ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಏಷ್ಯನ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ 5,000 ಹಾಗೂ 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ದೇಶ, ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿ ಹೆಚ್ಚಿಸಿರುವ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಿವಾಜಿ ಅವರನ್ನು ಸನ್ಮಾನಿಸಿ […]

Continue Reading

ಚೆನ್ನಮ್ಮ ಅಂತ್ಯಕ್ರಿಯೆ ಇಂದು ಸರ್ಕಾರಿ ಗೌರವದೊಂದಿಗೆ; ಮಾವಿನಕೆರೆಯಲ್ಲಿ ಸಕಲ ಸಿದ್ಧತೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಹಾಸನ ಜಿಲ್ಲೆಯ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದ್ದು, ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮಾವಿನಕೆರೆ ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ನಾಲ್ಕು ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಿಂದ ಕುರ್ಚಿಗಳು ಹಾಗೂ ಶಾಮಿಯಾನಗಳನ್ನು ತರಿಸಲಾಗಿದ್ದು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. […]

Continue Reading

ಉ.ಕ ಜಿಲ್ಲೆಯಾದ್ಯಂತ 9,22,958 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಅರ್ಜಿಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 9,22,958 ಅರ್ಜಿಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಈವರೆಗಿನ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 26977 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 6590 ಶಾಶ್ವತ ವಲಸೆ ಹಾಗೂ 17,774 ಮರಣ ಹೊಂದಿದ ಪ್ರಕರಣಗಳು, 2367 […]

Continue Reading

ನೀರಿನ ಕೊರತೆ ತಪ್ಪಿಸಲು ಕೃಷಿ ಹೊಂಡಗಳ ನಿರ್ಮಾಣ, ಬಾವಿ, ಬೋರ್‌ವೆಲ್ ಗೆ ಅಂತರ್ಜಲ ಮರುಪೂರಣ ವ್ಯವಸ್ಥೆ ಕಲ್ಪಿಸಿ: ಸುಷ್ಮಾ ಗೋಡಬೋಲೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ರೈತರಿಗೆ ಕಡಿಮೆ ಅವಧಿಯಲ್ಲಿ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಲು ಉತ್ತೇಜಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಅವರು ನಿರ್ದೇಶನ ನೀಡಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ.24 ರಷ್ಟು ಮಳೆಯ ಕೊರತೆಯಿರುವುದರಿಂದ ರೈತರು ಹೆಚ್ಚು […]

Continue Reading

ಕೊಡಚಾದ್ರಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕೊಡಚಾದ್ರಿಗೆ ಪ್ರವಾಸಕ್ಕೆ ಎಂದು ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ. ಮೃತ ಯುವ ಬೆಂಗಳೂರಿನ ಶ್ರೀಕಾಂತ್ (28) ಎಂದು ತಿಳಿದು ಬಂದಿದೆ. ಶ್ರೀಕಾಂತ್ ತನ್ನ ಸ್ನೇಹಿತರ ಜತೆಗೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದು, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ.

Continue Reading

ಎಸ್‌ಐಆರ್‌, ಜಿಲ್ಲಾ ಸ್ವೀಪ್ ಸಮಿತಿ, ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಚಾಲನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳಿಂದ ಉತ್ತಮ ಸಹಕಾರ ದೊರೆಯುತ್ತಿದ್ದು, ನಿಗದಿತ ಅವಧಿಗೂ ಮುನ್ನವೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸರ್ಕಾರಿ ನೌಕರರಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಶೇ […]

Continue Reading

ಎನ್ಸಿಸಿ ಗೌರವ ಕರ್ನಲ್ ಹುದ್ದೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್‌.ಜೆ. ಅವರಿಗೆ ಭಾರತ ಸರ್ಕಾರವು ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ (ಎನ್ಸಿಸಿ)ಯ ಗೌರವ ಕರ್ನಲ್ ಹುದ್ದೆ ಹಾಗೂ ‘ಕರ್ನಲ್ ಕಮಾಂಡೆಂಟ್’ ಗೌರವವನ್ನು ನೀಡಿದೆ. ಈ ಸಂಬಂಧದ ಅಧಿಕೃತ ನೇಮಕಾತಿ ಆದೇಶವನ್ನು ಜೂನ್‌ 25 ರಂದು ಹೊರಡಿಸಲಾಗಿದ್ದು, ಗುರುವಾರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಎನ್ಸಿಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಉಪ ಮಹಾನಿರ್ದೇಶಕ ಏರ್‌ ಕಮಾಂಡರ್ ಕಮಲ್ ಚಾಧಾ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. […]

Continue Reading

4 ಜಿಲ್ಲೆಗೆ ಒಬ್ಬರಿಗೆ ಉಸ್ತುವಾರಿ, ಮೊದಲು ಬರ ಅಧ್ಯಯನಕ್ಕೆ ತಂಡ ಕಳಿಸಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಹೊಣೆ ವಹಿಸಿ: ಭೋಜೇಗೌಡ

ಮಂಗಳೂರು: ರಾಜ್ಯದಲ್ಲಿ ಒಂದೆಡೆ ಬರ ಹಾಗೂ ಮತ್ತೊಂದೆಡೆ ಅತಿವೃಷ್ಟಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ರಾಜ್ಯ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ. ರೈತರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಆಗಿಲ್ಲ, ನಾಲ್ಕು ಜಿಲ್ಲೆಗಳಿಗೆ ಒಬ್ಬರೇ ಉಸ್ತುವಾರಿ ಸಚಿವರ ನೇಮಕ ಮಾಡಿದ್ದು ಸರಿಯಲ್ಲ. ಉಳ್ಳಾಲ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು. ರಾಜ್ಯ ಸರ್ಕಾರ ತಕ್ಷಣವೇ ಬರ ಅಧ್ಯಯನ ಸಮಿತಿ ರಚಿಸಿ ಜಿಲ್ಲಾವಾರು ಸ್ಥಳ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.20 ಕೋಟಿ ಮೌಲ್ಯದ ಎಂಡಿಎಂಎ ವಶ, ಬಾಗಲಕೋಟೆಯಲ್ಲಿ ಇಬ್ಬರ ಬಂಧನ

ಮಂಗಳೂರು: ಮಂಗಳೂರು, ಬೆಂಗಳೂರು ಹಾಗೂ ನೆರೆಯ ಕೇರಳ ರಾಜ್ಯಕ್ಕೆ ಪೂರೈಕೆಯಾಗಬೇಕಿದ್ದ 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧನ ಮಾಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದರು. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನದ ಭಾಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧನ […]

Continue Reading

ಉಪ್ಪಿನಂಗಡಿ ಬಳಿ ನಕಲಿ ನೋಟು ಜಾಲ, ಏಳು ಮಂದಿ ಬಂಧಿಸಿದ ಪೊಲೀಸರು

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಭಾರಿ ಪ್ರಮಾಣದಲ್ಲಿ ನಕಲಿ 500 ಮುಖಬೆಲೆಯ ನೋಟುಗಳನ್ನು ತಯಾರಿಸುತ್ತಿದ್ದ ಸಂಘಟಿತ ಜಾಲವನ್ನು ಪುತ್ತೂರು ಪೊಲೀಸರು ಭೇದಿಸಿದ್ದು, ಘಟನೆಗೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಿ ನಕಲಿ ನೋಟುಗಳು, ಮುದ್ರಣ ಯಂತ್ರಗಳು ಹಾಗೂ ಇತರ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸರು ಕಣಿಯೂರು ಗ್ರಾಮದ ಅಡೆಂಜ ಪ್ರದೇಶದಲ್ಲಿ ಇರುವ ಬಾಡಿಗೆ ಕಟ್ಟಡದ ಮೇಲೆ ದಾಳಿ ನಡೆಸಿದರು. ಈ ವೇಳೆ […]

Continue Reading