ಸೇವೆಯಲ್ಲಿ ಇರುವ ಶಿಕ್ಷಕರಿಗೂ ಟಿಇಟಿ ಕಡ್ಡಾಯ, ಮರುಪರಿಶೀಲನಾ ಅರ್ಜಿಗಳ ವಜಾ; 2028 ರ ಅಗಸ್ಟ್‌ 31 ರವರೆಗೆ ಸುಪ್ರೀಂ ಗಡುವು ವಿಸ್ತರಣೆ

ನವದೆಹಲಿ: ಸೇವೆಯಲ್ಲಿ ಇರುವ ಶಿಕ್ಷಕರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕಡ್ಡಾಯ ಎಂಬ ತನ್ನ ಹಿಂದಿನ ತೀರ್ಪ ಅನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಎತ್ತಿ ಹಿಡಿದಿದೆ. 2025ರ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ನ್ಯಾಯಾಲಯ, ಟಿಇಟಿ ಅರ್ಹತೆ ಪಡೆಯಲು ಶಿಕ್ಷಕರಿಗೆ 2028 ರ ಅಗಸ್ಟ್‌ 31 ರವರೆಗೆ ಕಾಲಾವಕಾಶ ನೀಡಿದೆ. ಮಕ್ಕಳ ಗುಣಮಟ್ಟದ ಶಿಕ್ಷಣದ ಹಕ್ಕು ಸಂರಕ್ಷಿಸುವ ದೃಷ್ಟಿಯಿಂದ ಟಿಇಟಿ ಅಗತ್ಯವಾಗಿದ್ದು, ನಿಗದಿತ ಅವಧಿಯೊಳಗೆ ಅರ್ಹತೆ ಪಡೆಯದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು ಅವಕಾಶವಿರುವುದಿಲ್ಲ ಎಂದು […]

Continue Reading

ತಣ್ಣೀರುಭಾವಿ: ಸರ್ಫಿಂಗ್ ಸ್ಪರ್ಧೆ ಸರ್ಫರ್‌ಗಳ ತೀವ್ರ ಹಣಾಹಣಿ; ‌ಕಮಲಿ ಮೂರ್ತಿ ಶುಭಾರಂಭದ ಮಿಂಚು

ಮಂಗಳೂರು: ಇಲ್ಲಿನ ನಗರದ ತಣ್ಣೀರುಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಆರಂಭವಾದ ಏಳನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ 2026ರ ಮೊದಲ ದಿನವೇ ದೇಶದ ಪ್ರಮುಖ ಸರ್ಫರ್‌ಗಳು ಅಲೆಗಳ ನಡುವೆ ರೋಮಾಂಚಕ ಪ್ರದರ್ಶನ ನೀಡಿದರು. ರಾಷ್ಟ್ರೀಯ ಚಾಂಪಿಯನ್‌ ಷಿಪ್ ಸರಣಿ ಪ್ರಮುಖ ಹಂತ ಆಗಿರುವ ಈ ಟೂರ್ನಿ, ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವ ಪಡೆದಿದ್ದು, ಉತ್ತಮ ಹವಾಮಾನ ಹಾಗೂ ಅಬ್ಬರದ ಅಲೆಗಳ ನಡುವೆ ಸ್ಪರ್ಧೆಗಳು ಆರಂಭಗೊಂಡವು. ಮಹಿಳೆಯರ ಮುಕ್ತ ವಿಭಾಗದಲ್ಲಿ ಕಮಲಿ […]

Continue Reading

ಮಂಗಳೂರಿನಲ್ಲಿ ಬ್ರಹ್ಮಸ್ಥಾನಂ ಮಹೋತ್ಸವ, ಅಮ್ಮನ ದರ್ಶನ ಪಡೆದ ಭಕ್ತರ ಪುಳಕ, ವಿವಿಧ ಸಮಾಜಮುಖಿ ಕಾರ್ಯಗಳಿಗೆ ಚಾಲನೆ

ಮಂಗಳೂರು: ಮಕ್ಕಳಲ್ಲಿ ಪ್ರಕೃತಿ, ಸಕಲ ಜೀವಿಗಳು ಹಾಗೂ ಮಾನವ ಸಮುದಾಯದೊಂದಿಗೆ ಸಹಬಾಳ್ವೆ ನಡೆಸುವ ಮನೋಭಾವ ಬೆಳೆಸಬೇಕು ಎಂದು ಮಾತಾ ಅಮೃತಾನಂದಮಯಿ ದೇವಿ ಅವರು ಹೇಳಿದರು. ಮಂಗಳೂರಿನ ಬೋಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದ ಬ್ರಹ್ಮಸ್ಥಾನಂ ಮಹೋತ್ಸವದಲ್ಲಿ ಭಕ್ತರನ್ನು ಉದ್ದೇಶಿಸಿ ಅವರು ಮಾತನಾಡಿ, ಮಾನವರು ಪರಸ್ಪರ ಸಹಕಾರದಿಂದ ಬದುಕುವುದನ್ನು ಕಲಿಯಬೇಕು. ಜತೆಗೆ ಪ್ರಕೃತಿಯೊಂದಿಗೆ ಸ್ನೇಹಭಾವ ಮತ್ತು ದೇವರೊಂದಿಗೆ ಆಧ್ಯಾತ್ಮಿಕ ಸಂಪರ್ಕ ಬೆಳೆಸಿಕೊಳ್ಳಬೇಕು ಎಂದರು. ಕೋವಿಡ್ ಮಹಾಮಾರಿ, ಪ್ರಕೃತಿ ವಿಕೋಪಗಳು ಹಾಗೂ ಹವಾಮಾನ ಬದಲಾವಣೆಗಳು ಮಾನವಕುಲವು ಪ್ರಕೃತಿಯೊಂದಿಗಿನ ತನ್ನ ಸಂಬಂಧವನ್ನು […]

Continue Reading

ನಾನೇ ರಾಜೀನಾಮೆ ನೀಡಿದ್ದೇನೆ, ಯಾವುದೇ ಒತ್ತಡ ಇಲ್ಲ, ಹೈಕಮಾಂಡ್ ಹೇಳಿದಂತೆ ನಡೆದುಕೊಂಡಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜಕೀಯ ಹೈಡ್ರಾಮಾದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದು, ನಾನೇ ಸ್ವಯಂ ಆಗಿ ಹೈಕಮಾಂಡ್ ನಿರ್ದೇಶನದ ಮೇಲೆ ರಾಜೀನಾಮೆ ನೀಡಿದ್ದೇನೆ. ಇಲ್ಲಿ ಯಾರ ಒತ್ತಡವು ಇಲ್ಲ, ಹೈಕಮಾಂಡ್ ಅವರು ಹೇಳಿದಾ‌ಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ ಅದರಂತೆ ನಡೆದುಕೊಂಡಿದ್ದೇನೆ, ಇದರಲ್ಲಿ ಯಾವುದೇ ಬೇಸರ, ಒತ್ತಡ ಇಲ್ಲ ಎಂದು ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಸುಧೀರ್ಘವಾಗಿ ಮುಖ್ಯಮಂತ್ರಿ ಆಗಿ, ವಿರೋಧ ಪಕ್ಷದ […]

Continue Reading

ಡಿಕೆಶಿಯತ್ತ ವಾಲಿದ ಕಾಂಗ್ರೆಸ್ ಶಾಸಕರು? ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜಕೀಯ ಲೆಕ್ಕಾಚಾರ ಜೋರು, ಖಾದರ್ ಗೆ ಡಿಸಿಎಂ ಸ್ಥಾನ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರವಾಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಹಲವರು ಇದೀಗ ಡಿ.ಕೆ. ಶಿವಕುಮಾರ್ ಬಣದತ್ತ ಮುಖ ಮಾಡುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿವೆ. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಪರವಾಗಿ ಕೆಲ ಹಿರಿಯ ಶಾಸಕರು ಹಾಗೂ ಸಚಿವರು ಮಾತ್ರ ಉಳಿದಿದ್ದು, ಡಿ.ಕೆ. ಶಿವಕುಮಾರ್ ಪರವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಡಿಕೆ ಶಿವಕುಮಾರ್ […]

Continue Reading

ಧರ್ಮಶಾಲಾ: ಐಪಿಎಲ್ ಟೂರ್ನಿಯಲ್ಲಿ ದಾಖಲೆ ಬರೆದ ಆರ್ ಸಿಬಿ, ಫೈನಲ್ ಗೆ ಲಗ್ಗೆ, ಗುಜರಾತ್ ಹೀನಾಯ ಸೋಲು

ಧರ್ಮಶಾಲಾ: ಐಪಿಎಲ್–2026ರ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಬ್ಬರದ ಬ್ಯಾಟಿಂಗ್, ಸಂಘಟಿತ ಆಟಕ್ಕೆ ಅಕ್ರಮಣಕಾರಿ ಬೌಲಿಂಗ್ ದಾಳಿಗೆ ಗುಜರಾತ್ ಟೈಟಾನ್ಸ್ ತಂಡವು ಹೀನಾಯ ಸೋಲು ಕಂಡಿದೆ. ಆರ್ ಸಿಬಿ ತಂಡ ಸತತ ಎರಡನೇ ಬಾರಿ ಫೈನಲ್‌ ಗೆ ಲಗ್ಗೆ ಇಟ್ಟಿದೆ. ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯಲ್ಲಿ 255 ರನ್ ಗಳ ಬೃಹತ್ ಮೊತ್ತದ ದಾಖಲಿಸಿದ ಆರ್ ಸಿಬಿ ತಂಡದ ಬ್ಯಾಟಿಂಗ್ ಮುಂದೆ ಗುಜರಾತ ಟೈಟನ್ಸ ಬ್ಯಾಟಿಂಗ್ ಹಾಗೂ ಬೌಲರ್ ಗಳು ತತ್ತರಿಸಿದರು. 19.3 […]

Continue Reading

ರಾಜಧಾನಿಯಲ್ಲಿ ಸಿಎನ್‌ಜಿ ಬೆಲೆ ಏರಿಕೆ, ಕೆ.ಜಿಗೆ 2 ರೂಪಾಯಿಗೆ ಏರಿಕೆ, 4ನೇ ಬಾರಿ ಹೆಚ್ಚಳ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸಿಎನ್‌ಜಿ ಬೆಲೆಯನ್ನು ಕೆ.ಜಿಗೆ 2 ರೂಪಾಯಿ ಏರಿಸಿದ್ದು, ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ನಾಲ್ಕನೇ ಬಾರಿ ಹೆಚ್ಚಳ ಆಗಿದೆ. ಸಿಎನ್‌ಜಿಗೆ ಈಗ ಪ್ರತಿ ಕೆ.ಜಿಗೆ 83.09 ರೂ. ಇದೆ. ಮೇ 15 ರ ನಂತರ ಒಟ್ಟಾರೆ ಪ್ರತಿ ಕೆಜಿಗೆ 4 ರೂಪಾಯಿ ಬೆಲೆ ಏರಿಕೆ ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಇಂಧನ ಬೆಲೆಗಳು ಮತ್ತೆ ಏರುಗತಿಯಲ್ಲಿ ಸಾಗುತ್ತಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ 2.61 ರೂ ಮತ್ತು 2.71 ರೂಪಾಯಿಗಳಷ್ಟು […]

Continue Reading

ಮೇ 28, 29 ರಂದು ಅಮೃತಸಂಗಮ, ತುಳುನಾಡಿಗೆ ಮಾತಾ ಅಮೃತಾನಂದಮಯಿ: ಸುರೇಶ್ ಅಮೀನ್

ಮಂಗಳೂರು: ಇದೇ 28 ಮತ್ತು 29 ರಂದು ಬೋಳೂರಿನ ಅಮೃತ ವಿದ್ಯಾಲಯಂ ಶಾಲಾ ಮೈದಾನದಲ್ಲಿ ಅಮೃತಸಂಗಮ 2026 ಮತ್ತು 25 ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಸಕಲ ಪೂರ್ವ ಸಿದ್ಧತೆಗಳು ನಡೆಯುತ್ತಿದ್ದು, ಮಾತಾ ಅಮೃತಾನಂದಮಯಿ ದೇವಿ (ಅಮ್ಮ) 7 ವರ್ಷಗಳ ನಂತರ ಕರಾವಳಿ ನಗರಿ ಮಂಗಳೂರಿಗೆ ಭಕ್ತರಿಗೆ ದರ್ಶನ ನೀಡುವುದಕ್ಕೆ ಬರುತ್ತಿರುವುದು ಭಕ್ತರ ಸಂಭ್ರಮಕ್ಕೆ ಕಾರಣವಾಗಿದೆ. ಸುಮಾರು 50 ರಿಂದ 75 ಸಾವಿರ ಮಂದಿ ಭಕ್ತರು ಸೇರುವ ನಿರೀಕ್ಷೆ ಇದೆ ಎಂದು ಮಾತಾ ಅಮೃತಾನಂದಮಯಿ ಸೇವಾ […]

Continue Reading

ಯುಡಿಎಫ್ ಸರಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ, ಹಣಕಾಸು ಸಿಎಂ ಸತೀಶನ್ ಕೈಯಲ್ಲಿ

ತಿರುವನಂತಪುರಂ: ಕೇರಳದಲ್ಲಿ ಅಧಿಕಾರದ ಚುಕ್ಕಾಣೆ ಹಿಡಿದಿರುವ ಯುಡಿಎಫ್ ಸರ್ಕಾರವು ನೂತನ ಸಚಿವ ಸಂಪುಟಕ್ಕೆ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅಸ್ತು ಎಂದಿದ್ದಾರೆ. ಸಿಎಂ ಸಂಪುಟ ಖಾತೆಗಳನ್ನು ಹಂಚಿಕೆ ಮಾಡಿ ರಾಜ್ಯಪಾಲರಿಂದ ಅನುಮೋದನೆ ಪಡೆದಿದ್ದಾರೆ. ‌ ವಿ. ಡಿ. ಸತೀಶನ್ (ಮುಖ್ಯಮಂತ್ರಿ): ಹಣಕಾಸು, ಕಾನೂನು, ಕೇರಳ ಫೈನಾನ್ಷಿಯಲ್ ಕಾರ್ಪೊರೇಷನ್, ಬಂದರ್, ಮಾಲಿನ್ಯ ನಿಯಂತ್ರಣ, ವಿಮಾನ ನಿಲ್ದಾಣಗಳು, ಮೆಟ್ರೋ ರೈಲು, ರೈಲ್ವೆ ಮತ್ತು ಇತರೆ ಉಳಿದಿರುವ ಖಾತೆ ರಮೇಶ್ ಚೆನ್ನಿತ್ತಲ: ಗೃಹ ಇಲಾಖೆ, ವಿಜಿಲೆನ್ಸ್, ಅಗ್ನಿಶಾಮಕ ಮತ್ತು ತುರ್ತು ಸೇವೆ, ಕಾರಾಗೃಹ […]

Continue Reading

ಡಿಎಂಕೆ ಮುಖ್ಯಸ್ಥ, ಮಾಜಿ ಸಿಎಂ ಸ್ಟಾಲಿನ್ ಭೇಟಿ ಮಾಡಿದ ಸಿಎಂ ವಿಜಯ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸೋಮವಾರ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈ ಅಲ್ವಾರ್‌ಪೇಟೆಯಲ್ಲಿ ಇರುವ ನಿವಾಸದಲ್ಲಿ ಭೇಟಿ ಮಾಡಿದರು. ವಿಧಾನಸಭಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಇಬ್ಬರು ನಾಯಕರು ಮುಖಾಮುಖಿ ಆಗಿರುವುದು ತೀವ್ರ ರಾಜಕೀಯಕ್ಕೆ ಗ್ರಾಸವಾಯಿತು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಜಯ್ ಅವರು ಸ್ಟಾಲಿನ್ ಅವರನ್ನು ಭೇಟಿ ಮಾಡಿದರು. ಸೋಮವಾರ ಮೊದಲ ವಿಧಾನಸಭಾ ಅಧಿವೇಶನದ ನಂತರ ಈ ಭೇಟಿ ನಡೆದಿರುವುದು ರಾಜಕೀಯ ಕುತೂಹಲಕ್ಕೆ ಕಾರಣ […]

Continue Reading