ಎಂಎಸ್‌ಎಂಇಗಳ ಬೆಳವಣಿಗೆಗೆ ಬ್ಯಾಂಕಿಂಗ್ ಬೆಂಬಲ ಅಗತ್ಯ: ಸಿಎ ಎಸ್.ಎಸ್. ನಾಯಕ್

ಮಂಗಳೂರು: ಅಂತರರಾಷ್ಟ್ರೀಯ ಎಂಎಸ್‌ಎಂಇ ದಿನದ ಅಂಗವಾಗಿ ಮಂಗಳೂರಿನ ಎಸ್‌ಡಿಎಂ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ “ಎಂಎಸ್‌ಎಂಇ ಮತ್ತು ಬ್ಯಾಂಕಿಂಗ್ ವ್ಯವಸ್ಥೆ: ಭಾರತೀಯ ಆರ್ಥಿಕತೆಯ ಸಬಲೀಕರಣ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ […]

Continue Reading

ಜನನ-ಮರಣ ಪ್ರಮಾಣಪತ್ರ ಅರ್ಜಿ ಸ್ವೀಕಾರ ಬಂದ್ ಎಂಬ ನಾಮಪಲಕ, ಪಾಲಿಕೆ ವಿರುದ್ಧ ಶಾಸಕ ವೇವ್ಯಾಸ್ ಕಾಮತ್ ಕೆಂಡಾಮಂಡಲ

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಎಸ್‌ಐಆರ್ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿರುವ ನೆಪದಲ್ಲಿ ಜುಲೈ 29 ರವರೆಗೆ ಜನನ ಮತ್ತು ಮರಣ ನೋಂದಣಿ ಅರ್ಜಿಗಳ ಸ್ವೀಕಾರ ಸ್ಥಗಿತಗೊಳಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಜನರ ಅಗತ್ಯ ಸೇವೆಗಳನ್ನು ಸ್ಥಗಿತಗೊಳಿಸಿರುವ ಮಹಾನಗರ ಪಾಲಿಕೆ ಆಡಳಿತ ಕೂಡಲೇ ಈ ನಿರ್ಧಾರ ಹಿಂಪಡೆದು ಅರ್ಜಿ ಸ್ವೀಕಾರ ಹಾಗೂ ಪ್ರಮಾಣ ಪತ್ರ ವಿತರಣೆಯನ್ನು ಸುಗಮಗೊಳಿಸಬೇಕು. ಆಡಳಿತಾಧಿಕಾರಿ ಮೂಲಕ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಇನ್ನು ಒಂದು ತಿಂಗಳು […]

Continue Reading

ಕಲಬುರಗಿ: ಸಶಸ್ತ್ರ ಮೀಸಲು ಪೊಲೀಸ್​​ ಪಡೆಯ ಪೊಲೀಸ್​​ ಕಾನ್ ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕಲಬುರಗಿ: ನಗರದ ಜಗತ್​ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಸಶಸ್ತ್ರ ಮೀಸಲು ಪೊಲೀಸ್​​ ಪಡೆಯ ಪೊಲೀಸ್​​ ಕಾನ್ ಸ್ಟೆಬಲ್ ಸೇವಾ ರೈಫಲ್‌ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶಿವಕುಮಾರ ನರಿಬೋಳ (32) ಮೃತ ಕಾನ್ ಸ್ಟೆಬಲ್ ಎಂದು ಗುರುತಿಸಲಾಗಿದೆ. ಜಗತ್ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ, ಪೊಲೀಸ್ ವಾಹನದಲ್ಲಿ ಕುಳಿತಿದ್ದ ವೇಳೆ ತಮ್ಮ ಬಳಿಯಿದ್ದ ಸರ್ಕಾರಿ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಘಟನಾ […]

Continue Reading

ಯಲ್ಲಾಪುರ: ಭೀಕರ ಅಪಘಾತ, ಕ್ರೂಸರ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ 6 ಮಂದಿ ಸಾವು, ಮೂರು ಮಂದಿಗೆ ಗಾಯ

ಯಲ್ಲಾಫುರ: ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 6 ಜನ ಮೃತಪಟ್ಟಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಅರ್ತಿಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ನಸುಕಿನ ವೇಳೆ ಸಂಭವಿಸಿದೆ. ಧಾರವಾಡ ಮೂಲದ ಬಸವರಾಜ, ಆಭಿಷೇಕ, ಅಕ್ಷಯ, ಅಭಿಷೇಕ, ಸಂಜೀವ್, ಮಂಜುನಾಥ ಮತ್ತು ಇನ್ನೊಬ್ಬ ವ್ಯಕ್ತಿ ಮೃತಪಟ್ಟಿದ್ದು ಶಿವರಾಜ, ಚೆನ್ನ ಬಸು, ಸಚಿನ್ ಎಂಬುವವರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದಿಂದ ಗೋಕರ್ಣಕ್ಕೆ ತೆರಳುತ್ತಿದ್ದ […]

Continue Reading

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ 49.22 ಕೋಟಿಗೆ ಸಂಸದ ಚೌಟ ಮನವಿ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ–275ರ ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರ 49.22 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರೊಂದಿಗೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಶೀಘ್ರ ಆಡಳಿತಾತ್ಮಕ ಅನುಮೋದನೆ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮಾಣಿ–ಸಂಪಾಜೆ ರಸ್ತೆ ದಕ್ಷಿಣ ಕನ್ನಡ ಮತ್ತು ಒಳನಾಡು ಪ್ರದೇಶಗಳ ನಡುವಿನ ಪ್ರಮುಖ […]

Continue Reading

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯಾಗಿ ಕೆ.ಎಂ. ಸವಿತಾ ನೇಮಕ, ಸರ್ಕಾರದ ಆದೇಶ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ **ಕೆ.ಎಂ. ಸವಿತಾ** ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಕೆ.ಎಂ. ಸವಿತಾ ಅವರು ಈ ಹಿಂದೆ ಮೈಸೂರು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ್ದು, ಬಳಿಕ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಕುಲಪತಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರನ್ನು ಇದೀಗ ಕೆಎಎಸ್ ಶ್ರೇಣಿಯ ಮೈಸೂರು ಮಹಾನಗರ ಪಾಲಿಕೆ ಆಯುಕ್ತರ ಹುದ್ದೆಗೆ ನಿಯೋಜಿಸಲಾಗಿದೆ. ಇದೇ ವೇಳೆ, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶೇಖ್ […]

Continue Reading

ಚೆಕ್ ಅಮಾನ್ಯ ಪ್ರಕರಣ, ಖುಲಾಸೆ ತೀರ್ಪು ರದ್ದು, ದುಪ್ಪಟ್ಟು ಪರಿಹಾರ ಪಾವತಿಸಲು ನ್ಯಾಯಾಲಯ ಆದೇಶ

ಮಂಗಳೂರು: ಚೆಕ್ ಅಮಾನ್ಯ ಪ್ರಕರಣದಲ್ಲಿ ಮಂಗಳೂರಿನ 4ನೇ ಜೆಎಂಎಫ್‌ಸಿ ನ್ಯಾಯಾಲಯ ನೀಡಿದ್ದ ಖುಲಾಸೆ ತೀರ್ಪ ಅನ್ನು ರದ್ದುಗೊಳಿಸಿರುವ ಮಂಗಳೂರಿನ ಪ್ರಧಾನ ಕೌಟುಂಬಿಕ ನ್ಯಾಯಾಲಯ, ಆರೋಪಿಯನ್ನು ದೋಷಿ ಎಂದು ಪರಿಗಣಿಸಿ ಚೆಕ್ ಮೊತ್ತದ ದುಪ್ಪಟ್ಟು ಪರಿಹಾರವನ್ನು ಬ್ಯಾಂಕ್‌ಗೆ ಪಾವತಿಸುವಂತೆ ಆದೇಶ ನೀಡಿದೆ. ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಕೆ. ಲಕ್ಷ್ಮೀನಾರಾಯಣ ಭಟ್ ಅವರು ಈ ತೀರ್ಪು ನೀಡಿದ್ದು, ಮರೋಳಿ ನಿವಾಸಿ ಗುರುರಾಜ್ ಹಾಗೂ ಅವರ ಪತ್ನಿ ಲಕ್ಷ್ಮೀ ಗುರುರಾಜ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ […]

Continue Reading

ನೀಟ್ ಅಕ್ರಮ, ಸಿಡಿದ ಎನ್‌ಎಸ್‌ಯುಐ, ಪ್ರಧಾನಿ ವಿರುದ್ಧ ಸಹಿ ಸಂಗ್ರಹ ಅಭಿಯಾನ: ಸುಹಾನ್ ಆಳ್ವ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕ ಜಿಲ್ಲೆಯಾದ್ಯಂತ ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ. ಸಂಗ್ರಹವಾಗುವ ಪೋಸ್ಟ್‌ಕಾರ್ಡ್‌ಗಳನ್ನು ಪ್ರಧಾನ ಮಂತ್ರಿಗೆ ಕಳುಹಿಸಲಾಗುವುದು ಎಂದು ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಕಾಲೇಜುಗಳಲ್ಲಿ ಸಹಿ ಸಂಗ್ರಹ ನಡೆಯಲಿದ್ದು, ನೀಟ್ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ […]

Continue Reading

ತೂಗುಸೇತುವೆಗಳ ಸರದಾರ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಮಂಗಳೂರು: ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ , “ಸಾಮಾನ್ಯ ಹಳ್ಳಿಗಳ ಜನಸಾಮಾನ್ಯರ ಹಾಗೂ ಶಾಲಾ ಮಕ್ಕಳ ಕಷ್ಟಗಳಿಗೆ ಸ್ಪಂದಿಸಿ, ತಮ್ಮ […]

Continue Reading

ತೂಗುಸೇತುವೆಗಳ ಸರದಾರ, ಪದ್ಮಶ್ರೀ ವಿಜೇತ ಗಿರೀಶ್ ಭಾರಧ್ವಾಜ್ ನಿಧನಕ್ಕೆ ಸಚಿವ ಯು.ಟಿ. ಖಾದರ್ ಸಂತಾಪ

ಮಂಗಳೂರು: ದೇಶದ ಖ್ಯಾತ ತೂಗು ಸೇತುವೆ ತಜ್ಞ ಪದ್ಮಶ್ರೀ ಪ್ರಶಸ್ತಿ ವಿಜೇತ ಗಿರೀಶ್ ಭಾರಧ್ವಾಜ್ ಅವರು ವಿಧಿವಶರಾಗಿರುವ ಸುದ್ದಿ ತಿಳಿದು ತೀವ್ರ ಆಘಾತ ಆಗಿದ್ದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸಂತಾಪ ಸೂಚಿಸಿದ್ದಾರೆ. ಗಿರೀಶ್ ಭಾರಧ್ವಾಜ್ ಅವರು ತಮ್ಮ ವಿಶಿಷ್ಟ ತಾಂತ್ರಿಕ ಪರಿಣತಿ ಮತ್ತು ಸಮರ್ಪಿತ ಸೇವೆಯಿಂದ ದೇಶದಾದ್ಯಂತ ಅನೇಕ ತೂಗು ಸೇತುವೆಗಳ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.ಅನೇಕ ದ್ವೀಪ ಪ್ರದೇಶದ ನಾಗರಿಕರಿಗೆ ತಮ್ಮ ದೈನಂದಿನ ಚಟುವಟಿಕೆಗಳಿಗೆ ಇತರ […]

Continue Reading