3 ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ ಕಾಂಗ್ರೆಸ್ ಸರ್ಕಾರ: ಬಿಜೆಪಿ ವಕ್ತಾರ ಚಂದ್ರಶೇಖರ್

ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿರುವ ಬೆನ್ನಲ್ಲೇ ಆಡಳಿತದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಆರ್ಥಿಕವಾಗಿ ಸದೃಢವಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಸಾಲದ ಸುಳಿಗೆ ಸಿಲುಕಿಸಿದ್ದು, ಇದೇ ಆಡಳಿತ ಇನ್ನೆರಡು ವರ್ಷ ಮುಂದುವರಿದರೆ ಜನಸಾಮಾನ್ಯರ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ರಾಜ್ಯದ ಆಡಳಿತ ವ್ಯವಸ್ಥೆ ಎಂಜಿನ್ ಕೆಟ್ಟು, ಟಯರ್ ಪಂಚರ್ ಆಗಿರುವ ಬಸ್ಸಿನಂತಾಗಿದೆ. ಮುಖ್ಯಮಂತ್ರಿ ಬದಲಾದರೂ ಆಡಳಿತ ವ್ಯವಸ್ಥೆಯ ವೈಫಲ್ಯ ಮಾತ್ರ ಬದಲಾಗಿಲ್ಲ. […]

Continue Reading

ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆಯ ಪ್ರಕರಣ, ಹಿಂದಿ ಶಿಕ್ಷಕ ಆರೆಸ್ಟ್

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಹಿಂದಿ ಶಿಕ್ಷಕ ಅಬ್ಬು ತಹಲ ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಜೂನ್ 9 ರಂದು ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಮಾಡಿಕೊಂಡ ಬಳಿಕ, ಮೃತ ವಿದ್ಯಾರ್ಥಿ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ದೂರಿನಲ್ಲಿ ಶಿಕ್ಷಕ ಅಬ್ಬು ತಹಲ ಅವರು […]

Continue Reading

ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಂಟನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್(313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ. […]

Continue Reading

ಗ್ಯಾರಂಟಿ ಭ್ರಷ್ಟಾಚಾರ, ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ವಾಗ್ದಾಳಿ

ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹೆಸರಿನಲ್ಲಿ ಲಕ್ಷಾಂತರ ಅರ್ಹ ಫಲಾನುಭವಿಗಳ ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕತ್ತರಿ ಹಾಕಿದ್ದು, ಇದರ ಮೂಲಕ ತನ್ನ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬ್ಯಾಂಕ್ ಖಾತೆಯೇ ಇಲ್ಲದ ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ಪಾವತಿಯಾಗಿರುವುದು, ಒಂದೇ ಬ್ಯಾಂಕ್ ಖಾತೆಗಳಿಗೆ ಹಲವು ಬಾರಿ ಹಣ ವರ್ಗಾವಣೆಯಾಗಿರುವುದು ಹಾಗೂ ಮರಣ ಹೊಂದಿದವರ ಹೆಸರಿಗೂ […]

Continue Reading

ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿ ಚಿಂತನಾ ಸಭೆ: ಕುಪ್ಮಾ ರಾಜ್ಯಾಧ್ಯಕ್ಷ ಡಾ. ಮೋಹನ್ ಆಳ್ವ

ಮಂಗಳೂರು: ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಕರ್ನಾಟಕ ಅನುದಾನರಹಿತ ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಸಂಘದ (ಕುಪ್ಮಾ) ರಾಜ್ಯಾಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿಯ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ‘ಚಿಂತನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದೊಂದಿಗೆ ಸಂಘರ್ಷದ ಮಾರ್ಗವನ್ನು ಬಯಸುವುದಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಹಕಾರದ ಮನೋಭಾವದಿಂದ ಸಮಸ್ಯೆಗಳನ್ನು ಪರಿಹರಿಸಬೇಕು. ಸಾರಿಗೆ, ಅರಣ್ಯ, […]

Continue Reading

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಟಾಚಾರ, ಪಕ್ಷ ಸಂಘಟನೆಗೆ ರಾಜ್ಯದಾದ್ಯಂತ ಪ್ರವಾಸ: ವಿಜಯೇಂದ್ರ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನ ಪ್ರಕರಣದ ಕುರಿತು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಳ್ಳಿಹಾಕಿದ್ದು, ಈ ಬೆಳವಣಿಗೆಯೊಂದಿಗೆ ತಮ್ಮ ಯಾವುದೇ ಸಂಬಂಧ ಇಲ್ಲ. ಪಕ್ಷದ ವಿರುದ್ಧ ನಡೆದುಕೊಳ್ಳುವ ಅಥವಾ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಧರ್ಮಸ್ಥಳಕ್ಕೆ ಆಗಮಿಸುವ ಮೊದಲು ನಾಲ್ಕು ದಿನಗಳ ಕಾಲ ನವದೆಹಲಿಯಲ್ಲಿ ಬಿಜೆಪಿ […]

Continue Reading

ಲೇಡಿಗೋಷನ್ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಸುಸಜ್ಜಿತ ವಿಡಿಯೊ ಕಾನ್ಫರೆನ್ಸ್ ಹಾಲ್, ನೂತನ ಸಭಾಗೃಹ

ಮಂಗಳೂರು: ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳ ಜತೆಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಮಾರ್ಪಡಿತ ವಿಡಿಯೋ ಕಾನ್ಫರೆನ್ಸ್ ಹಾಲ್ ಹಾಗೂ ಆಧುನೀಕೃತ ಸಭಾಗೃಹ ಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗಿದೆ. ಈ ವಿಡಿಯೋ ಕಾನ್ಫರೆನ್ಸ್ ಹಾಲ್‌ನ್ನು ಈ ಹಿಂದೆ ಲಯನ್ಸ್ ಕ್ಲಬ್ ಇಂಟರ್ನೇಶನಲ್ ಸಂಸ್ಥೆಯ ಸಹಕಾರದೊಂದಿಗೆ, ಅಂದಿನ ಲಯನ್ಸ್ ಗವರ್ನರ್ ವಸಂತ್ ಶೆಟ್ಟಿ ಅವರ ಅನುದಾನದ ಮೂಲಕ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾಗಿತ್ತು. ಇದೀಗ ಹೆಚ್ಚುವರಿ ತಾಂತ್ರಿಕ ಸೌಲಭ್ಯಗಳ ಅಳವಡಿಕೆಯಿಂದ ಸಭಾಂಗಣವು ಇನ್ನಷ್ಟು […]

Continue Reading

ಮಂಗಳೂರಿನಲ್ಲಿ ಕಿಂಗ್ ಖಾನ್‌ ಹವಾ: ರೋಹನ್‌ ಕಾರ್ಪೊರೇಶನ್‌ ಅನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್‌ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ

ಮಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರ ಉಪಸ್ಥಿತಿಯಿಂದ ರೋಹನ್‌ ಕಾರ್ಪೊರೇಶನ್‌ ಆಯೋಜಿಸಿದ್ದ ‘ಅನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್‌’ ಕಾರ್ಯಕ್ರಮ ಗುರುವಾರ ನಗರದ ಅಡ್ಯಾರ್‌ ಗಾರ್ಡನ್‌ನಲ್ಲಿ ಗಮನ ಸೆಳೆಯಿತು. ಉದ್ಯಮ ವಲಯದ ಗಣ್ಯರು, ವಿವಿಧ ಕ್ಷೇತ್ರಗಳ ಪ್ರಮುಖರು, ಸಮಾಜದ ಪ್ರತಿನಿಧಿಗಳು ಮತ್ತು ಸಂಸ್ಥೆಯ ಹಿತೈಷಿಗಳು ಕಾರ್ಯಕ್ರಮದಲ್ಲಿ ಇದ್ದರು. ಸಂಜೆ ಆರಂಭವಾದ ಕಾರ್ಯಕ್ರಮ ರಾತ್ರಿ ತನಕ ಉತ್ಸಾಹಭರಿತ ವಾತಾವರಣದಲ್ಲಿ ನಡೆಯಿತು. ಕರಾವಳಿಯ ಕಲಾತಂಡಗಳ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ಇಂಡಿಯನ್‌ ಐಡಲ್‌ ಖ್ಯಾತಿಯ ಗಾಯಕ […]

Continue Reading

ಮುಂಗಾರು ಎಚ್ಚರಿಕೆ: ಉತ್ತರ ಕನ್ನಡ ಸೇರಿ 4 ಸೂಕ್ಷ್ಮ ಜಿಲ್ಲೆಗಳ ಉಸ್ತುವಾರಿ ಯು.ಟಿ. ಖಾದರ್‌ಗೆ, 13 ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಮುಂಗಾರು ಮಳೆ ಹಾಗೂ ಸಂಭವನೀಯ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿವಿಧ ಜಿಲ್ಲೆಗಳಿಗೆ ಸಚಿವರನ್ನು ಪ್ರಕೃತಿ ವಿಕೋಪ ಉಸ್ತುವಾರಿಗಳಾಗಿ ನೇಮಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅತಿ ಹೆಚ್ಚು ಮಳೆ ಹಾಗೂ ಪ್ರಕೃತಿ ವಿಕೋಪಗಳಿಗೆ ತುತ್ತಾಗುವ ಸೂಕ್ಷ್ಮ ಪ್ರದೇಶಗಳ ಪೈಕಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ವಹಿಸಲಾಗಿದೆ. ಇದರ ಜೊತೆಗೆ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ […]

Continue Reading

ಎಂಸಿಸಿ ಬ್ಯಾಂಕ್ ನ ದೇರಳಕಟ್ಟೆ, ಕಟಪಾಡಿ ಮತ್ತೇರಡು ಹೊಸ ಶಾಖೆ ಗ್ರಾಹಕರಿಗೆ ಲೋಕಾರ್ಪಣೆ: ಅನಿಲ್ ಲೋಬೊ

ಮಂಗಳೂರು: 114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಹಣಕಾಸು ವರ್ಷದಲ್ಲಿ 1,535 ಕೋಟಿ ರೂ.ಗಳ ಒಟ್ಟು ವ್ಯವಹಾರ ವಹಿವಾಟು ದಾಖಲಿಸಿ ಹೊಸ ಮೈಲುಗಲ್ಲು ಸಾಧಿಸಿದೆ. ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆಯಲ್ಲಿ ಜೂನ್ 28 ರಂದು ಹಾಗೂ 23 ನೇ ಶಾಖೆ ಉಡುಪಿಯ ಕಟಪಾಡಿಯಲ್ಲಿ ಅಗಸ್ಟ್ 2 ರಂದು ಉದ್ಘಾಟನೆಯಾಗಲಿದೆ ಎಂದು ಬುಧವಾರ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರು ತಿಳಿಸಿದರು. ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟು ಶೇ.22.89ರಷ್ಟು ಏರಿಕೆಯಾಗಿದೆ ಎಂದು […]

Continue Reading