ಸಂವಿಧಾನದ 10 ನೇ ವಿಧಿ ಬಲಿಷ್ಠಗೊಳಿಸುವುದಕ್ಕೆ ಲೋಕಸಭೆ ವರದಿ ಮಂಡನೆ ಪಕ್ಷಾಂತರ ನಿಷೇಧ ಕಾಯ್ದೆ, ಜೂನ್ ನಲ್ಲಿ ಸಮಿತಿ ಸಭೆ- ಸ್ಪೀಕರ್ ಖಾದರ್

ಮಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆ ಕುರಿತಂತೆ ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ 3 ನೇ ಸಭೆ ರಾಜ್ಯದಲ್ಲಿ ಜೂನ್ ತಿಂಗಳ ಅಂತ್ಯದಲ್ಲಿ ನಡೆಯಲಿದ್ದು, ಬಳಿಕ ಸಮಿತಿ ತನ್ನ ವರದಿ ಲೋಕಸಭೆಗೆ ಮಂಡಿಸಲಿದೆ ಎಂದು ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಚುನಾಯಿತ ಪ್ರತಿನಿಧಿಗಳು ಮತ್ತೇ ಮತ್ತೇ ಪಕ್ಷಾಂತರ ಮಾಡುವುದ್ನು ತಡೆಯುವ ಉದ್ದೇಶದಿಂದ ಸಂವಿಧಾನದ 10 ನೇ ವಿಧಿ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸ್ಪೀಕರ್ […]

Continue Reading

ಮಾತಾ ಅಮೃತಾನಂದಮಯಿಮ ಮಠಕ್ಕೆ 28ಕ್ಕೆ ಅಮ್ಮ ಭೇಟಿ, ಚಪ್ಪರ ಮುಹೂರ್ತ ಅಮ್ಮ ನಡೆದಾಡುವ, ಮಾತನಾಡುವ ದೇವರು: ಮಾಜಿ ಸಂಸದ ಕಟೀಲ್

ಮಂಗಳೂರು: ಮಾತಾ ಅಮೃತಾನಂದಮಯಿ ಮಠಕ್ಕೆ ಮೇ 28 ರಂದು ಆಗಮಿಸುವ ಸದ್ಗುರು ಮಾತಾ ಅಮೃತಾನಂದಮಯಿ ದೇವಿ ಅವರ ಕಾರ್ಯಕ್ರಮ” ಬ್ರಹ್ಮಸ್ಥಾನಂ ಮಹೋತ್ಸವ ಮತ್ತು ಅಮೃತಸಂಗಮ ಅಂಗವಾಗಿ ಚಪ್ಪರ ಮುಹೂರ್ತ ನಡೆಯಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ನಡೆದ ಈ‌ ಕಾರ್ಯಕ್ರಮದಲ್ಲಿ ನಿಕಟಪೂರ್ವ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ವಿಧ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿ, ಮಾನವ ಮಹಾದೇವತ್ವಕ್ಕೆ ಏರುವ ಪುಣ್ಯಭೂಮಿ ಭಾರತ. ನಡೆದಾಡುವ , ಮಾತನಾಡುವ ದೇವರು ಮಾತಾ ಅಮೃತಾನಂದಮಯಿ ದೇವಿ, ಅವರು ಜಗತ್ತಿಗೆ […]

Continue Reading

ಇಂಧನ ಸಚಿವ ಕೆ.ಜೆ. ಜಾರ್ಜ್ ನಿರ್ದೇಶನ: ಕೆಪಿಟಿಸಿಎಲ್ ಎಂಡಿ ಡಾ. ರಾಮ್ ಪ್ರಸಾತ್ ಮನೋಹರ್-ಜುಲೈ 𝟭𝟱ರೊಳಗೆ ಕಡಂದಲೆ 400 ಕೆ.ವಿ ಉಪಕೇಂದ್ರ ಕಾಮಗಾರಿ ಪೂರ್ಣ ಗುರಿ

ಮಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ತಡೆರಹಿತ, ಉತ್ತಮ ಗುಣಮಟ್ಟದ ವಿದ್ಯುತ್ ಸೌಲಭ್ಯ ಒದಗಿಸುವ ‘ಕಡಂದಲೆ 400 ಕೆವಿ ವಿದ್ಯುತ್ ಉಪಕೇಂದ್ರ’ ಕಾಮಗಾರಿ ಜುಲೈ 15 ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಬುಧವಾರ ತಿಳಿಸಿದ್ದಾರೆ. ಭೂವ್ಯಾಜ್ಯದ ಕಾರಣದಿಂದಾಗಿ ಮೂರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲ್ಲೂಕಿನ ಕಡಂದಲೆ ಗ್ರಾಮದಲ್ಲಿ 400 […]

Continue Reading

ಬಿಜೆಪಿ ಗೆಲುವು ಶಾಸಕ ವೇವದ್ಯಾಸ್ ಕಾಮತ್ ಹರ್ಷ

ಮಂಗಳೂರು: ಅಸ್ಸಾಂ, ಪುದುಚೇರಿ ಜತೆಗೆ ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಚರಿತ್ರೆಯಲ್ಲಿ ದಾಖಲಾಗುವಂತಹ ಅದ್ಭುತ ಗೆಲುವು ಸಾಧಿಸಿದ್ದು ಟಿಎಂಸಿಯ ದುರಾಡಳಿತ ಕೊನೆಗೊಂಡಿದೆ ಎಂದು ಶಾಸಕ ವೇದವ್ಯಾಸ ಕಾಮತ್ ವರು ಹರ್ಷ ವ್ಯಕ್ತಪಡಿಸಿದ್ದಾರೆ. ಟಿಎಂಸಿ ಹಾಗೂ ಕಮ್ಯುನಿಸ್ಟ್ ಎಂಬ ಒಂದೇ ನಾಣ್ಯದ ಎರಡು ಮುಖಗಳು ಬಂಗಾಳದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಮಾರಣಹೋಮ, ಮಿತಿ ಮೀರಿದ ಓಲೈಕೆ, ದೇಶದ ಭದ್ರತೆಗೆ ಸವಾಲು ಇವೆಲ್ಲವೂ ಬಿಜೆಪಿ ಗೆಲುವಿನಿಂದ ಅಂತ್ಯಗೊಂಡಿದೆ. ಭಾರತೀಯ ಜನಸಂಘದ ಸಂಸ್ಥಾಪಕರಾಗಿದ್ದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ನಾಡಿನಲ್ಲಿ ಕಮಲ […]

Continue Reading

ಬಂಟ್ವಾಳ: ಎಂಡಿಎಂಎ ಸಾಗಣೆ ಪ್ರಕರಣ, ಇಬ್ಬರ ಬಂಧನ

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೋಳಂತೂರು ಗ್ರಾಮದ ಎನ್.ಸಿ.ರೋಡ್ ನಿವಾಸಿ ಮುಹಮ್ಮದ್ ನಿಝಾಮುದ್ದೀನ್ ಹಾಗೂ ಆತನ ಸಹೋದರ ಮಹಮ್ಮದ್ ಸಾಹೀಮ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ತಾಲೂಕಿನ ಮಂಚಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು 42.30 ಲಕ್ಷ ರೂ. ಮೌಲ್ಯದ 423 ಗ್ರಾಂ ಎಂಡಿಎಂಎ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಸಾಗಣಗೆ ಬಳಸಲಾದ ವಾಹನ, 3 […]

Continue Reading

ಎಸ್ಸೆಸ್ಸೆಲ್ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಡಾ. ಮೋಹನ್ ಆಳ್ವ ಸನ್ಮಾನ -ಆಳ್ವಾಸ್ ವಿದ್ಯಾರ್ಥಿಗಳು ಸಂಸ್ಥೆ ರಾಯಭಾರಿಗಳು

ಮೂಡುಬಿದಿರೆ: ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ರಾಜ್ಯದ ಅಗ್ರಗಣ್ಯ 10 ರ‍್ಯಾಂಕ್‌ ವೊಳಗೆ ಸ್ಥಾನ ಪಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ 103 ವಿದ್ಯಾರ್ಥಿಗಳ ಜತೆಯಲ್ಲಿ ಎಸ್‌ಎಸ್‌ಎಲ್‌ಸಿ ಹಂತದಲ್ಲಿ ಶೇ 50 ಕ್ಕಿಂತ ಕಡಿಮೆ ಅಂಕಗಳಿಸಿ, ನಂತರ ಪದವಿಪೂರ್ವ ಶಿಕ್ಷಣಕ್ಕೆ ಆಳ್ವಾಸ್ ಸೇರಿದ ನಂತರ ಶೇ 95ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸುವ ಕಾರ್ಯಕ್ರಮ ಮೂಡುಬಿದಿರೆ ನುಡಿಸಿರಿ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು ಮಾತನಾಡಿ, ನೀವು […]

Continue Reading

10ರಿಂದ ಶಾರದಾ ವಿದ್ಯಾಲಯದಲ್ಲಿ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ- ಎಳು ದಿನಗಳ ಕಾಲ ಭಾಗವತ ಸಾರ: ಡಾ.ಪುರಾಣಿಕ್

ಮಂಗಳೂರು: ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣರ ಎಸೋಸಿಯೇಶನ್ ಮತ್ತು ತುಳುನಾಡು ಎಜುಕೇಶನಲ್ ಟ್ರಸ್ಟ್ ವತಿಯಿಂದ ನಗರದ ಕೊಡಿಯಾಲ್‌ಬೈಲ್‌ನಲ್ಲಿ ಮೇ 10ರಿಂದ ಮೇ 16ರವರೆಗೆ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕೊಡಿಯಾಲ್‌ ಬೈಲ್‌ ಎಸ್‌.ಕೆ.ಡಿ.ಬಿ.ಆವರಣದಲ್ಲಿರುವ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ಈ ಪ್ರವಚನ ನಡೆಯಲಿದೆ. ಹುಬ್ಬಳ್ಳಿಯ ಪ್ರಸಿದ್ಧ ಪ್ರವಚನಕಾರರಾದ ಡಾ. ಶ್ರೀಹರಿ ಆಚಾರ್ಯ ವಾಲೈಕರ್ ಅವರು ಏಳು ದಿನಗಳ ಕಾಲ ಭಾಗವತದ […]

Continue Reading

Sports | ಮೇ 9,10 ರಂದು ಸುರತ್ಕಲ್‌ನಲ್ಲಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್’ ಸೀಸನ್-5- ಹಿರಿಯರ ಕ್ರಿಕೆಟ್ ಹಬ್ಬ: ಕಿರಣ್ ಆಚಾರ್ಯ

ಮಂಗಳೂರು: ಸುರತ್ಕಲ್ ಸ್ಪೋರ್ಟ್ಸ್ & ಕಲ್ಬರಲ್ ಕ್ಲಬ್ ಮತ್ತು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಬರಲ್ ಸೇವಾ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಕೂಟ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5’ ಮೇ 9 ಮತ್ತು 10 ರಂದು ಸುರತ್ಕಲ್‌ನ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿರುವ ಈ […]

Continue Reading

ಪಾಸ್ಟಿಕ್, ಪೇಪರ್ ನಲ್ಲಿ ಆಹಾರ ಪಾರ್ಸೆಲ್ ನಿಷೇಧ, ಧಮ್ಮು, ಗುಟ್ಕಾ ಸೇವನೆಗೆ ದಂಡ ಪ್ರಯೋಗಿಸಿ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಪಾಸ್ಟಿಕ್, ಪೇಪರ್ ನಲ್ಲಿ ಆಹಾರ ಪಾರ್ಸೆಲ್ ನಿಷೇಧ, ಧಮ್ಮು, ಗುಟ್ಕಾ ಸೇವನೆಗೆ ದಂಡ ಪ್ರಯೋಗಿಸಿ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

Continue Reading