ನ್ಯೂಯಾರ್ಕ್‌ನಲ್ಲಿ ಮಂಗಳೂರು ಮೂಲದ ಡಾ. ದಿನಕರ್ ರೈ ಅವರ ಗಾಲ್ಫ್ ಅಲೈನ್‌ಮೆಂಟ್ ಸಾಧನಗಳ ಪರಿಚಯ

ಮಂಗಳೂರು: ಗಾಲ್ಫ್ ಆಟದಲ್ಲಿ ನಿಖರತೆ ಮತ್ತು ಸ್ಥಿರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಮಂಗಳೂರು ಮೂಲದ ಖ್ಯಾತ ರಕ್ತನಾಳ ಶಸ್ತ್ರಚಿಕಿತ್ಸಕ, ವಿಜ್ಞಾನಿ, ಕ್ರೀಡಾಪಟು ಹಾಗೂ ಆವಿಷ್ಕಾರಕ ಡಾ. ದಿನಕರ್ ಬಿ. ರೈ ಅಭಿವೃದ್ಧಿಪಡಿಸಿರುವ ‘ರೈಸ್ ಸೂಪರ್ ಟಿ’ ಮತ್ತು ‘ರೈಸ್ ಡಿವೈಸ್’ ಎಂಬ ಎರಡು ನೂತನ ಗಾಲ್ಫ್ ಅಲೈನ್‌ಮೆಂಟ್ ಸಾಧನಗಳನ್ನು ನ್ಯೂಯಾರ್ಕ್‌ನ ವಿಲೇಜ್ ಕ್ಲಬ್ ಆಫ್ ಲೇಕ್ ಸಕ್ಸೆಸ್‌ನಲ್ಲಿ ಜುಲೈ 25ರಂದು ಪರಿಚಯಿಸಲಾಯಿತು. ಕಾರ್ಯಕ್ರಮದಲ್ಲಿ ಗಾಲ್ಫ್ ಆಟಗಾರರು, ಕ್ಲಬ್ ಸದಸ್ಯರು, ವೃತ್ತಿಪರರು ಹಾಗೂ ಕ್ರೀಡಾಭಿಮಾನಿಗಳು ಪಾಲ್ಗೊಂಡಿದ್ದರು. ಗಾಲ್ಫ್‌ನಲ್ಲಿ ಅತ್ಯಂತ ಪ್ರಮುಖವಾಗಿರುವ […]

Continue Reading

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟನೆ; ಚಾಮುಂಡೇಶ್ವರಿಗೆ ಪ್ರಣಾಮ ಸಲ್ಲಿಸಿದ ಪ್ರಧಾನಿ ಮೋದಿ

ಮೈಸೂರು: ಭಾರತದ ಯುವಶಕ್ತಿಯೇ ದೇಶದ ಅತಿದೊಡ್ಡ ಸಾಮರ್ಥ್ಯವಾಗಿದ್ದು, ಯುವಕರ ಶಕ್ತಿ ಮತ್ತು ಪ್ರತಿಭೆಯ ಬಲದಿಂದಲೇ ಭಾರತ ಇಂದು ವಿಶ್ವದ ಅತ್ಯಂತ ಚುರುಕಾದ ರಾಷ್ಟ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮೈಸೂರಿನ ರಾಮಕೃಷ್ಣ ಆಶ್ರಮದ ವತಿಯಿಂದ ನಿರ್ಮಿಸಲಾದ ವಿವೇಕ ಸ್ಮಾರಕವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, “ಸ್ವಾಮಿ ವಿವೇಕಾನಂದರು ಕಂಡಿದ್ದ ಶಕ್ತಿಶಾಲಿ ಭಾರತದ ಕನಸನ್ನು ಸಾಕಾರಗೊಳಿಸುವ ಹೊಣೆ ಇಂದಿನ ಯುವಜನರ ಮೇಲಿದೆ” ಎಂದು ಹೇಳಿದರು. ಭಾಷಣದ ಆರಂಭದಲ್ಲೇ ಕನ್ನಡದಲ್ಲಿ “ಎಲ್ಲರಿಗೂ ನನ್ನ ನಮಸ್ಕಾರಗಳು” ಎಂದು […]

Continue Reading

ಮಂಗಳೂರಿನ ಉರ್ವ ಕ್ರೀಡಾಂಗಣದಲ್ಲಿ 39ನೇ ರಾಷ್ಟ್ರೀಯ ಚೆಸ್ ಚಾಂಪಿಯನ್‌ ಷಿಪ್ ಅ. 2ರಿಂದ ಪ್ರಾರಂಭ: ಡಾ. ಅಮರಶ್ರೀ ಶೆಟ್ಟಿ

ಮಂಗಳೂರು: ದೇಶದ ಭವಿಷ್ಯದ ಚೆಸ್ ತಾರೆಗಳನ್ನು ಪರಿಚಯಿಸುವ ಪ್ರತಿಷ್ಠಿತ 39ನೇ ರಾಷ್ಟ್ರೀಯ ಅಂಡರ್-11 ಓಪನ್ ಮತ್ತು ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ ಷಿಪ್-2026 ಅ.2 ರಿಂದ ಮಂಗಳೂರಿನಲ್ಲಿ ಆರಂಭವಾಗಲಿದೆ. ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ಡಿಕೆಸಿಎ), ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್) ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ (ಕೆಎಸ್‌ಸಿಎ) ಆಶ್ರಯದಲ್ಲಿ, ನವಮಂಗಳೂರು ಬಂದರು ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ನಡೆವ ಈ ರಾಷ್ಟ್ರೀಯ ಮಟ್ಟದ ಚಾಂಪಿಯನ್‌ ಷಿಪ್ ಅಗಸ್ಟ್‌ 8 ರವರೆಗೆ ನಗರದ ಉರ್ವ ಒಳಾಂಗಣ […]

Continue Reading

ಅಮೆರಿಕದಲ್ಲಿ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಆರೋಗ್ಯ ಸಚಿವ ಖಾದರ್

ಮಂಗಳೂರು: ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್ವಿಲ್ಲೆಯ ಯೆಲ್ಲೋ ಬಾಕ್ಸ್ ಸಭಾಂಗಣದಲ್ಲಿ ನಡೆದ ಅಮೆರಿಕನ್ ಬಹುಜನಾಂಗೀಯ ಆಯೋಗದ 15ನೇ ವಾರ್ಷಿಕ ಜಾಗತಿಕ ಸಾಧಕರ ಸನ್ಮಾನ ಸಮಾರಂಭದಲ್ಲಿ ಪ್ರತಿಷ್ಠಿತ ಜಾಗತಿಕ ನಾಗರಿಕ ನಾಯಕತ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿ, ಈ ಗೌರವ ತಮ್ಮ ಸಾರ್ವಜನಿಕ ಸೇವೆಗೆ ದೊರೆತ ಮಹತ್ವದ ಮಾನ್ಯತೆ ಆಗಿದ್ದು, ಜನಸೇವೆಯ ಹಾದಿಯಲ್ಲಿ ಇನ್ನಷ್ಟು ಜವಾಬ್ದಾರಿಯಿಂದ ಕೆಲಸ ಮಾಡಲು ಇದು ಪ್ರೇರಣೆ ನೀಡುತ್ತದೆ. ಈ ಪ್ರಶಸ್ತಿಯನ್ನು ಕರ್ನಾಟಕದ […]

Continue Reading

ಜಿಎಂಯು ದಂತ ವೈದ್ಯಕೀಯ ಕಾಲೇಜಿಗೆ ವಿಶ್ವಮಟ್ಟದ ಮಾನ್ಯತೆ, 120 ದಂತ ಚಿಕಿತ್ಸಾ ಘಟಕಗಳ ಮೂಲಕ ಪ್ರಾಯೋಗಿಕ ತರಬೇತಿಗೆ ಆದ್ಯತೆ

ಮಂಗಳೂರು: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (ಜಿಎಂಯು)ಯ ದಂತ ವೈದ್ಯಕೀಯ ಕಾಲೇಜು ವಿಶ್ವಮಟ್ಟದ ಕ್ಲಿನಿಕಲ್ ಶಿಕ್ಷಣ ವ್ಯವಸ್ಥೆ ಹಾಗೂ ಅತ್ಯಾಧುನಿಕ ಮೂಲಸೌಕರ್ಯದಿಂದ ಗಮನ ಸೆಳೆದಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿರುವ ಥಂಬೇ ಡೆಂಟಲ್ ಆಸ್ಪತ್ರೆಯಲ್ಲಿ 120 ದಂತ ಚಿಕಿತ್ಸಾ ಕುರ್ಚಿಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ನೈಜ ರೋಗಿಗಳ ಚಿಕಿತ್ಸೆಯ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ. ದಂತ ಶಿಕ್ಷಣದಲ್ಲಿ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿರುವ ಕಾಲೇಜು, ಆರಂಭಿಕ ಹಂತದಿಂದಲೇ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸಾ ಕೌಶಲ್ಯ ಬೆಳೆಸುವ ಅವಕಾಶ ಒದಗಿಸಿದೆ. […]

Continue Reading

ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರತಿಭಟನೆ ವೇಳೆ ಪೊಲೀಸರು ತಮ್ಮನ್ನು ವಶಕ್ಕೆ ಪಡೆಯುವಾಗ ಕೆಲ ಸಿಬ್ಬಂದಿಯೇ “ಈ ಸರ್ಕಾರವನ್ನು ಕಿತ್ತೊಗೆಯಿರಿ” ಎಂದು ಕಿವಿಯಲ್ಲಿ ಪಿಸುಗುಟ್ಟಿದ್ದರು ಎಂದು ಅವರು ನವದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲಪ್ರಯೋಗವನ್ನು ಖಂಡಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ […]

Continue Reading

ಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಪೊಲೀಸರ ಜಲಫಿರಂಗಿ, ಲಾಠಿ ಪ್ರಹಾರ

ಪಾಟ್ನಾ: ದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲವಾಗಿ ಪಾಟ್ನಾದಲ್ಲಿ ಎಐಎಸ್‌ಎ ನೇತೃತ್ವದಲ್ಲಿ ರಾಜಭವನ ಚಲೋ ಜಾಥಾ ನಡೆಯಿತು. ಜೆಪಿ ಗೋಲಂಬರ್‌ನಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಹಾಗೂ ಲಾಠಿ ಪ್ರಹಾರ ನಡೆಸಿದ ಪರಿಣಾಮ ಘರ್ಷಣೆ ಉಂಟಾಯಿತು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರ ಮತ್ತು ಶಿಕ್ಷಣದ ವಾಣಿಜ್ಯೀಕರಣವನ್ನು ಖಂಡಿಸಿದ ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದರು. ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ವಿರೋಧಿಸಿ ಈ […]

Continue Reading

ಐಎನ್‌ಎಸ್ ಮಾಲ್ವನ್ ಭಾರತೀಯ ನೌಕಾಪಡೆಗೆ ಸೇರ್ಪಡೆ: ಕಾರವಾರ ನೌಕಾನೆಲೆಯಲ್ಲಿ ಅಧಿಕೃತ ನಿಯೋಜನೆ

ಕಾರವಾರ: ಭಾರತೀಯ ನೌಕಾಪಡೆಯ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಆಂಟಿ-ಸಬ್‌ಮರೀನ್ ವಾರ್‌ಫೇರ್ ಶ್ಯಾಲೋ ವಾಟರ್ ಕ್ರಾಫ್ಟ್ ಶ್ರೇಣಿಯ ಐಎನ್‌ಎಸ್ ಮಾಲ್ವನ್ ಯುದ್ಧನೌಕೆಯನ್ನು ಕಾರವಾರದ ಕದಂಬ ನೌಕಾನೆಲೆಯಲ್ಲಿ ಬುಧವಾರ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಇದು ಕಾರವಾರದ ಪ್ರಾಜೆಕ್ಟ್ ಸೀಬರ್ಡ್ ನೌಕಾನೆಲೆಯಲ್ಲಿ ಅಧಿಕೃತವಾಗಿ ನಿಯೋಜನೆಗೊಂಡ ಮೊದಲ ಯುದ್ಧನೌಕೆಯಾಗಿದೆ. ನಿಯೋಜನಾ ಸಮಾರಂಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಮಾತನಾಡಿ, ಭವಿಷ್ಯದ ಭದ್ರತಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ನೌಕಾಪಡೆ, ವಾಯುಪಡೆ ಹಾಗೂ ಭೂಸೇನೆ ನಡುವೆ […]

Continue Reading

ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಏಷ್ಯನ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ 5,000 ಹಾಗೂ 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ದೇಶ, ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿ ಹೆಚ್ಚಿಸಿರುವ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಿವಾಜಿ ಅವರನ್ನು ಸನ್ಮಾನಿಸಿ […]

Continue Reading

ನ್ಯೂಜೆರ್ಸಿ: ಎಕ್ಸ್‌ಟ್ರಾ ಟೈಮ್‌ನಲ್ಲಿ ಸ್ಪೇನ್‌ಗೆ ವಿಶ್ವಕಪ್ ಕಿರೀಟ; ಅರ್ಜೆಂಟೀನಾ ವಿರುದ್ಧ 1–0 ಗೋಲುಗಳ ರೋಚಕ ಜಯ

ನ್ಯೂಜೆರ್ಸಿ: ಕೊನೆಯ ಕ್ಷಣದವರೆಗೂ ಗೋಲುರಹಿತವಾಗಿದ್ದ ಫಿಫಾ ವಿಶ್ವಕಪ್–2026ರ ಫೈನಲ್ ಪಂದ್ಯದಲ್ಲಿ ಎಕ್ಸ್‌ಟ್ರಾ ಟೈಮ್‌ನಲ್ಲಿ ಫೆರಾನ್ ಟೊರೆಸ್ ಗಳಿಸಿದ ಏಕೈಕ ಗೋಲಿನ ನೆರವಿನಿಂದ ಸ್ಪೇನ್, ಅರ್ಜೆಂಟೀನಾವನ್ನು 1–0 ಅಂತರದಿಂದ ಮಣಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ರೋಚಕ ಪೈಪೋಟಿಯಲ್ಲಿ ಅರ್ಜೆಂಟೀನಾ ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಜ್ ಅವರ ಅದ್ಭುತ ಪ್ರದರ್ಶನವೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವೇ ಆಗಲಿಲ್ಲ. ನಿಗದಿತ 90 ನಿಮಿಷಗಳ ಆಟದಲ್ಲಿ ಎರಡೂ ತಂಡಗಳು ಗೋಲು ಗಳಿಸಲು ವಿಫಲವಾದ ಕಾರಣ ಪಂದ್ಯ ಎಕ್ಸ್‌ಟ್ರಾ ಟೈಮ್‌ಗೆ ಸಾಗಿತು. 106 […]

Continue Reading