇದ್ದರು. ಈ ವೇಳೆ ಅಲ್ಲಿಯೇ ಇದ್ದ ಕುಟುಂಬದ ಸದಸ್ಯರು ನೆರವಿಗೆ ಕೂಗುತ್ತಿದ್ದರು, ಈ ವೇಳೆ ಅಲ್ಲಿಯೇ ಕ್ರಿಕೆಟ್ ಆಟುತ್ತಿದ್ದ ಭಜರಂಗಿ […]

Continue Reading

ನಟ, ನಿರ್ಮಾಪಕ, ನಿರ್ದೇಶಕ ದಿಲೀಪ್ ರಾಜ್ ಗೆ ಹೃದಯಾಘಾತ, ನಿಧನ, ಕಂಬನಿ ಮಿಡಿದ ಸಿನಿ ದಿಗ್ಗಜರು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್​ ರಾಜ್​​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ದಿಲೀಪ್ ರಾಜ್ ಅವರ ಈ ಅಕಾಲಿಕ ನಿಧನದಿಂದಾಗಿ ಚಿತ್ರರಂಗದಲ್ಲಿ ನೀರವ ಮೌನ ಉಂಟಾಗಿದೆ. ಕರುನಾಡಿನಲ್ಲಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದ ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಬುಧಾವರ ಮುಂಜಾನೆ ಹೃದಯಾಘಾತ ಹಿನ್ನೆಲೆ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾಗಿದ್ದಾರೆ.   ಕುಟುಂಬಸ್ಥರು ಹಾಗೂ ಪತ್ನಿ ವಿದ್ಯಾ ಅವರು ದುಃಖವು ಮುಗಿಲು ಮುಟ್ಟಿದೆ. […]

Continue Reading

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಕೇಂದ್ರ ಸರಕಾರದ ವೈಫಲ್ಯ: ಮಾಜಿ ಎಂಎಲ್ಸಿ ಹರೀಶ್ ಕುಮಾರ್

ಮಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಆಗಿದೆ ಎಂದು ಮಾಜಿ ಎಂಎಲ್ ಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು. 22.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕನಸುಗಳನ್ನು ಹೊತ್ತು ಅಪಾರ ಪರಿಶ್ರಮದೊಂದಿಗೆ ಪರೀಕ್ಷೆ ಬರೆದಿದ್ದರು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದ್ದು, […]

Continue Reading

ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ, ಸಕಲ ಸರ್ಕಾರಿ ಗೌರವ, ಸಿಎಂ, ಡಿಸಿಎಂ, ಸ್ಪೀಕರ್ ಉಪಸ್ಥಿತಿ, ಕಣ್ಣೀರ ವಿದಾಯ

ಚಿತ್ರದುರ್ಗ: ಅನಾರೋಗ್ಯದಿಂದ ನಿಧನರಾಗಿದ್ದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಸೋಮವಾರ ಸರಕಾರಿ ಗೌರವಗಳೊಂದಿಗೆ ನಡೆಯಿತು. ಸೋಮವಾರ ಸಂಜೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಜೈನ ಮುಕ್ತಿಧಾಮದಲ್ಲಿ ಜೈನ ಸಂಪ್ರದಾಯದಂತೆ ವಿಧಿಳನ್ನು ಪೂರೈಸಲಾಯಿತು. ಸಚಿವ ಡಿ.ಸುಧಾಕರ್ ಪ್ರಾರ್ಥಿವ ಶರೀರಕ್ಕೆ ಅವರ ಪುತ್ರ ಸುಹಾಸ್ ಸುಧಾಕರ್ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೆ.ಜೆ. ಜಾರ್ಜ್, ಸಂತೋಷ್ ಲಾಡ್ […]

Continue Reading

ಜೈ ತುಳು ಸಿನಿಮಾದ ನೂರರ ಸಂಭ್ರಮ, ಬ್ರೋ ಹೊಸ ತುಳು ಸಿನಿಮಾ ಘೋಷಿಸಿದ ನಟ, ನಿರ್ದೇಶಕ ರೂಪೇಶ್ ಶೆಟ್ಟಿ

ಮಂಗಳೂರು: ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆ ಆಗಿದ್ದಾರೆ. ಜೈ ತುಳು ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ವಿಶ್ವದ ತುಳುವರು ಈ ಸಿನಿಮಾವನ್ನು ಗೆಲ್ಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ಎಂ. ರೈ ಅವರು ಹೇಳಿದರು. ಇಲ್ಲಿನ ಜೈ ತುಳು ಸಿನಿಮಾದ 100 ನೇ ದಿನದ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಟ ನಿರ್ದೇಶಕ ರೂಪೇಶ್ ಶೆಟ್ಟಿ ಮಾತನಾಡಿ, “ಜೈ” ಸಹಿತ ತನ್ನ ಎಲ್ಲ […]

Continue Reading

ಎಂಸಿಸಿ ಬ್ಯಾಂಕ್ 114 ನೇ ಸಂಸ್ಥಾಪಕರ ದಿನ ಆಚರಣೆ‌, ಈ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ಶಾಖೆ 25 ಕ್ಕೆ ಏರಿಕೆ: ಅನಿಲ್ ಲೋಬೊ

ಮಂಗಳೂರು: 2018ರಲ್ಲಿ ಹೊಸ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ನಂತರ ಬ್ಯಾಂಕ್ ವೃತ್ತಿಪರತೆಯೊಂದಿಗೆ ಗಮನಾರ್ಹ ಬೆಳವಣಿಗೆ ಸಾಧಿಸಿದೆ ಎಂದು ಸಹಕಾರ ರತ್ನ ಅನಿಲ್ ಲೋಬೊ ಹೇಳಿದರು. ಎಂಸಿಸಿ ಬ್ಯಾಂಕ್ 114ನೇ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕ ಪಿ.ಎಫ್. ಎಕ್ಸ್. ಸಲ್ದಾನರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. 24 ವರ್ಷಗಳ ಬಳಿಕ ಶಾಖೆಗಳ ಸಂಖ್ಯೆ 16 ರಿಂದ 21ಕ್ಕೆ ಏರಿಕೆ ಆಗಿದೆ. ಬ್ಯಾಂಕಿನ ಒಟ್ಟು ವ್ಯವಹಾರ ರೂ. 500 ಕೋಟಿಯಿಂದ ರೂ.1,525 ಕೋಟಿಗೆ ಏರಿಕೆ ಆಗಿದ್ದು, […]

Continue Reading

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಭೇಟಿ, ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಧರ್ಮಸ್ಥಳ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಕುಟುಂಬ ಸದಸ್ಯರ ಜತೆಗೆ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡರು. ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಸೇರಿದಂತೆ ಹಲವು […]

Continue Reading

ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ, ಕಾಂಗ್ರೆಸ್ ಆಡಳಿತದಲ್ಲಿ ಖಜಾನೆ ಲೂಟಿ: ಪ್ರಧಾನಿ ಮೋದಿ

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಖಜಾನೆ ಲೂಟಿ ಆಗುತ್ತಿದೆ. ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ ನೋಡುತ್ತಿದ್ದೇವೆ. ಪರಸ್ಪರ ಜಗಳದಲ್ಲಿ ರಾಜ್ಯ ಕಾಂಗ್ರೆಸ್ ತೊಡಗಿಕೊಂಡಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಒಳಜಗಳ ನಡೆದಿದೆ. ತಮಿಳುನಾಡು, ಕೇರಳದಲ್ಲೂ ಆಡಳಿತದ ವಿಚಾರದಲ್ಲಿ ಸಮಸ್ಯೆ ಇದೆ ಎಂದು ಪ್ರಧಾನಿ ಮೋದಿ ಹೇಳಿದರು. ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬಳಿಕ ಕರ್ನಾಟಕಕ್ಕೆ ಆಗಮಿಸಿದ್ದ ನರೇಂದ್ರ ಮೋದಿ ಅವರಿಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದ ಬಳಿ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದಿಸುವ ಸಮಾರಂಭದಲ್ಲಿ ಅವರು […]

Continue Reading

ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ ರೂ 10 ಪೈಸೆ ಮರುಪಾವತಿ: ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಂಪೀರ್ ಖಾದ್ರಿ

ಕಾರವಾರ: ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಾರ್ಗದರ್ಶನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಹೆಸ್ಕಾಂ, 2024-25 ರ ಸಾಲಿನಲ್ಲಿ 153.46 ಕೋಟಿ ರೂ. ಉಳಿತಾಯ ಮಾಡಿದ್ದು, ಈ ಹಣವನ್ನುಗ್ರಾಹಕರಿಗೆ ಮರು ಪಾವತಿಸಲಾಗುತ್ತಿದೆ ಎಂದು ಹೆಸ್ಕಾಂ ಅಧ್ಯಕ್ಷ  ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಂಪೀರ್ ಖಾದ್ರಿ ಅವರು ತಿಳಿಸಿದ್ದಾರೆ. ವಿದ್ಯುತ್ ಖರೀದಿ, ಪೂರೈಕೆಯನ್ನು ಉತ್ತಮವಾಗಿ ನಿರ್ವಹಿಸಿದ ಪರಿಣಾಮ 2024-2025ರಲ್ಲಿ ಹೆಸ್ಕಾಂ 153.46 ಕೋಟಿ ರೂ. ಉಳಿತಾಯ ಮಾಡಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್ಸಿ) ಆದೇಶದ ಅನ್ವಯ 2024-25 ನೇ ಆರ್ಥಿಕ ವರ್ಷದ […]

Continue Reading

17, 18 ರಂದು ಕದ್ರಿ ಪಾರ್ಕ್ ನಲ್ಲಿ ರಾಜ್ಯ ಮಟ್ಟದ ಗೇರು ಮೇಳ, ಕಾರ್ಯಾಗಾರ, ಪೋಸ್ಟರ್ ಬಿಡುಗಡೆಗೊಳಿಸಿದ ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಕರಾವಳಿಯ ವಾಣಿಜ್ಯ ಬೆಳೆ ಗೇರು ಬೆಳೆಯ ಮಹತ್ವದ ಕುರಿತು ಬೆಳೆಗಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಿಟ್ಟಿನಲ್ಲಿ ಗೇರು ಮೇಳ ಪ್ರಮುಖ ಹೆಜ್ಜೆಯಾಗಿದೆ ಎಂದು ಸ್ಪೀಕರ್ ಯು. ಟಿ. ಖಾದರ್ ಅವರು ಹೇಳಿದರು. ಶನಿವಾರ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ರಾಜ್ಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗೇರು ಮೇಳದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರಾವಳಿಯಲ್ಲಿ ಗೇರು ಉದ್ಯಮ ಸಾಕಷ್ಟು ಕುಟುಂಬಕ್ಕೆ ಆಧಾರ ಆಗಿತ್ತು. ಬೆಳೆ ಕುಂಠಿತ ಆದ ಕಾರಣ […]

Continue Reading