ದೊಡ್ಡ ಸಾಮ್ರಾಜ್ಯಕ್ಕೆ ಅಧಿಪತಿ ಡಾ.ತುಂಬೆ ಮೊಯ್ದೀನ್…ತುಂಬೆ ಗ್ರಾಮದಿಂದ ಆರಂಭದ ಪಯಣದ ಹಾದಿ

ಮಂಗಳೂರು: ಸಣ್ಣ ಉದ್ಯಮ ಕನಸಿನೊಂದಿಗೆ ಆರಂಭವಾದ ಪ್ರಯತ್ನವನ್ನು ನಿರಂತರ ಪರಿಶ್ರಮ, ದೂರದೃಷ್ಟಿ ಹಾಗೂ ಸಾಮಾಜಿಕ ಬದ್ಧತೆಯೊಂದಿಗೆ ಬೆಳೆಸಿದ ತುಂಬೆ ಗ್ರೂಪ್‌, ಹಲವು ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಸಂಸ್ಥೆಯ ಮುಂದಿನ ಬೆಳವಣಿಗೆಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತುಂಬೆ ಗ್ರೂಪ್‌ ಸಂಸ್ಥಾಪಕ ಡಾ.ತುಂಬೆ ಮೊಯ್ದೀನ್ ಅವರು ಪತ್ರಿಕಾಗೋಷ್ಠಿಯಲ್ಲಿ ಮನಬಿಚ್ಚಿ ಮಾತನಾಡಿದರು. ಮಂಗಳೂರಿನ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಯುವಕನಾಗಿ ಉದ್ಯಮ ಕ್ಷೇತ್ರದ ಕನಸು ಕಂಡಿದ್ದೆ. ಮೂರು ದಶಕಗಳ ಹಿಂದೆ ಗಲ್ಫ್‌ಗೆ ತೆರಳಿ ತಮ್ಮ ಉದ್ಯಮ […]

Continue Reading

ಎಂ.ಡಿ. ಶಿಕ್ಷಣಕ್ಕೆ 1.5 ಕೋಟಿ ವಿದ್ಯಾರ್ಥಿವೇತನ, ತುಂಬೆ ಟರ್‌ನ್ಯಾಷನಲ್ ಪಾಥ್‌ವೇ ನೆರವು

ಮಂಗಳೂರು: ಅರ್ಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬರ ವೈದ್ಯಕೀಯ ಸ್ನಾತಕೋತ್ತರ ಪದವಿ ಎಂ.ಡಿ. ಶಿಕ್ಷಣಕ್ಕಾಗಿ ತುಂಬೆ ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದೀನ್ ಅವರು 1.5 ಕೋಟಿ ಮೊತ್ತದ ವಿದ್ಯಾರ್ಥಿವೇತನ ಘೋಷಣೆ ಮಾಡಿದ್ದಾರೆ. ಮಂಗಳೂರಿನ ಪುರಭವನದಲ್ಲಿ ನಡೆದ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವಿದ್ಯಾರ್ಥಿವೇತನ ವಿತರಣೆ, ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಣೆ ಹಾಗೂ ‘ಗ್ಲೋಬಲ್ ಲೀಡರ್‌ಶಿಪ್ ಅವಾರ್ಡ್‌–2026’ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿನಿಗೆ ‘ತುಂಬೆ ಇಂಟರ್‌ನ್ಯಾಷನಲ್ ಪಾಥ್‌ವೇ ಪ್ರೋಗ್ರಾಂ’ನ ವಿದ್ಯಾರ್ಥಿವೇತನ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಬಿಸಿಎಫ್ […]

Continue Reading

ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 15,539 ಅಭ್ಯರ್ಥಿಗಳು, ಸ್ಥಳದಲ್ಲಿಯೇ 2416 ಮಂದಿಗೆ ಆಫರ್: ವಿವೇಕ್ ಆಳ್ವ

ಮಂಗಳೂರು; ಉದ್ಯೋಗ ಅರಸಿ ಬಂದ ಸಾವಿರಾರು ಅಭ್ಯರ್ಥಿಗಳ ಪೈಕಿ 2,416 ಮಂದಿಗೆ ಸ್ಥಳದಲ್ಲೇ ಉದ್ಯೋಗದ ಆಫರ್ ದೊರೆತಿದ್ದು, ಮತ್ತೊಂದು 6,183 ಮಂದಿ ಮುಂದಿನ ಹಂತದ ನೇಮಕಾತಿ ಪ್ರಕ್ರಿಯೆಗೆ ಆಯ್ಕೆಯಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ ಈ ಬಾರಿ ಗಮನಾರ್ಹ ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 332 ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು, 15,539 ಅಭ್ಯರ್ಥಿಗಳು ವಿವಿಧ […]

Continue Reading

ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊಗೆ ಮಾತೃ ವಿಯೋಗ

ಮಂಗಳೂರು: ಮೂಡುಜೆಪ್ಪು–ಕೆಲರಾಯಿ ನಿವಾಸಿ, ದಿವಂಗತ ಗಿಲ್ಬರ್ಟ್ ಮೊಂತೆರೊ ಅವರ ಪತ್ನಿ ಪ್ರೆಸಿಲ್ಲಾ ಮೊಂತೆರೊ (81) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಪರೋಪಕಾರಿ ಸ್ವಭಾವದವರಾಗಿದ್ದ ಪ್ರೆಸಿಲ್ಲಾ ಮೊಂತೆರೊ ಅವರು ನೆರೆಹೊರೆಯವರು ಹಾಗೂ ಪರಿಚಿತರ ಜತೆಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಸರಳತೆ ಹಾಗೂ ಸೌಹಾರ್ದ ಸ್ವಭಾವದಿಂದ ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದ ಅವರು, ಕುಟುಂಬ ಹಾಗೂ ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗಿದ್ದರು. ಮೃತರು ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ಸೇರಿದಂತೆ ಮೂರು ಮಂದಿ […]

Continue Reading

ಮಾಜಿ ಸಚಿವ ನಾಗೇಶ್ ನಿಧನಕ್ಕೆ ಸಿಎಂ ಡಿಕೆಶಿ ಸಂತಾಪ

ಬೆಂಗಳೂರು: ಬಹಳ ವರ್ಷಗಳಿಂದ ನನಗೆ ಚಿರಪರಿಚಿತರಾದ ಮಾಜಿ ಸಚಿವ ನಾಗೇಶ್ ಅವರು ಮಂತ್ರಿಗಳಾಗಿ , ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಉತ್ತಮ ಮಾಡಿದ್ದರು. ಅವರೊಬ್ಬ ಪ್ರಾಮಾಣಿಕ ವ್ಯಕ್ತಿಯಾಗಿದ್ದರು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಮಾಜಿ ಸಚಿವ ಬಿ ಸಿ.ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ ಶಿಸ್ತು ತರಲು ನಾಗೇಶ್ ಬಹಳ ಪ್ರಯತ್ನಿಸಿದರು. ನೊಣವಿನಕೆರೆಗೆ ಭೇಟಿ ನೀಡಿದಾಗಲೆಲ್ಲ ನೊಣವಿನಕೆರೆ ಮಠದ ಎಲ್ಲಾ […]

Continue Reading

ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಮಾಧ್ಯಮ:ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳ ಮಾಹಿತಿ ಜನರಿಗೆ ತಲುಪಿಸುವುದರ ಜತೆಗೆ, ಸಾರ್ವಜನಿಕರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಲ್ಲಿಯೂ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ), ಬೆಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ […]

Continue Reading

ಮಂಗಳೂರು: ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ

ಮಂಗಳೂರು: ನಗರದಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಿಡೀರ್ ದಾಳಿ ಮುಂದುವರೆಸಿದ್ದು, ಶನಿವಾರ ಸಿಟಿ ಸೆಂಟರ್ ಮಾಲ್ ನಲ್ಲಿ ಇದ್ದ ಮಳಿಗೆ ಮೇಲೆ ದಾಳಿ ಮಾಡಿ, ಸುರಕ್ಷತೆ ಹಾಗೂ ಕೊಳೆತ ಮಾಂಸ ಪತ್ತೆ ಆಗಿರುವ ಹಿನ್ನಲೆಯಲ್ಲಿ ಬಂದ್ ಮಾಡಿಸಿದ್ದರು. ಇದರ ಬೆನ್ನಲ್ಲೆ ಭಾನುವಾರ ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ದಾಳಿ ಮಾಡಿ ಅಧಿಕಾರಿಗಳು ಗುಣಮಟ್ಟ ಹಾಗೂ ಶುಚಿತ್ವವನ್ನು ಪರಿಶೀಲನೆ ನಡೆಸಿದರು. ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಯ ಅಡುಗೆ ಕೋಣೆ, […]

Continue Reading

ಕೊಳೆತ ಮಾಂಸ ಪತ್ತೆ, ಆಹಾರ ಮಳಿಗೆ, ಪಿಜಿ, ಹಾಸ್ಟೆಲ್‌ಗಳಿಗೂ ದಾಳಿ, ನಿಯಮ ಉಲ್ಲಂಘಿಸಿದರೆ ಯಾರನ್ನು ಬಿಡಲ್ಲ: ಸಚಿವ ಖಾದರ್

ಮಂಗಳೂರು: ನಗರದ ಕೆಎಫ್‌ಸಿ ರೆಸ್ಟೋರೆಂಟ್‌ನಲ್ಲಿ ಕೊಳೆತ ಮಾಂಸ ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಮಳಿಗೆಗಳ ಫ್ರ್ಯಾಂಚೈಸಿಗಳಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲೆಡೆ ಇಂತಹ ದಾಳಿ ಹಾಗೂ ತಪಾಸಣೆಗಳು ನಡೆಯಲಿವೆ. ಆಹಾರ ಮಳಿಗೆಗಳ ಅಡುಗೆಮನೆ ಹಾಗೂ ಸಂಗ್ರಹ ಕೊಠಡಿಗಳಲ್ಲಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾತ್ರ ಇರಿಸಬೇಕು. ನೈರ್ಮಲ್ಯ ಕಾಪಾಡಬೇಕು. ಯಾವುದೇ ಸಂದರ್ಭದಲ್ಲೂ ದಾಳಿ ನಡೆಸಬಹುದು ಎಂದು ಅವರು ಎಚ್ಚರಿಸಿದರು. ಎಷ್ಟೇ ದೊಡ್ಡವರಾಗಿದ್ದರೂ, ಸಣ್ಣವರಾಗಿದ್ದರೂ ನಿಯಮ ಉಲ್ಲಂಘಿಸಿದರೆ ಬಿಡುವುದಿಲ್ಲ. ನಮಗೆ ಜನರ ಆರೋಗ್ಯವೇ ಮುಖ್ಯ. […]

Continue Reading

ಸಿರಸಿ: ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಕೆನರಾ ಬ್ಯಾಂಕ್‌ನಿಂದ ‘ವಿದ್ಯಾಜ್ಯೋತಿ’ ಪ್ರತಿಭಾ ಪುರಸ್ಕಾರ

ಸಿರಸಿ: ಶಿಕ್ಷಣದ ಜತೆಗೆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಮಕ್ಕಳ ಭವಿಷ್ಯದ ಸಾಧನೆಗೆ ಬಲ ನೀಡುತ್ತದೆ. ಆ ನಿಟ್ಟಿನಲ್ಲಿ ಕೆನರಾ ಬ್ಯಾಂಕ್‌ನ ‘ವಿದ್ಯಾಜ್ಯೋತಿ’ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ನಗರದ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಸಿ.ಪಿ. ಬಜಾರ್ ಶಾಖೆಯ ಸಭಾಭವನದಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರಿಗೆ ಈ ಪುರಸ್ಕಾರ ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ವೈ.ಎಸ್ ಪಿ ಗೀತಾ ಪಾಟೀಲ್ ಅವರು […]

Continue Reading

ಗ್ರಾಹಕರ ದೂರು, ಆರೋಗ್ಯ, ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ, ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

ಮಂಗಳೂರು: ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದ ಕೋಳಿ ಆಹಾರದಿಂದ ಕೆಟ್ಟ ವಾಸನೆ ಬರುತ್ತಿದೆ ಎಂಬ ದೂರಿನ ಬೆನ್ನಲ್ಲೇ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ಮಾಲ್‌ನಲ್ಲಿರುವ ಮಳಿಗೆಗೆ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ವೇಳೆ ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಹಾಗೂ ಅನೈರ್ಮಲ್ಯ ಪತ್ತೆ ಆಗಿದ್ದು, ಮಳಿಗೆ ಬಂದ್ ಮಾಡಲಾಗಿದೆ. ಗ್ರಾಹಕಯೊಬ್ಬರು ಮಳಿಗೆಯೊಂದರಿಂದ ಚಿಕನ್ ಫೆರಿ ಆರ್ಡರ್ ಮಾಡಿದ್ದರು. ಆಹಾರದ ಬಾಕ್ಸ್ ತೆರೆದಾಗ ಮಾಂಸದಿಂದ ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ […]

Continue Reading