ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಯುವಜನತೆ ತಪ್ಪದೇ ಮತದಾನ ಮಾಡಿ: ಸಿಇಒ ಡಾ.ದಿಲೀಷ್ ಶಶಿ

ಕಾರವಾರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಯುವ ಜನತೆ ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಆಯ್ಕೆಯ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಹೇಳಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಅಂಗವಾಗಿ,ವಿದ್ಯಾರ್ಥಿಗಳಿಂದ ಪೋಷಕರಿಗೆ ಅರಿವು ಮೂಡಿಸಲು ಕಾರವಾರದ ಹಿಂದುಳಿದ ವರ್ಗಗಳ ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಿದ್ದ ಪತ್ರ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯ ಕಾರ್ಯದಲ್ಲಿ ಈಗಾಗಲೇ ಬಿ.ಎಲ್.ಓ ಗಳು ತಮ್ಮ ಮನೆಗಳಿಗೆ ಎನ್ಯುಮರೇಷನ್ […]

Continue Reading

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್

ಮಂಗಳೂರು: ರಾಜ್ಯದ ಹೊರ ಜಿಲ್ಲೆಗಳಿಂದ ತುರ್ತು ಚಿಕಿತ್ಸೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳನ್ನು ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಯು ಹಾಸಿಗೆ ಕೊರತೆ ಕಾಡುತ್ತಿದೆ. ಪರಿಣಾಮ ಒತ್ತಡ ಹೆಚ್ಚಿದ್ದು, ರೋಗಿಗಳನ್ನು ಶಿಫಾರಸು ಮಾಡುವ ಮೊದಲು ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯತೆ ಪರಿಶೀಲಿಸುವ ವ್ಯವಸ್ಥೆ ಕಡ್ಡಾಯಗೊಳಿಸಬೇಕು. ಇದಕ್ಕಾಗಿ ಸಹಾಯವಾಣಿ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆಗಳ ರೋಗಿಗಳನ್ನು ಏಕಾಏಕಿ ಕರೆತರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಾಕಷ್ಟು ಅರ್ಹ ಬಡ ರೋಗಿಗಳಿಗೆ ವೆನ್ಲಾಕ್ ಆಸ್ಪತ್ರೆಯ ಲಾಭ ಸಿಗದೇ ಇರುವಂತಹ ಸ್ಥಿತಿ ನಿರ್ಮಾಣ ಆಗಿದೆ […]

Continue Reading

ಶಾಸಕ ವೇದವ್ಯಾಸ ಕಾಮತ್ ವಿರುದ್ಧದ ಎಫ್ಐಆರ್ ಹೈಕೋರ್ಟ್ ರದ್ದು, ರಾಜಕೀಯ ಪ್ರೇರಿತ ದೂರ ಆಗಿತ್ತು: ಕಾಮತ್

ಮಂಗಳೂರು: ಶಕ್ತಿನಗರದ ಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿತು. ಕಳೆದ ವರ್ಷ ಮಾರ್ಚ್ ನಲ್ಲಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಇದೊಂದು ರಾಜಕೀಯ ಪ್ರೇರಿತ ದುರುದ್ದೇಶದ ಪ್ರಕರಣ ಆಗಿತ್ತು. ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನನ್ನ […]

Continue Reading

ಅಕ್ರಮ ಬಾಂಗ್ಲಾ ಪ್ರಜೆಗಳ ಪತ್ತೆ, ಇದು ಎಚ್ಚರಿಕೆ ಗಂಟೆ, ಸರಕಾರ ಎಚ್ಚೆತ್ತುಕೊಳ್ಳಲಿ: ಶಾಸಕ ಡಾ. ಭರತ್ ಶೆಟ್ಟಿ

 ಸುರತ್ಕಲ್ : ಮಂಗಳೂರಿನ ಸುರತ್ಕಲ್ ಸಮೀಪದ ಮುಕ್ಕಾದಲ್ಲಿ 8 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಕೂಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿ, ಅನಧಿಕೃತ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಘಟನೆ ರಾಜ್ಯದ ಭದ್ರತೆಗೆ ಎಚ್ಚರಿಕೆಯ ಗಂಟೆ ಆಗಿದೆ. ಇಂತಹ ಅಕ್ರಮ ನುಸುಳುವಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ಇದರ ಪರಿಣಾಮ ಭೀಕರ ಆಗಿರುತ್ತದೆ. ಬಾಂಗ್ಲಾದೇಶಿಗರನ್ನು ಹೊರಹಾಕಲು ಕೇಂದ್ರ ಸರಕಾರದ ಜತೆ ರಾಜ್ಯ ಸರಕಾರ ಕೈಜೋಡಿಸಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. ದುರದೃಷ್ಟವಶಾತ್ ರಾಜ್ಯದ ಗೃಹ ಮಂತ್ರಿ […]

Continue Reading

ನಕಲಿ ಆಧಾರ ಕಾರ್ಡ್ ಬಳಸಿ ಅಕ್ರಮವಾಗಿ ಭಾರತಕ್ಕೆ ಪ್ರವೇಶ,  ಮಂಗಳೂರಿನ ಮುಕ್ಕದಲ್ಲಿ 8 ಮಂದಿ ಬಾಂಗ್ಲಾದೇಶದ ಪ್ರಜೆಗಳ ಪತ್ತೆ: ಸುಧೀರ್ ಕುಮಾರ್

ಮಂಗಳೂರು: ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಮಂಗಳೂರಿನ ಮುಕ್ಕಾ ಪ್ರದೇಶದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಬಂಧಿತರು ಸುಮಾರು ಮೂರು ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದು, ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಮೂಲಕ ದೇಶ ಪ್ರವೇಶ ಮಾಡಿದ್ದಾರೆ. ಬಳಿಕ ಮುರ್ಶಿದಾಬಾದ್ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳ […]

Continue Reading

ಯಲ್ಲಾಪುರ: ಭೀಕರ ರಸ್ತೆ ಅಪಘಾತ 7 ಮಂದಿ ಸಾವು, ಡಿಸಿ ಲಕ್ಷ್ಮಿಪ್ರಿಯಾ, ಎಸ್ಪಿ ದೀಪನ್ ಸ್ಥಳಕ್ಕೆ ದೌಡು, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಆರತಿಬೈಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಸೂತಕದ ವಾತಾವರಣ ನಿರ್ಮಾಣ ಮಾಡಿದೆ. ಕ್ರೂಸರ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಪ್ರಯಾಣಿಸುವವರಲ್ಲಿ ಭಯ ಹುಟ್ಟಿಸಿದೆ. ಘಟನೆಯಲ್ಲಿ ಮೃತಪಟ್ಟವರು ಧಾರವಾಡದ ಬಸವರಾಜ್ ಕನಕನವರ್ (48), ಧಾರವಾಡ ಜಯನಗರದ ಅಭಿಷೇಕ ಈಶ್ವರ (28) ವರ್ಷ, ಸಾಧನಕೇರಿಯ ಅಕ್ಷಯ (26), ಸಪ್ತಾಪುರದ ಅಭಿಷೇಕ ಮಲ್ಲೇಶ ಮಡಬಾವಿ (26), ಕುರುಬಗಟ್ಟಿಯ ಸಂಜೀವ […]

Continue Reading

ಮಂಗಳೂರಿನಲ್ಲಿ ಅಗಸ್ಟ್ 2 ರಿಂದ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್ ಹಬ್ಬ: ಡಾ. ಅಮರಶ್ರೀ ಅಮರನಾಥ ಶೆಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್- ಅ. 2 ರಿಂದ 8 ರವರೆಗೆ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಚೆಸ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ದೇಶದ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 600 ಕ್ಕೂ ಹೆಚ್ಚು ಮಂದಿ ಆಟಗಾರರು, ತರಬೇತುದಾರರು ಮತ್ತು ಪೋಷಕರು ಭಾಗವಹಿಸುವ ನಿರೀಕ್ಷೆ ಇದ್ದು, […]

Continue Reading

ಕುದ್ರೋಳಿ, ಅಳಕೆ, ಡೊಂಗರಕೇರಿಯಲ್ಲಿ ಕಾಮಾಲೆ, ಡೆಂಗೆ ಪ್ರಕರಣ ಪತ್ತೆ, ಆತಂಕ ಬೇಡ: ಡಿಎಚ್ ಒ ಡಾ. ತಿಮ್ಮಯ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮಾಲೆ (ಜಾಂಡಿಸ್) ಹಾಗೂ ಡೆಂಗೆ ಪ್ರಕರಣಗಳು ನಿಧಾನವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ಪಡುವ ಬದಲು ವೈಯಕ್ತಿಕ ಸ್ವಚ್ಛತೆ, ಸುರಕ್ಷಿತ ಕುಡಿವ ನೀರಿನ ಬಳಕೆ ಹಾಗೂ ಸೊಳ್ಳೆ ನಿಯಂತ್ರಣ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಡಿಎಚ್ ಒ ಡಾ. ಎಚ್.ಆರ್. ತಿಮ್ಮಯ್ಯ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರಿನ ಕುದ್ರೋಳಿ, ಅಳಕೆ ಹಾಗೂ ಡೊಂಗರಕೇರಿ ಪ್ರದೇಶಗಳಲ್ಲಿ ಜೂನ್ 23 ರಿಂದ ಇದೂವರೆಗೆ 19 ಕಾಮಾಲೆ ರೋಗದ ಪ್ರಕರಣಗಳು […]

Continue Reading

ಎಂಎಸ್‌ಎಂಇಗಳ ಬೆಳವಣಿಗೆಗೆ ಬ್ಯಾಂಕಿಂಗ್ ಬೆಂಬಲ ಅಗತ್ಯ: ಸಿಎ ಎಸ್.ಎಸ್. ನಾಯಕ್

ಮಂಗಳೂರು: ಅಂತರರಾಷ್ಟ್ರೀಯ ಎಂಎಸ್‌ಎಂಇ ದಿನದ ಅಂಗವಾಗಿ ಮಂಗಳೂರಿನ ಎಸ್‌ಡಿಎಂ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ “ಎಂಎಸ್‌ಎಂಇ ಮತ್ತು ಬ್ಯಾಂಕಿಂಗ್ ವ್ಯವಸ್ಥೆ: ಭಾರತೀಯ ಆರ್ಥಿಕತೆಯ ಸಬಲೀಕರಣ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ […]

Continue Reading

ಜನನ-ಮರಣ ಪ್ರಮಾಣಪತ್ರ ಅರ್ಜಿ ಸ್ವೀಕಾರ ಬಂದ್ ಎಂಬ ನಾಮಪಲಕ, ಪಾಲಿಕೆ ವಿರುದ್ಧ ಶಾಸಕ ವೇವ್ಯಾಸ್ ಕಾಮತ್ ಕೆಂಡಾಮಂಡಲ

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಎಸ್‌ಐಆರ್ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿರುವ ನೆಪದಲ್ಲಿ ಜುಲೈ 29 ರವರೆಗೆ ಜನನ ಮತ್ತು ಮರಣ ನೋಂದಣಿ ಅರ್ಜಿಗಳ ಸ್ವೀಕಾರ ಸ್ಥಗಿತಗೊಳಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಜನರ ಅಗತ್ಯ ಸೇವೆಗಳನ್ನು ಸ್ಥಗಿತಗೊಳಿಸಿರುವ ಮಹಾನಗರ ಪಾಲಿಕೆ ಆಡಳಿತ ಕೂಡಲೇ ಈ ನಿರ್ಧಾರ ಹಿಂಪಡೆದು ಅರ್ಜಿ ಸ್ವೀಕಾರ ಹಾಗೂ ಪ್ರಮಾಣ ಪತ್ರ ವಿತರಣೆಯನ್ನು ಸುಗಮಗೊಳಿಸಬೇಕು. ಆಡಳಿತಾಧಿಕಾರಿ ಮೂಲಕ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಇನ್ನು ಒಂದು ತಿಂಗಳು […]

Continue Reading