ಐಎನ್‌ಎಸ್ ಮಾಲ್ವನ್ ಭಾರತೀಯ ನೌಕಾಪಡೆಗೆ ಸೇರ್ಪಡೆ: ಕಾರವಾರ ನೌಕಾನೆಲೆಯಲ್ಲಿ ಅಧಿಕೃತ ನಿಯೋಜನೆ

ಕಾರವಾರ: ಭಾರತೀಯ ನೌಕಾಪಡೆಯ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಆಂಟಿ-ಸಬ್‌ಮರೀನ್ ವಾರ್‌ಫೇರ್ ಶ್ಯಾಲೋ ವಾಟರ್ ಕ್ರಾಫ್ಟ್ ಶ್ರೇಣಿಯ ಐಎನ್‌ಎಸ್ ಮಾಲ್ವನ್ ಯುದ್ಧನೌಕೆಯನ್ನು ಕಾರವಾರದ ಕದಂಬ ನೌಕಾನೆಲೆಯಲ್ಲಿ ಬುಧವಾರ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಇದು ಕಾರವಾರದ ಪ್ರಾಜೆಕ್ಟ್ ಸೀಬರ್ಡ್ ನೌಕಾನೆಲೆಯಲ್ಲಿ ಅಧಿಕೃತವಾಗಿ ನಿಯೋಜನೆಗೊಂಡ ಮೊದಲ ಯುದ್ಧನೌಕೆಯಾಗಿದೆ. ನಿಯೋಜನಾ ಸಮಾರಂಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಮಾತನಾಡಿ, ಭವಿಷ್ಯದ ಭದ್ರತಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ನೌಕಾಪಡೆ, ವಾಯುಪಡೆ ಹಾಗೂ ಭೂಸೇನೆ ನಡುವೆ […]

Continue Reading

ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಏಷ್ಯನ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ 5,000 ಹಾಗೂ 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ದೇಶ, ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿ ಹೆಚ್ಚಿಸಿರುವ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಿವಾಜಿ ಅವರನ್ನು ಸನ್ಮಾನಿಸಿ […]

Continue Reading

ನ್ಯೂಜೆರ್ಸಿ: ಎಕ್ಸ್‌ಟ್ರಾ ಟೈಮ್‌ನಲ್ಲಿ ಸ್ಪೇನ್‌ಗೆ ವಿಶ್ವಕಪ್ ಕಿರೀಟ; ಅರ್ಜೆಂಟೀನಾ ವಿರುದ್ಧ 1–0 ಗೋಲುಗಳ ರೋಚಕ ಜಯ

ನ್ಯೂಜೆರ್ಸಿ: ಕೊನೆಯ ಕ್ಷಣದವರೆಗೂ ಗೋಲುರಹಿತವಾಗಿದ್ದ ಫಿಫಾ ವಿಶ್ವಕಪ್–2026ರ ಫೈನಲ್ ಪಂದ್ಯದಲ್ಲಿ ಎಕ್ಸ್‌ಟ್ರಾ ಟೈಮ್‌ನಲ್ಲಿ ಫೆರಾನ್ ಟೊರೆಸ್ ಗಳಿಸಿದ ಏಕೈಕ ಗೋಲಿನ ನೆರವಿನಿಂದ ಸ್ಪೇನ್, ಅರ್ಜೆಂಟೀನಾವನ್ನು 1–0 ಅಂತರದಿಂದ ಮಣಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ರೋಚಕ ಪೈಪೋಟಿಯಲ್ಲಿ ಅರ್ಜೆಂಟೀನಾ ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಜ್ ಅವರ ಅದ್ಭುತ ಪ್ರದರ್ಶನವೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವೇ ಆಗಲಿಲ್ಲ. ನಿಗದಿತ 90 ನಿಮಿಷಗಳ ಆಟದಲ್ಲಿ ಎರಡೂ ತಂಡಗಳು ಗೋಲು ಗಳಿಸಲು ವಿಫಲವಾದ ಕಾರಣ ಪಂದ್ಯ ಎಕ್ಸ್‌ಟ್ರಾ ಟೈಮ್‌ಗೆ ಸಾಗಿತು. 106 […]

Continue Reading

ಭಾರತೀಯ ಅಂಚೆ ನೌಕರರ ಸಂಘ ಹೋರಾಟಕ್ಕೆ ಕರೆ, ಅ. 5ರಂದು ರಾಷ್ಟ್ರವ್ಯಾಪಿ ಮುಷ್ಕರ: ದಯಾನಂದ ಕತ್ತಲ್ ಸಾರ್

ಮಂಗಳೂರು: ಗುರಿ ಸಾಧನೆ (ಟಾರ್ಗೆಟ್) ಹೆಸರಿನಲ್ಲಿ ಅಂಚೆ ಸಿಬ್ಬಂದಿಗೆ ಮಾನಸಿಕ ಒತ್ತಡ ಹೇರಿ, ಸ್ವಂತ ಹಣದಲ್ಲಿ ವಿವಿಧ ಖಾತೆಗಳನ್ನು ತೆರೆಯುವಂತೆ ಒತ್ತಾಯಿಸಲಾಗುತ್ತಿದೆ. ಜೊತೆಗೆ ಅಂಚೆ ಇಲಾಖೆಯನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿರುವ ಭಾರತೀಯ ಅಂಚೆ ನೌಕರರ ಸಂಘ, ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಷ್ಟ್ರವ್ಯಾಪಿ ಹೋರಾಟ ಹಾಗೂ ಮುಷ್ಕರ ನಡೆಸುವುದಾಗಿ ಸಂಘದ ಪದಾಧಿಕಾರಿ ದಯಾನಂದ ಕತ್ತಲ್ ಸಾರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 170 ವರ್ಷಗಳ ಇತಿಹಾಸ ಹೊಂದಿರುವ ಭಾರತೀಯ ಅಂಚೆ ಇಲಾಖೆ ಸಮಾಜದ ಕಟ್ಟಕಡೆಯ […]

Continue Reading

ಓಣಂ ರಜೆ, ಐಆರ್‌ಸಿಟಿಸಿಯಿಂದ ಭಾರತ ಗೌರವ ವಿಶೇಷ ಟೂರ್ ಪ್ಯಾಕೇಜ್, ರೈಲು, ವಿಮಾನ ಸೇವೆ: ಸ್ಯಾಮ್ ಜೋಸೆಫ್

ಮಂಗಳೂರು: ಓಣಂ ರಜೆ ಪ್ರಯುಕ್ತ ಐಆರ್‌ಸಿಟಿಸಿ ‘ಭಾರತ ಗೌರವ’ ವಿಶೇಷ ಪ್ರವಾಸಿ ರೈಲ ಅನ್ನು ಆಯೋಜಿಸಿದ್ದು, ಅಹಮದಾಬಾದ್ ಸೇರಿದಂತೆ ಗೋಲ್ಡನ್ ಟ್ರಯಾಂಗಲ್ ಪ್ರವಾಸಕ್ಕೆ ಅವಕಾಶ ಕಲ್ಪಿಸಿದೆ. ವಿಶೇಷ ರೈಲು ಅ 22 ರಂದು ಮಂಗಳೂರಿನ ಮೂಲಕ ಪ್ರಯಾಣ ಆರಂಭಿಸಿ, ಸೆಪ್ಟೆಂಬರ್ 1 ರಂದು ವಾಪಸ್ ಆಗಲಿದೆ ಎಂದು ಐಆರ್ ಸಿಟಿಸಿ ಜಂಟಿ ಜನರಲ್ ಮ್ಯಾನೇಜರ್ ಸ್ಯಾಮ್ ಜೋಸೆಫ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಹಮದಾಬಾದ್‌ನ ಸಾಬರ್ಮತಿ ಆಶ್ರಮ, ರಾಣಿ ಕಿ ವಾವ್, ಅಡಲಜ್ ಮೆಟ್ಟಿಲು ಬಾವಿ, ಏಕತಾ […]

Continue Reading

ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಜತೆ ತುಂಬೆ ಗ್ರೂಪ್ ಮಹತ್ವದ ಒಪ್ಪಂದ, ಯುಎಇಯಲ್ಲಿ ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ ಶಿಕ್ಷಣ

ಮಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ (ಲಾಂಗ್‌ಜೆವಿಟಿ ಮೆಡಿಸಿನ್) ಕ್ಷೇತ್ರದಲ್ಲಿ ವ್ಯವಸ್ಥಿತ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆರಂಭಿಸಲು ತುಂಬೇ ಗ್ರೂಪ್ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಆಫ್ ಲಾಂಗ್‌ಜೆವಿಟಿ ಸಾಯಿನ್ಸ್ (ಜಿಸಿಎಲ್‌ಎಸ್) ಮಹತ್ವದ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿವೆ. ಈ ಒಪ್ಪಂದದಡಿ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದ ಅಡಿಯಲ್ಲಿ ‘ತುಂಬೆ ಇನ್‌ಸ್ಟಿಟ್ಯೂಟ್ ಆಫ್ ಲಾಂಗ್‌ಜೆವಿಟಿ ಮೆಡಿಸಿನ್’ಸ್ಥಾಪನೆ ಆಗಲಿದ್ದು, ದೀರ್ಘಾಯುಷ್ಯ ವೈದ್ಯಕೀಯ, ಆರೋಗ್ಯಕರ ವಯೋವೃದ್ಧತೆ, ತಡೆಗಟ್ಟುವ ಆರೋಗ್ಯ ಸೇವೆ ಹಾಗೂ ನಿಖರ ಆರೋಗ್ಯ ಕ್ಷೇತ್ರಗಳಲ್ಲಿ […]

Continue Reading

ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಸಂಗೀತಶಾರದೆಯ ವರಪುತ್ರಿ, ,ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಕನ್ನಡ ಭಾಷೆಯೂ ಸೇರಿದಂತೆ 20 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದು, 6 ದಶಕಗಳ ಕಾಲ‌ ತಮ್ಮ ಕಂಠಸಿರಿಯ ಮೂಲಕ ಸಂಗೀತ ಸೇವೆಗೈದ ಮೇರು ಪ್ರತಿಭೆಯೊಂದು ನಮ್ಮನ್ನಗಲಿರುವುದು ಕಲಾ ಜಗತ್ತಿಗಾಗಿರುವ ತುಂಬಲಾರದ ನಷ್ಟ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಜಾನಕಿಯಮ್ಮನವರ ಧ್ವನಿಯಿಲ್ಲದ ಚಿತ್ರಗಳೇ ಅಪರೂಪ ಎನ್ನುವ ಕಾಲವೊಂದಿತ್ತು, ಈ ಮಟ್ಟಿನ ಬೇಡಿಕೆಯನ್ನು ತಮ್ಮ ಅನನ್ಯ ಕಂಠದ […]

Continue Reading

ಹಾಡು ನಿಲ್ಲಿಸಿದ ಕೋಗಿಲೆ ಕಂಠದ ಗಾಯಕಿ ಎಸ್ . ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್‌.ಜಾನಕಿ (88) ಅವರು ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಕುವೆಂಪುನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಹುಭಾಷಾ ಗಾಯಕಿ ಎಸ್. ಜಾನಕಿ ಅವರು ಮೈಸೂರಿನ ಬನ್ನೂರು ರಸ್ತೆಯ ಫಾರ್ಮ್ ಹೌಸ್​ನಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಈಚೆಗೆ ಬೋಗಾದಿ ನಗರದಲ್ಲಿ ವಾಸವಾಗಿದ್ದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶನಿವಾರ ಮಧ್ಯಾಹ್ನ ಮೈಸೂರಿನ ಅಪೋಲೊ ಆಸ್ಪತ್ರೆಗೆ […]

Continue Reading

ನಕಲಿ ಆಧಾರ ಕಾರ್ಡ್ ಬಳಸಿ ಅಕ್ರಮವಾಗಿ ಭಾರತಕ್ಕೆ ಪ್ರವೇಶ,  ಮಂಗಳೂರಿನ ಮುಕ್ಕದಲ್ಲಿ 8 ಮಂದಿ ಬಾಂಗ್ಲಾದೇಶದ ಪ್ರಜೆಗಳ ಪತ್ತೆ: ಸುಧೀರ್ ಕುಮಾರ್

ಮಂಗಳೂರು: ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಮಂಗಳೂರಿನ ಮುಕ್ಕಾ ಪ್ರದೇಶದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಬಂಧಿತರು ಸುಮಾರು ಮೂರು ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದು, ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಮೂಲಕ ದೇಶ ಪ್ರವೇಶ ಮಾಡಿದ್ದಾರೆ. ಬಳಿಕ ಮುರ್ಶಿದಾಬಾದ್ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳ […]

Continue Reading

ನೀಟ್ ಅಕ್ರಮ, ಸಿಡಿದ ಎನ್‌ಎಸ್‌ಯುಐ, ಪ್ರಧಾನಿ ವಿರುದ್ಧ ಸಹಿ ಸಂಗ್ರಹ ಅಭಿಯಾನ: ಸುಹಾನ್ ಆಳ್ವ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕ ಜಿಲ್ಲೆಯಾದ್ಯಂತ ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ. ಸಂಗ್ರಹವಾಗುವ ಪೋಸ್ಟ್‌ಕಾರ್ಡ್‌ಗಳನ್ನು ಪ್ರಧಾನ ಮಂತ್ರಿಗೆ ಕಳುಹಿಸಲಾಗುವುದು ಎಂದು ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಕಾಲೇಜುಗಳಲ್ಲಿ ಸಹಿ ಸಂಗ್ರಹ ನಡೆಯಲಿದ್ದು, ನೀಟ್ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ […]

Continue Reading