ತೂಗು ಸೇತುವೆಗಳ ಸರದಾರ, ಬ್ರಿಡ್ಜ್ ಮ್ಯಾನ್ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ, ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಸುಳ್ಯ: ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಗೆ ತಮ್ಮ ಬದುಕನ್ನೇ ಸಮರ್ಪಿಸಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ದೇಶದಾದ್ಯಂತ ‘ಬ್ರಿಡ್ಜ್ ಮ್ಯಾನ್’ ಹಾಗೂ ‘ತೂಗು ಸೇತುವೆಗಳ ಸರದಾರ’ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಸೋಮವಾರ ಬೆಳಿಗ್ಗೆ ಅನಾರೋಗ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಗ್ರಾಮೀಣ ಜನರ ಬದುಕಿಗೆ ಸೇತುವೆಯಾಗಿ ನಿಂತಿದ್ದ ಅಪರೂಪದ ತಾಂತ್ರಿಕ ಸಾಧಕನ ಅಗಲಿಕೆಗೆ ರಾಜ್ಯದಾದ್ಯಂತ ತೀವ್ರ ಶೋಕ ತಂದಿದೆ. ಇಬ್ಬರು ಪುತ್ರರು ಮತ್ತು […]

Continue Reading

ವಯನಾಡ್‌ನಲ್ಲಿ ಮತ್ತೆ ಭೂಕುಸಿತ ದುರಂತ: ಮೂವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ವಯನಾಡ್: ಕಳೆದ ವರ್ಷ ಸಂಭವಿಸಿದ್ದ ಭೀಕರ ಭೂಕುಸಿತದ ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿರುವ ಕೇರಳದ ವಯನಾಡ್ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದ್ದು, ಮೂವರು ಮೃತಪಟ್ಟಿರುವ ದುರ್ಘಟನೆ ಮಂಗಳವಾರ ವರದಿಯಾಗಿದೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ವಯನಾಡಿನ ಮೆಪ್ಪಾಡಿ ಸಮೀಪದ ಕಲ್ಲಾಡಿಯ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಈ ಪ್ರದೇಶದಲ್ಲಿ ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ನಿರಂತರ ಸುರಿದ ಭಾರೀ ಮಳೆಯ ಪರಿಣಾಮವಾಗಿ ಭೂಕುಸಿತ […]

Continue Reading

ಮಂಗಳೂರಿನಲ್ಲಿ ಕಿಂಗ್ ಖಾನ್‌ ಹವಾ: ರೋಹನ್‌ ಕಾರ್ಪೊರೇಶನ್‌ ಅನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್‌ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ

ಮಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರ ಉಪಸ್ಥಿತಿಯಿಂದ ರೋಹನ್‌ ಕಾರ್ಪೊರೇಶನ್‌ ಆಯೋಜಿಸಿದ್ದ ‘ಅನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್‌’ ಕಾರ್ಯಕ್ರಮ ಗುರುವಾರ ನಗರದ ಅಡ್ಯಾರ್‌ ಗಾರ್ಡನ್‌ನಲ್ಲಿ ಗಮನ ಸೆಳೆಯಿತು. ಉದ್ಯಮ ವಲಯದ ಗಣ್ಯರು, ವಿವಿಧ ಕ್ಷೇತ್ರಗಳ ಪ್ರಮುಖರು, ಸಮಾಜದ ಪ್ರತಿನಿಧಿಗಳು ಮತ್ತು ಸಂಸ್ಥೆಯ ಹಿತೈಷಿಗಳು ಕಾರ್ಯಕ್ರಮದಲ್ಲಿ ಇದ್ದರು. ಸಂಜೆ ಆರಂಭವಾದ ಕಾರ್ಯಕ್ರಮ ರಾತ್ರಿ ತನಕ ಉತ್ಸಾಹಭರಿತ ವಾತಾವರಣದಲ್ಲಿ ನಡೆಯಿತು. ಕರಾವಳಿಯ ಕಲಾತಂಡಗಳ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ಇಂಡಿಯನ್‌ ಐಡಲ್‌ ಖ್ಯಾತಿಯ ಗಾಯಕ […]

Continue Reading

ಮೂಡುಬಿದಿರೆ ಆಳ್ವಾಸ್‌ನ 8 ಮಂದಿ ಸಿಎ ಅಂತಿಮ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ, ದೀಪಕ್‌ಗೆ 28 ನೇ ರ‍್ಯಾಂಕ್

ಮೂಡುಬಿದಿರೆ : ಮೇ 2026 ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್‌ಗಳಿಸುವ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇವರ ಜತೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 8 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಮೋಘ ಸಾಧನೆ ಮೆರೆದಿದ್ದಾರೆ. ಸಿಎ ಅಂತಿಮ ಪರೀಕ್ಷೆಯಲ್ಲಿ ದೀಪಕ್ ಹೆಗ್ಡೆ, ನಿತೇಶ್ ಕಾಮತ್, ವೀಕ್ಷಾ ಶೆಟ್ಟಿ, ನಾಗರಾಜ ಮಂಜಿತ್ತಾಯ, ಪ್ರಣವ್ ಎಸ್ ಭಟ್, ವೈಷ್ಣವಿ ಜವಾರ್ ಅಕ್ಷಯ ಬಿಎಸ್, ಸುದೀಪ್ […]

Continue Reading

ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ಭಾರತೀಯ ಹಡಗು ವಿರಾಟ್-1: 14 ನಾವಿಕರು ಸುರಕ್ಷಿತ ರಕ್ಷಣೆ

ಮಸ್ಕತ್: ತಾಂತ್ರಿಕ ವೈಫಲ್ಯದಿಂದ ಒಮಾನ್ ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸ್ಥಿತಿಗೆ ತಲುಪಿದ್ದ ಭಾರತೀಯ ವ್ಯಾಪಾರಿ ಹಡಗು ವಿರಾಟ್-1ನಲ್ಲಿದ್ದ 14 ನಾವಿಕರನ್ನು ಅಮೆರಿಕ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದು ಉತ್ತಮ ಆರೋಗ್ಯದಲ್ಲಿದ್ದಾರೆ ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ನಂತರ ಅವರನ್ನು ಮುಂಬೈಗೆ ತೆರಳುತ್ತಿದ್ದ ಮತ್ತೊಂದು ಹಡಗಿಗೆ ಸ್ಥಳಾಂತರಿಸಲಾಗಿದೆ. ಮಧ್ಯಪ್ರಾಚ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜೂನ್ 14ರಂದು ಅರಬ್ಬಿ ಸಮುದ್ರದಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದ […]

Continue Reading

ಭಾರತ ಈಗ ಸೂಪರ್ ಎಕಾನಮಿ, 2031ಕ್ಕೆ ವಿಶ್ವದ ಟಾಪ್ 3 ದೇಶಗಳಲ್ಲಿ ಭಾರತ: ರಾಧಾ ಮೋಹನ್ ದಾಸ್ ಅಗರ್ವಾಲ್

ಮಂಗಳೂರು: ಜಾಗತಿಕ ಆರ್ಥಿಕ ಹಿಂಜರಿತ, ಇಂಧನ ಬಿಕ್ಕಟ್ಟು ಹಾಗೂ ವಿವಿಧ ಅಂತರ ರಾಷ್ಟ್ರೀಯ ಸಂಘರ್ಷಗಳ ನಡುವೆಯೂ ಭಾರತಶೇ 7.7 ರ ಆರ್ಥಿಕ ಬೆಳವಣಿಗೆ ದರವನ್ನು ಸಾಧಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಹಾಗೂ ಗೃಹ ಸಚಿವಾಲಯದ ಸ್ಥಾಯಿ ಸಮಿತಿ ಅಧ್ಯಕ್ಷ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 2013–14ರಲ್ಲಿ 1.9 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದ ಭಾರತ ಈಗ 4.1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆದಿದೆ. ಭಾರತದ […]

Continue Reading

ಮುಖ್ಯಮಂತ್ರಿ ಡಿಕೆಶಿ ನವದೆಹಲಿಯಲ್ಲಿ ಅಮಿತ್ ಶಾ ಭೇಟಿ; ಪೊಲೀಸ್ ಭದ್ರತಾ ಬಲಪಡಿಸಲು ಕೇಂದ್ರದ ನೆರವು ಕೋರಿಕೆ

ನವದೆಹಲಿ: ಮುಖ್ಯಮಂತ್ರಿ ದಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಕಾನೂನು ಸುವ್ಯವಸ್ಥೆ, ಭದ್ರತಾ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಸಂಬಂಧಿಸಿದ ಮಹತ್ವದ ಚರ್ಚೆ ನಡೆಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಅವರು ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರದ ಸಹಕಾರವನ್ನು ಕೋರಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಮತ್ತು ಸೈಬರ್ ಅಪರಾಧಗಳನ್ನು ನಿಯಂತ್ರಿಸುವ ಉದ್ದೇಶದಿಂದ ಸುಮಾರು […]

Continue Reading

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ, ಜೂನ್ 1 ರಿಂದಲೇ ಎಫೆಕ್ಟ್, ತಿಂಡಿ ಬೆಲೆ ಏರಿಕೆ ಸಾಧ್ಯತೆ!

ಬೆಂಗಳೂರು: ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆ ಬಿಸಿ ಮುಟ್ಟಲಿದೆ. 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂಪಾಯಿಗಳು ಹೆಚ್ಚಳ ಆಗಿದೆ. ಪರಿಷ್ಕೃತ ದರ ಜೂನ್ 1 ರಿಂದಲೇ ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂಪಾಯಿಗೆ ಏರಿಕೆ ಆಗಿದೆ. ಹೋಟೆಲ್, ರೆಸ್ಟೋರೆಂಟ್ ಮತ್ತು ಉದ್ಯಮಗಳಿಗೆ ಈ ದರ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ […]

Continue Reading

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ತೆರೆ: ಸರ್ಫಿಂಗ್ ಓಪನ್‌ನಲ್ಲಿ ಕಮಲಿ ಮೂರ್ತಿಗೆ ಡಬಲ್ ಕಿರೀಟ

ಮಂಗಳೂರು: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಅಂತಿಮ ದಿನ ತಮಿಳುನಾಡಿನ ಯುವ ಸರ್ಫರ್ ಕಮಲಿ ಮೂರ್ತಿ ಮಹಿಳೆಯರ ಓಪನ್ ಹಾಗೂ 18 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಡಬಲ್ ಸಾಧನೆ ಮಾಡಿದ್ದಾರೆ. ಪುರುಷರ ಓಪನ್ ವಿಭಾಗದಲ್ಲಿ ತಮಿಳುನಾಡಿನ ಕಿಶೋರ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, 18 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥ್ವೀಪ್ ಪೂಜಾರ್ ಗೆದ್ದು ಕರ್ನಾಟಕಕ್ಕೆ ಟೂರ್ನಿಯ ಏಕೈಕ ಪ್ರಶಸ್ತಿ ತಂದುಕೊಟ್ಟರು. 14 ವರ್ಷದೊಳಗಿನ (ಗ್ರೋಮ್ಸ್) ವಿಭಾಗದಲ್ಲಿ ಹರೀಶ್ ಪಿ ಮತ್ತು ಧಮಯಂತಿ […]

Continue Reading

ಬ್ಯಾಕ್ ಟು ಬ್ಯಾಕ್ ಆರ್ ಸಿಬಿ ಗೆಲುವಿನ ಪತಾಕೆ, ಐಪಿಎಲ್ ನಲ್ಲಿ ಮತ್ತೇ ಅಜೇಯ, ಕೊಹ್ಲಿ ಆಟಕ್ಕೆ ಪ್ರೇಕ್ಷಕರ ಪಿಧಾ

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈಗ ಸತತ 2 ನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಅಹಮದಾಬಾದ್‌ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್​​ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಸಲವೂ ಕಪ್ ನಮ್ಮದೇ ಎಂದು ಸಾರಿದ್ದ ಅಭಿಮಾನಿಗಳ ಸಂಭ್ರಮವೀಗ ಮುಗಿಲು ಮುಟ್ಟಿದೆ. ಆರ್​​ಸಿಬಿ ಜಯಭೇರಿ […]

Continue Reading