ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ, ಎರಡು ಪ್ರಕರಣಗಳ ತನಿಖೆ ಸಿಐಡಿಗೆ ವರ್ಗಾವಣೆ: ಸಚಿವ ಖರ್ಗೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಸಾರ್ವಜನಿಕ ಪರೀಕ್ಷೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಆರೋಪಗಳ ಹಿನ್ನೆಲೆಯಲ್ಲಿ ದಾಖಲಾಗಿರುವ ಎರಡು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ಭ್ರಷ್ಟಾಚಾರ ಮತ್ತು ನೇಮಕಾತಿಯಲ್ಲಿನ ಅನ್ಯಾಯದ ವಿಧಾನಗಳ ತಡೆ) ಅಧಿನಿಯಮ, 2023ರ ಕಲಂ 10ರಡಿ ದಾಖಲಾಗಿರುವ ಎರಡು ಪ್ರಕರಣಗಳ ಕುರಿತು […]

Continue Reading

500 ಕ್ಕೂ ಅಧಿಕ ಅಂಕ ಪಡೆದ ನೀಟ್ ಸಾಧಕರಿಗೆ ಎಕ್ಸಲೆಂಟ್ ಕಾಲೇಜಿನಲ್ಲಿ ಸನ್ಮಾನ

ಮೂಡುಬಿದಿರೆ: ನೀಟ್ ಪರೀಕ್ಷೆಯಲ್ಲಿ 500 ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ರಾಜ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು ಮಾತನಾಡಿ, ವಿದ್ಯಾರ್ಥಿಯ ಸಾಮರ್ಥ್ಯವನ್ನು ಕೇವಲ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ನಿರ್ಧರಿಸಲು ಸಾಧ್ಯವಿಲ್ಲ. ಸೂಕ್ತ ಮಾರ್ಗದರ್ಶನ, ಶಿಸ್ತುಬದ್ಧ ಶಿಕ್ಷಣ ವ್ಯವಸ್ಥೆ ಹಾಗೂ ನಿರಂತರ ಪ್ರೋತ್ಸಾಹ ದೊರೆತರೆ ಸಾಮಾನ್ಯ ವಿದ್ಯಾರ್ಥಿಯೂ ರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಬಹುದು ಎಂದರು. ಸಂಸ್ಥೆಯ […]

Continue Reading

ಬ್ಯಾಂಕ್ ಆಫ್ ಬರೋಡಾ ಹಣಕಾಸು ಸಾಧನೆ: ಜಾಗತಿಕ ವ್ಯವಹಾರ 30.50 ಲಕ್ಷ ಕೋಟಿಗೆ ಏರಿಕೆ

ಮುಂಬೈ: ಬ್ಯಾಂಕ್ ಆಫ್ ಬರೋಡಾ 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕದ ಹಣಕಾಸು ಫಲಿತಾಂಶ ಪ್ರಕಟಿಸಿದ್ದು, ಬ್ಯಾಂಕ್‌ನ ಜಾಗತಿಕ ವ್ಯವಹಾರವು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ15.4ರಷ್ಟು ಏರಿಕೆಯಾಗಿ 30,50,457 ಕೋಟಿಗೆ ತಲುಪಿದೆ. ಬ್ಯಾಂಕ್‌ನ ಜಾಗತಿಕ ಸಾಲ ವಿತರಣೆ ಶೇ17.4 ಹಾಗೂ ದೇಶೀಯ ಸಾಲ ವಿತರಣೆ ಶೇ16.1ರಷ್ಟು ಹೆಚ್ಚಳ ಕಂಡಿದೆ. ವಾಹನ ಸಾಲ ಶೇ 25.3, ಅಡಮಾನ ಸಾಲ ಶೇ 27.4, ಗೃಹ ಸಾಲ ಶೇ14.7 ಮತ್ತು ಶಿಕ್ಷಣ ಸಾಲ ಶೇ10.8ರಷ್ಟು ಬೆಳವಣಿಗೆ ದಾಖಲಿಸಿದೆ. ಚಿಲ್ಲರೆ, […]

Continue Reading

ಕ್ರಿಮ್ಸ್‌ಗೆ 200 ಎಂಬಿಬಿಎಸ್ ಸೀಟುಗಳ ಅನುಮೋದನೆ: 2026-27 ರಿಂದ ಹೆಚ್ಚುವರಿ ಪ್ರವೇಶ, ಹೊಸ ಆರೋಗ್ಯ ವಿಜ್ಞಾನ ಕೋರ್ಸ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಗೆ ಮಹತ್ವದ ಉತ್ತೇಜನ ದೊರೆತಿದ್ದು, 2026-27ನೇ ಶೈಕ್ಷಣಿಕ ವರ್ಷದಿಂದ ಒಟ್ಟು 200 ಎಂಬಿಬಿಎಸ್ ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ), ನವದೆಹಲಿಯಿಂದ ಅನುಮೋದನೆ ಲಭಿಸಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೆ ಕ್ರಿಮ್ಸ್‌ಗೆ 150 ಎಂಬಿಬಿಎಸ್ ಸೀಟುಗಳಿಗೆ ಮಾತ್ರ ಅನುಮತಿ ಇದ್ದು, ಇದೀಗ ಹೆಚ್ಚುವರಿ 50 ಸೀಟುಗಳನ್ನು ಮಂಜೂರು ಮಾಡಲಾಗಿದೆ. ಇದರಿಂದ ಮುಂದಿನ […]

Continue Reading

ರೋಹನ್ ಕಾರ್ಪೊರೇಷನ್‌ನಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ

ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿಂದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ನಗರದ ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ ವಿಶೇಷ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರು ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು. ರೋಹನ್ ಕಾರ್ಪೊರೇಷನ್‌ನ ನಿರ್ದೇಶಕ ಡಿಯೋನ್ ಮೊಂಟೇರೊ ಹಾಗೂ ಮಹಾಪ್ರಬಂಧಕಿ ಸುಮನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಕರಾವಳಿ ಭಾಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತಂದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ‘ಮಿಥ್ಯ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ರೂಪಶ್ರೀ […]

Continue Reading

ಹಿಪ್ಪರಗಿಯಲ್ಲಿ ಕಾರು ಸ್ಫೋಟ: ಬಿಡಿಭಾಗಗಳು ಚದುರಿ ಆತಂಕ, ತನಿಖಾ ತಂಡಗಳ ಪರಿಶೀಲನೆ, ಎಸ್ಪಿ ಸಿದ್ದಾರ್ಥ ಗೋಯಲ್ ಭೇಟಿ

ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಶನಿವಾರ ರಾತ್ರಿ ನಿಲ್ಲಿಸಿದ್ದ ಎಕ್ಸ್‌ಯು–300 ಕಾರೊಂದು ಏಕಾಏಕಿ ಸ್ಫೋಟಗೊಂಡು ಭಾರಿ ಆತಂಕ ಸೃಷ್ಟಿಸಿದೆ. ಸ್ಫೋಟದ ತೀವ್ರತೆಗೆ ಕಾರಿನ ಬಿಡಿಭಾಗಗಳು ಹಲವು ದಿಕ್ಕುಗಳಿಗೆ ಚದುರಿದ್ದು, ಸುತ್ತಲಿನ ಮನೆಗಳಲ್ಲಿ ಕಂಪನ ಉಂಟಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಿಪ್ಪರಗಿ ವೈನ್ ಶಾಪ್ ಎದುರು ನಿಲ್ಲಿಸಿದ್ದ ಈ ಕಾರು, ಅಲ್ಲಿನ ಉದ್ಯಮಿ ಹಣಮಂತ ಅಥಣಿ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಗೆ ಕಾರು ಸುಮಾರು 10 ಅಡಿಗೂ ಹೆಚ್ಚು […]

Continue Reading

ಅಮೆರಿಕದಲ್ಲಿ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಆರೋಗ್ಯ ಸಚಿವ ಖಾದರ್

ಮಂಗಳೂರು: ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್ವಿಲ್ಲೆಯ ಯೆಲ್ಲೋ ಬಾಕ್ಸ್ ಸಭಾಂಗಣದಲ್ಲಿ ನಡೆದ ಅಮೆರಿಕನ್ ಬಹುಜನಾಂಗೀಯ ಆಯೋಗದ 15ನೇ ವಾರ್ಷಿಕ ಜಾಗತಿಕ ಸಾಧಕರ ಸನ್ಮಾನ ಸಮಾರಂಭದಲ್ಲಿ ಪ್ರತಿಷ್ಠಿತ ಜಾಗತಿಕ ನಾಗರಿಕ ನಾಯಕತ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿ, ಈ ಗೌರವ ತಮ್ಮ ಸಾರ್ವಜನಿಕ ಸೇವೆಗೆ ದೊರೆತ ಮಹತ್ವದ ಮಾನ್ಯತೆ ಆಗಿದ್ದು, ಜನಸೇವೆಯ ಹಾದಿಯಲ್ಲಿ ಇನ್ನಷ್ಟು ಜವಾಬ್ದಾರಿಯಿಂದ ಕೆಲಸ ಮಾಡಲು ಇದು ಪ್ರೇರಣೆ ನೀಡುತ್ತದೆ. ಈ ಪ್ರಶಸ್ತಿಯನ್ನು ಕರ್ನಾಟಕದ […]

Continue Reading

ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್ ಅನ್ನು ಮುಂಬರುವ ವರ್ಷದ ಜನವರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಬಾರಿ ನುಡಿಸಿರಿ ಮತ್ತು ವಿರಾಸತ್ ಉತ್ಸವಗಳನ್ನು ಒಂದೇ ವೇದಿಕೆಯಲ್ಲಿ ನಡೆಸುವ ಮೂಲಕ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟ ಸಂಗಮಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಸ್ವಗೃಹದಲ್ಲಿ ನಡೆದ ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ಉತ್ಸವದ ರೂಪುರೇಷೆಗಳ ಕುರಿತು ಸುದೀರ್ಘ […]

Continue Reading

ರಾಜ್ಯದ ಸುದೀರ್ಘ ಸಿಎಂ ಆಗಿದ್ದ ಸಿದ್ದರಾಮಯ್ಯ ಮಹತ್ವದ ಘೋಷಣೆ, ಚುನಾವಣಾ ರಾಜಕೀಯಕ್ಕೆ ಗುಡ್ ಬೈ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಘೋಷಣೆ ಮಾಡಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿದರೂ ಸಾರ್ವಜನಿಕ ಬದುಕಿನಲ್ಲಿ ಸಕ್ರಿಯ ಆಗಿಯೇ ಉಳಿದು ಜನರ ಪರವಾಗಿ ಧ್ವನಿ ಆಗುವುದಾಗಿ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಳಿಕ ತಮ್ಮ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ಹಿಂದೆ ಚುನಾವಣೆಗೆ ಸ್ಪರ್ಧಿಸಿದಾಗ ಕ್ಷೇತ್ರದ ಜನರೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸುತ್ತಿದ್ದರು. […]

Continue Reading

ನೀಟ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿಗೆ ಉತ್ತಮ ಸಾಧನೆ

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಫಲಿತಾಂಶದಲ್ಲಿ ಮೂಡುಬಿದಿರೆ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಕಾಲೇಜಿನ ನಿಖಿಲ್ ಎಸ್.ಎಸ್. 720 ಕ್ಕೆ 650 ಅಂಕ ಗಳಿಸಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ತಿಳಿಸಿದ್ದಾರೆ. ನಿಖಿಲ್ ಅವರ ಬಳಿಕ ತನ್ಮಯಿ ಎ. ಕೋಟಿ 647, ಚಿನ್ಮಯಿ ಬೆಳ್ಳೂರು 629, ಹೇಮಾ ಯು. 624, ಶ್ಲೋಕ್ ರಾಘವೇಂದ್ರ ರಾವ್ 615, ಈಶ್ವರ ಪುಂಡಲೀಕಪ್ಪ ಕೊಪ್ಪಲ್ 612 ಹಾಗೂ ಮೋಹಿತ್ ವೈ.ಪಿ. 611 ಅಂಕಗಳನ್ನು […]

Continue Reading