ಹಿರಿಯರ ಮಾರ್ಗದರ್ಶನವಿಲ್ಲದೇ ಸೊರಗುತ್ತಿರುವ ಸಮಾಜ: ವಿಸಿ ಪ್ರೊ. ಧರ್ಮ ಕಳವಳ

ಮಂಗಳೂರು: ಹಿರಿಯರ ಮಾರ್ಗದರ್ಶನ ಇಲ್ಲದೇ ಸಮಾಜ ಸೊರಗುತ್ತಿದೆ. ವಿದ್ಯಾ ಸಂಸ್ಥೆಯನ್ನು ಕೇವಲ ಸಂಸ್ಥೆಯಂತೆ ಕಾಣದೇ ,ಅದೊಂದು ವಿಸ್ತೃತ ಕುಟುಂಬ ಎಂದು ಪರಿಗಣಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಿದ್ದ ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಇಂದಿನ ವಿದ್ಯಾ ಸಂಸ್ಥೆಗಳಲ್ಲಿ ಮೌಲ್ಯ, ಸಂಸ್ಕಾರ, ಪರಂಪರೆಯ ಶಿಕ್ಷಣದ ಕೊರತೆ ಎದ್ದು ಕಾಣುತ್ತಿದೆ. ಹಿರಿಯ ತಲೆಮಾರಿನ ಶಿಸ್ತು, ಬದುಕಿನ ಆದರ್ಶಗಳು ಮುಂದಿನ […]

Continue Reading

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠಕ್ಕೆ ಗ್ರಿನ್ ಸಿಗ್ನಲ್ : ಎಂಎಲ್ಸಿ ಐವನ್ ಡಿಸೋಜ

ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠ ಸ್ಥಾಪಿಸಬೇಕು ಎಂಬ ಎರಡು ವರ್ಷಗಳ ಬೇಡಿಕೆಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪೀಠಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಸಿದ್ಧ ಇರುವುದಾಗಿ ಮುಖ್ಯ ನ್ಯಾಯಾಧೀಶರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಈ ಮೂಲಕ ಪೀಠ ಸ್ಥಾಪನೆ ಶೇ 80 ರಷ್ಟು ಕಾರ್ಯ ಪೂರ್ಣಗೊಂಡಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ […]

Continue Reading

ದಾಸನಕೊಪ್ಪ ಕಾಳಂಗಿ ಸೊಸೈಟಿಯಲ್ಲಿ ಭಾರಿ ಭ್ರಷ್ಟಾಚಾರ, ತನಿಖೆಗೆ ಆಗ್ರಹಿಸಿ ರೈತರ ಪ್ರತಿಭಟನೆ, ರೈತರ ಹಣ ಪಂಗನಾಮ, ಭುಗಿಲೆದ್ದ ಆಕ್ರೋಶ

ಸಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿರಸಿ ತಾಲ್ಲೂಕಿನ ದಾಸನಕೊಪ್ಪದ ಕಾಳಂಗಿ ಸೊಸೈಟಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಭಾರಿ ಸಂಖ್ಯೆಯಲ್ಲಿ ರೈತರು ಸೊಸೈಟಿ ಎದರಿನಲ್ಲಿಯೇ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ರೈತರ ಹಣವನ್ನು ಲೂಟಿ ಮಾಡಿರುವ ಆಡಳಿತ ಮಂಡಳಿಯ ವಿರುದ್ಧ ಹಣ ಕಳೆದುಕೊಂಡ ನೂರಾರು ಸಂಖ್ಯೆಯ ಠೇವಣಿದಾರರು ಹಾಗೂ ರೈತರು ಬೃಹತ್ ಪ್ರತಿಭಟನೆ ನಡೆಸಿರುವುದು ಕಾಳಂಗಿ ವ್ಯವಸಾಯ ಸೇವಾ ಸಹಕಾರಿ ಸೊಸೈಟಿಯಲ್ಲಿ ಯಾವುದು ಸರಿಯಾಗಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಸೊಸೈಟಿಯ ಆಡಳಿತ ಮಂಡಳಿಯು ಠೇವಣಿದಾರರ ಕೋಟ್ಯಂತರ ರೂಪಾಯಿ […]

Continue Reading

ಆಳ್ವಾಸ್ ವಿದ್ಯಾರ್ಥಿಗಳ ಮಾದರಿ ಕಾರ್ಯ: ‘ಚಿಣ್ಣರ ತಂಗುದಾಣ’ಕ್ಕೆ ನೆರವಿನ ಹಸ್ತ

ಮೂಡುಬಿದಿರೆ: ಸಮಾಜಮುಖಿ ಚಿಂತನೆ ಹಾಗೂ ಸಾಂಸ್ಕೃತಿಕ ಸೌಹಾರ್ದತೆಯ ಸಾರ್ಥಕ ಉದಾಹರಣೆಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಂಗಳೂರಿನ ನಿರಾಶ್ರಿತ ಮಕ್ಕಳ ಆಶ್ರಯತಾಣ ‘ಚಿಣ್ಣರ ತಂಗುದಾಣ’ಕ್ಕೆ ಭೇಟಿ ನೀಡಿ 50,000ಕ್ಕೂ ಅಧಿಕ ಮೊತ್ತದ ದೈನಂದಿನ ಅಗತ್ಯ ವಸ್ತುಗಳು, ಆಹಾರ ಸಾಮಗ್ರಿಗಳು, ಕ್ರೀಡಾ ಉಪಕರಣಗಳು ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂಪ್ರದಾಯ ದಿನಾಚರಣೆಯನ್ನು ವೈವಿಧ್ಯತೆಯಲ್ಲಿ ಏಕತೆ ಎಂಬ ಸಂದೇಶದೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳು, ಸಾಂಪ್ರದಾಯಿಕ ಆಹಾರ ಮೇಳ ಹಾಗೂ […]

Continue Reading

ಮಂಗಳೂರಿನಲ್ಲಿ ಎರಡು ದಿನ ರಾಜ್ಯ ಮಟ್ಟದ ಗೇರು ಮೇಳ, ಸಾಧಕರಿಗೆ ಸನ್ಮಾನ, ರೈತರಿಗೆ ಉಚಿತ ಕಣ್ಣಿನ ತಪಾಸಣೆ: ಮಮತಾ ಗಟ್ಟಿ

ಮಂಗಳೂರು: ಇದೇ 17, 18,ರಂದು ಮಂಗಳೂರು ಕದ್ರಿ ಉದ್ಯಾನದಲ್ಲಿ ನಡೆಯಲಿರುವ ಎರಡು ದಿನಗಳ ಗೇರು ಮೇಳದ ಉದ್ಘಾಟನೆ ಮೇ17ರಂದು ಬೆಳಿಗ್ಗೆ 11ಗಂಟೆಗೆ ಸ್ಪೀಕರ್ ಯು. ಟಿ. ಖಾದರ್ ಫರೀದ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಚಿವ ಈಶ್ವರ್ ಬಿ. ಖಂಡ್ರೆ ಉದ್ಘಾಟಿಸಲಿದ್ದಾರೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆಯನ್ನು […]

Continue Reading

ಕಾರವಾರ: ಸಮುದ್ರ ಪಾಲಾಗುತ್ತಿದ್ದ ಮಂಗಳೂರು ಮೂಲದ ಇಬ್ಬರ ರಕ್ಷಣೆ: ಭಜರಂಗಿ ಮಿತ್ರರ ಕಾರ್ಯಕ್ಕೆ ಶ್ಲಾಘನೆ

ಕಾರವಾರ: ಕಡಲ ಅಲೆಗಳ ಅಬ್ಬರಕ್ಕೆ ಸಿಕ್ಕು ಹಾಕಿಕೊಂಡು ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗರನ್ನು ನಗರದ ಟ್ಯಾಗೋರ ಕಡಲ ತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಕೊಂಕಣಿ ಖಾರ್ವಿ ವಾಡಾದ ಭಜರಂಗಿ ಮಿತ್ರರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದವರು ಟ್ಯಾಗೋರ ಕಡಲತೀರದಲ್ಲಿ ಈಜಲು ತೆರಳಿದ್ದ ವೇಳೆ ಕಡಲ ಅಲೆಗಳ ಅಬ್ಬರಕ್ಕೆ ಸುಳಿಗೆ ಸಿಕ್ಕು ಹಾಕಿಕೊಂಡು ಪ್ರಾಣಾಪಾಯದಲ್ಲಿ ಇದ್ದರು. ಈ ವೇಳೆ ಅಲ್ಲಿಯೇ ಇದ್ದ ಕುಟುಂಬದ ಸದಸ್ಯರು ನೆರವಿಗೆ ಕೂಗುತ್ತಿದ್ದರು, ಈ ವೇಳೆ ಅಲ್ಲಿಯೇ ಕ್ರಿಕೆಟ್ ಆಟುತ್ತಿದ್ದ ಭಜರಂಗಿ […]

Continue Reading

ನಟ, ನಿರ್ಮಾಪಕ, ನಿರ್ದೇಶಕ ದಿಲೀಪ್ ರಾಜ್ ಗೆ ಹೃದಯಾಘಾತ, ನಿಧನ, ಕಂಬನಿ ಮಿಡಿದ ಸಿನಿ ದಿಗ್ಗಜರು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್​ ರಾಜ್​​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ದಿಲೀಪ್ ರಾಜ್ ಅವರ ಈ ಅಕಾಲಿಕ ನಿಧನದಿಂದಾಗಿ ಚಿತ್ರರಂಗದಲ್ಲಿ ನೀರವ ಮೌನ ಉಂಟಾಗಿದೆ. ಕರುನಾಡಿನಲ್ಲಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದ ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಬುಧಾವರ ಮುಂಜಾನೆ ಹೃದಯಾಘಾತ ಹಿನ್ನೆಲೆ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾಗಿದ್ದಾರೆ.   ಕುಟುಂಬಸ್ಥರು ಹಾಗೂ ಪತ್ನಿ ವಿದ್ಯಾ ಅವರು ದುಃಖವು ಮುಗಿಲು ಮುಟ್ಟಿದೆ. […]

Continue Reading

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಕೇಂದ್ರ ಸರಕಾರದ ವೈಫಲ್ಯ: ಮಾಜಿ ಎಂಎಲ್ಸಿ ಹರೀಶ್ ಕುಮಾರ್

ಮಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಆಗಿದೆ ಎಂದು ಮಾಜಿ ಎಂಎಲ್ ಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು. 22.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕನಸುಗಳನ್ನು ಹೊತ್ತು ಅಪಾರ ಪರಿಶ್ರಮದೊಂದಿಗೆ ಪರೀಕ್ಷೆ ಬರೆದಿದ್ದರು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದ್ದು, […]

Continue Reading

ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ, ಸಕಲ ಸರ್ಕಾರಿ ಗೌರವ, ಸಿಎಂ, ಡಿಸಿಎಂ, ಸ್ಪೀಕರ್ ಉಪಸ್ಥಿತಿ, ಕಣ್ಣೀರ ವಿದಾಯ

ಚಿತ್ರದುರ್ಗ: ಅನಾರೋಗ್ಯದಿಂದ ನಿಧನರಾಗಿದ್ದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಸೋಮವಾರ ಸರಕಾರಿ ಗೌರವಗಳೊಂದಿಗೆ ನಡೆಯಿತು. ಸೋಮವಾರ ಸಂಜೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಜೈನ ಮುಕ್ತಿಧಾಮದಲ್ಲಿ ಜೈನ ಸಂಪ್ರದಾಯದಂತೆ ವಿಧಿಳನ್ನು ಪೂರೈಸಲಾಯಿತು. ಸಚಿವ ಡಿ.ಸುಧಾಕರ್ ಪ್ರಾರ್ಥಿವ ಶರೀರಕ್ಕೆ ಅವರ ಪುತ್ರ ಸುಹಾಸ್ ಸುಧಾಕರ್ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೆ.ಜೆ. ಜಾರ್ಜ್, ಸಂತೋಷ್ ಲಾಡ್ […]

Continue Reading

ಜೈ ತುಳು ಸಿನಿಮಾದ ನೂರರ ಸಂಭ್ರಮ, ಬ್ರೋ ಹೊಸ ತುಳು ಸಿನಿಮಾ ಘೋಷಿಸಿದ ನಟ, ನಿರ್ದೇಶಕ ರೂಪೇಶ್ ಶೆಟ್ಟಿ

ಮಂಗಳೂರು: ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆ ಆಗಿದ್ದಾರೆ. ಜೈ ತುಳು ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ವಿಶ್ವದ ತುಳುವರು ಈ ಸಿನಿಮಾವನ್ನು ಗೆಲ್ಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ಎಂ. ರೈ ಅವರು ಹೇಳಿದರು. ಇಲ್ಲಿನ ಜೈ ತುಳು ಸಿನಿಮಾದ 100 ನೇ ದಿನದ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಟ ನಿರ್ದೇಶಕ ರೂಪೇಶ್ ಶೆಟ್ಟಿ ಮಾತನಾಡಿ, “ಜೈ” ಸಹಿತ ತನ್ನ ಎಲ್ಲ […]

Continue Reading