‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ ಇಂದು: ಜಗದೀಶ್ ಅಂಚನ್

ಮಂಗಳೂರು: ಸಹಕಾರವನ್ನು ಜೀವನದ ಧೈಯವನ್ನಾಗಿ, ಜನಸೇವೆಯನ್ನು ಜೀವನದ ಪರಮ ಗುರಿಯನ್ನಾಗಿ. ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು, ಸಹಕಾರದ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಮಹಾನ್ ಚೇತನ, ಸಹಕಾರ ರಂಗದ ಪಿತಾಮಹ ‘” ಮೊಳಹಳ್ಳಿ ಶಿವರಾವ್” ಅಗ್ರಗಣ್ಯರು. ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಬದುಕು ಹಾಗೂ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸಾರ್ಥಕ ಸಮಾಜಮುಖಿ ಸೇವೆಯು ಸದಾ […]

Continue Reading

ರಾಜ್ಯದಲ್ಲಿ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ ಮತ್ತು ಮಲೆನಾಡಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ವ್ಯಾಪಕ ಮಳೆ ಆಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಈ ಕುರಿತು ಮುನ್ಸೂಚನೆ ನೀಡಿದ್ದು, ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ಕರಾವಳಿ ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ […]

Continue Reading

ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ ಕೀ ಉತ್ತರ ಬಿಡುಗಡೆ: ಮಂಗಳೂರು ಐಎಎಸ್ ಸಂಸ್ಥೆಯ ಸಂತೋಷ್ ಕುಮಾರ್

ಮಂಗಳೂರು: ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಯ ಲಿಖಿತ ಪರೀಕ್ಷೆ ಭಾನುವಾರ ನಡೆದ ಬೆನ್ನಲ್ಲೇ, ನಗರದ ಮಂಗಳೂರು ಐಎಎಸ್ ಸಂಸ್ಥೆಯು ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಇದರಿಂದ ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿಕೊಂಡು ಸಂಭವನೀಯ ಅಂಕಗಳನ್ನು ಅಂದಾಜಿಸಿಕೊಳ್ಳಲು ಅವಕಾಶ ಸಿಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಪರೀಕ್ಷೆ ಮುಗಿದ ಕೂಡಲೇ ಸಂಸ್ಥೆಯ ವಿಷಯ ತಜ್ಞರು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿ ಉತ್ತರ ಕೀ ಸಿದ್ಧಪಡಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪರೀಕ್ಷಾರ್ಥಿಗಳು ಮಂಗಳೂರು ಐಎಎಸ್ ಕ್ಯಾಂಪಸ್‌ಗೆ […]

Continue Reading

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟನೆ; ಚಾಮುಂಡೇಶ್ವರಿಗೆ ಪ್ರಣಾಮ ಸಲ್ಲಿಸಿದ ಪ್ರಧಾನಿ ಮೋದಿ

ಮೈಸೂರು: ಭಾರತದ ಯುವಶಕ್ತಿಯೇ ದೇಶದ ಅತಿದೊಡ್ಡ ಸಾಮರ್ಥ್ಯವಾಗಿದ್ದು, ಯುವಕರ ಶಕ್ತಿ ಮತ್ತು ಪ್ರತಿಭೆಯ ಬಲದಿಂದಲೇ ಭಾರತ ಇಂದು ವಿಶ್ವದ ಅತ್ಯಂತ ಚುರುಕಾದ ರಾಷ್ಟ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮೈಸೂರಿನ ರಾಮಕೃಷ್ಣ ಆಶ್ರಮದ ವತಿಯಿಂದ ನಿರ್ಮಿಸಲಾದ ವಿವೇಕ ಸ್ಮಾರಕವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, “ಸ್ವಾಮಿ ವಿವೇಕಾನಂದರು ಕಂಡಿದ್ದ ಶಕ್ತಿಶಾಲಿ ಭಾರತದ ಕನಸನ್ನು ಸಾಕಾರಗೊಳಿಸುವ ಹೊಣೆ ಇಂದಿನ ಯುವಜನರ ಮೇಲಿದೆ” ಎಂದು ಹೇಳಿದರು. ಭಾಷಣದ ಆರಂಭದಲ್ಲೇ ಕನ್ನಡದಲ್ಲಿ “ಎಲ್ಲರಿಗೂ ನನ್ನ ನಮಸ್ಕಾರಗಳು” ಎಂದು […]

Continue Reading

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪ್ರಧಾನಿಗೆ ಸಿಎಂ ಡಿಕೆಶಿ ಮನವಿ

ಮೈಸೂರು: ಭಾರತ ಪ್ರಗತಿ ಸಾಧಿಸಬೇಕಾದರೆ, ಕರ್ನಾಟಕದೊಂದಿಗೆ ಪ್ರಗತಿ ಸಾಧಿಸಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಒಟ್ಟಾಗಿ ಕೆಲಸ ಮಾಡೋಣ, ಕರ್ನಾಟಕ್ಕೆ ನೆರವು ನೀಡುವಾಗ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಶನಿವಾರ ಮಾತನಾಡಿದರು. “ವಿವೇಕಾನಂದರ ತ್ಯಾಗ ನಮಗೆ ಸ್ಫೂರ್ತಿಯಾಗಬೇಕಿದೆ. ಅವರ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಈ ಕಾರ್ಯಕ್ರಮ ಯುವ ಕ್ರಾಂತಿಯ ಐತಿಹಾಸಿಕ […]

Continue Reading

ಉಡುಪಿ: ಖಾಸಗಿ ಬಸ್‌ ಡಿಕ್ಕಿ, ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾವು

ಉಡುಪಿ: ಉಡುಪಿ ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್  (37) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಅವರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ […]

Continue Reading

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ. ಅರುಣ್ ಕುಮಾರ್ ಶೆಟ್ಟಿ ನೇಮಕ

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ. ಅರುಣ್ ಕುಮಾರ್ ಶೆಟ್ಟಿ ಎನ್‌ ಅವರನ್ನು ಮತ್ತೆ ಹೆಚ್ಚುವರಿ ಪ್ರಭಾರದಲ್ಲಿ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾಗಿರುವ ಡಾ. ಅರುಣ್ ಕುಮಾರ್ ಶೆಟ್ಟಿ ಅವರು ಈ ಹಿಂದೆ ಸುಮಾರು ಒಂದೂವರೆ ವರ್ಷಗಳ ಕಾಲ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹೆಚ್ಚುವರಿ ಪ್ರಭಾರದಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಜೂನ್‌ 2026ರಲ್ಲಿ ರಾಜ್ಯ ಸರ್ಕಾರವು ರಾಜ್ಯ […]

Continue Reading

ಬೆಳ್ತಂಗಡಿ: ಪುಷ್ಯ ಮಳೆಯ ಅಬ್ಬರಕ್ಕೆ ಜನ ತತ್ತರ, ಉಜಿರೆ–ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿ ಮೇಲೆ ಹರಿದ ನೀರು

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದಲ್ಲಿ ನೇತ್ರಾವತಿ ಸೇರಿದಂತೆ ಜಿಲ್ಲೆಯ ಬಹುತೇಕ ನದಿಗಳು ಅಪಾಯದ ಮಟ್ಟಕ್ಕೆ ಸಮೀಪಿಸಿ ತುಂಬಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಆವರಿಸಿದೆ. ಮಳೆ ಮುಂದುವರೆದರೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಸ್ಥಳೀಯರು ಆತಂಕದಲ್ಲಿದ್ದಾರೆ. ಬೆಳಗ್ಗಿನಿಂದಲೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಬೆಳ್ತಂಗಡಿ–ಕಿಲ್ಲೂರು ರಸ್ತೆಯ ಪುತ್ರಬೈಲು ಸಮೀಪ […]

Continue Reading

ಮಂಗಳೂರಿನ ಉರ್ವ ಕ್ರೀಡಾಂಗಣದಲ್ಲಿ 39ನೇ ರಾಷ್ಟ್ರೀಯ ಚೆಸ್ ಚಾಂಪಿಯನ್‌ ಷಿಪ್ ಅ. 2ರಿಂದ ಪ್ರಾರಂಭ: ಡಾ. ಅಮರಶ್ರೀ ಶೆಟ್ಟಿ

ಮಂಗಳೂರು: ದೇಶದ ಭವಿಷ್ಯದ ಚೆಸ್ ತಾರೆಗಳನ್ನು ಪರಿಚಯಿಸುವ ಪ್ರತಿಷ್ಠಿತ 39ನೇ ರಾಷ್ಟ್ರೀಯ ಅಂಡರ್-11 ಓಪನ್ ಮತ್ತು ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ ಷಿಪ್-2026 ಅ.2 ರಿಂದ ಮಂಗಳೂರಿನಲ್ಲಿ ಆರಂಭವಾಗಲಿದೆ. ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ಡಿಕೆಸಿಎ), ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್) ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ (ಕೆಎಸ್‌ಸಿಎ) ಆಶ್ರಯದಲ್ಲಿ, ನವಮಂಗಳೂರು ಬಂದರು ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ನಡೆವ ಈ ರಾಷ್ಟ್ರೀಯ ಮಟ್ಟದ ಚಾಂಪಿಯನ್‌ ಷಿಪ್ ಅಗಸ್ಟ್‌ 8 ರವರೆಗೆ ನಗರದ ಉರ್ವ ಒಳಾಂಗಣ […]

Continue Reading

ಶಾಲೆ–ಕಾಲೇಜುಗಳ ಬಳಿ ಜಂಕ್ ಫುಡ್‌ಗೆ ಬ್ರೇಕ್: ಇಲಾಖೆಯ ಅಧಿಕೃತ ಆದೇಶ

ಬೆಂಗಳೂರು: ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟಯುತ ಹಾಗೂ ಆರೋಗ್ಯಕರ ಆಹಾರ ಲಭ್ಯ ಆಗುವಂತೆ ಮಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯೂ ಶಾಲೆ–ಕಾಲೇಜುಗಳ ಆವರಣ ಹಾಗೂ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್‌ ಮತ್ತು ಅನಾರೋಗ್ಯಕರ ಆಹಾರ ಮಾರಾಟ ಮಾಡದಂತೆ ಅಧಿಕೃತ ಆದೇಶ ಹೊರಡಿಸಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಯಂತೆ ಈ ಕ್ರಮ ಜುಲೈ 21 ರಿಂದ ಜಾರಿಗೆ ಬಂದಿದೆ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಜುಲೈ ತಿಂಗಳಲ್ಲಿ ರಾಜ್ಯದ […]

Continue Reading